ಕೋಲಾರ, ಆಗಸ್ಟ್ 23 :ಸಾಮಾಜಿಕ ನ್ಯಾಯದ ಹರಿಕಾರ, ಹಿಂದುಳಿದ ವರ್ಗಗಳ ನೇತಾರ, ಕರ್ನಾಟಕ ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ ಅರಸು ಅವರ ಜನ್ಮದಿನಾಚರಣೆಯ ಅಂಗವಾಗಿ ಪಲ್ಲಕ್ಕಿಗಳ ಮೆರವಣ ಗೆಗೆ ಜಿಲ್ಲಾಧಿಕಾರಿ ಡಾ.ಕೆ.ವಿ.ತ್ರಿಲೋಕ್ ಚಂದ್ರ ಅವರು ಚಾಲನೆ ನೀಡಿದರು. ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಬಿ.ಕಾವೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪಿ.ಸೀನ ಅವರು ಇದಕ್ಕೆ ಸಾಕ್ಷಿಯಾದರು.
ಡಿ.ದೇವರಾಜ ಅರಸು ಅವರ ಭಾವಚಿತ್ರಕ್ಕೆ ಅಧಿಕಾರಿಗಳು ಪುಷ್ಪನಮನ ಸಲ್ಲಿಸಿದರು. ಅದರಂತೆ ಪಲ್ಲಕ್ಕಿಗಳ ಮೆರವಣ ಗೆಯು ರೈಲ್ವೇಸ್ಟೇಷನ್ ಬಳಿಯಿಂದ ಪ್ರಾರಂಭಗೊಂಡು ನಗರದ ಪ್ರಮುಖ ರಸ್ತೆಗಳ ಮೂಲಕ ಟಿ.ಚನ್ನಯ್ಯ ರಂಗಮಂದಿರ ತಲುಪಿತು. ಮೆರವಣ ಗೆಗೆ ವಿವಿಧ ಕಲಾತಂಡಗಳು ಮೆರುಗನ್ನು ನೀಡಿದವು. ಈ ಮೆರವಣ ಗೆಯಲ್ಲಿ ಜನಪ್ರತಿನಿಧಿಗಳು, ಸಂಘ ಸಂಸ್ಥೆಯ ಮುಖ್ಯಸ್ಥರು, ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.