ಕೋಲಾರ, ಜುಲೈ 24 :ಮೇವು ಬೆಳೆ ಆಂದೋಲನದಡಿ ಜಿಲ್ಲೆಯಲ್ಲಿ ಮೇವನ್ನು ಬೆಳೆಸಲಾಗಿದ್ದು ಜಾನುವಾರುಗಳಿಗೆ 9 ವಾರಗಳಿಗೆ ಆಗುವಷ್ಟು ಮೇವು ಲಭ್ಯವಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ತ್ರಿಲೋಕ್ ಚಂದ್ರ ಅವರು ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಂಗಣ ಸಭಾಂಗಣದಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಬರ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಳೆಯ ಕೊರತೆ ಇರುವುದರಿಂದ ಮೇವಿಗೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಕ್ರಮವಹಿಸಬೇಕು. ನೀರಾವರಿ ಇರುವ ರೈತರ ಮನವೊಲಿಸಿ ಮೇವು ಬೆಳೆಸಲು ಹೆಚ್ಚು ಕಾಳಜಿಯನ್ನು ವಹಿಸಬೇಕು. ರೈತರಿಗೆ ಅವಶ್ಯಕ ಮಿನಿಕಿಟ್ಗಳನ್ನು ಪಶುಸಂಗೋಪನೆ ಇಲಾಖೆ ಮತ್ತು ಹಾಲು ಒಕ್ಕೂಟದ ಮೂಲಕ ವಿತರಣೆ ಮಾಡಲು ಸೂಚನೆ ನೀಡಿದರು.
ಜಿಲ್ಲೆಯಲ್ಲಿ 2,08,519 ಜಾನುವಾರುಗಳಿವೆ. ಇವುಗಳಿಗೆ 60 ದಿನಗಳಿಗೆ 1,87,665 ಟನ್ ಮೇವಿನ ಅವಶ್ಯಕತೆ ಇದೆ. ಈ ಮೇವನ್ನು 12,508 ಎಕರೆಯಲ್ಲಿ ಬೆಳೆಯಬೇಕಾಗಿದೆ. ಈಗಾಗಲೇ ಜಿಲ್ಲೆಯಲ್ಲಿ ಸುಮಾರು 28,298 ಎಕರೆಯಲ್ಲಿ ಮೇವು ಬೆಳೆಯಲಾಗಿದೆ. ಈ ಪೈಕಿ ರೈತರ ಸ್ವಂತ ಜಮೀನಿನಲ್ಲಿ 11,338 ಎಕರೆಯಲ್ಲಿ ಮತ್ತು ಎಂ.ಪಿ.ಸಿ.ಎಸ್ಗಳ ಮೂಲಕ 16,960 ಎಕರೆಯಲ್ಲಿ ಮೇವು ಬೆಳೆಯಲಾಗಿದೆ ಎಂದರು.
ಮೇವು ಬೆಳೆಯಲು ಭಿತ್ತನೆಗೆ ಸುಮಾರು 1463 ಎಕರೆಯನ್ನು ಗುರುತಿಸಲಾಗಿದೆ. ಅದರಂತೆ 17,572 ಎಕರೆಯಲ್ಲಿ ಮೇವು ಕಟಾವು ಆಗಿದ್ದು, 907 ಎಕರೆಯಲ್ಲಿ ಕಟಾವು ಆಗುತ್ತಿದೆ. ಸುಮಾರು 1005 ಎಕರೆಯಲ್ಲಿ ಮೇವು ಕಟಾವಿಗೆ ತಯಾರಾಗಿದೆ. ಈ ವಾರದಲ್ಲಿ 1174 ಎಕರೆ ಕಟಾವಾಗಿದೆ ಎಂದು ತಿಳಿಸಿದರು.
ಮೇವು ಬೆಳೆಯಲು ಮಿನಿಕಿಟ್ಗಳಿಗೆ ಡಿಮೆಂಡ್ ಹೇಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಶ್ನಿಸಿದಾಗ ಇದಕ್ಕೆ ಪ್ರತಿಕ್ರಿಯಿಸಿದ ಹಾಲು ಒಕ್ಕೂಟದ ಶ್ರೀನಿವಾಸಗೌಡ ಅವರು, ಸದ್ಯದ ಪರಿಸ್ಥಿತಿಯಲ್ಲಿ ರೈತರು ಟೊಮೆಟೋ ಬೆಳೆಗೆ ಮಾರು ಹೋಗುತ್ತಿದ್ದಾರೆ. ಮೇವು ಬೆಳೆದು ಕೊಡಲು ಮುಂದೆ ಬರುತ್ತಿಲ್ಲ ಎಂದು ಮಾಹಿತಿ ನೀಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಡಾ.ಕೆ.ವಿ.ತ್ರಿಲೋಕ್ ಚಂದ್ರ, ಟೊಮೆಟೋ ಬೆಲೆ ಇದೆ ಎಂದು ಎಲ್ಲರೂ ಅತ್ತ ಮುಖ ಮಾಡಿರುತ್ತಾರೆ. ಹಾಗಾಗಿ ರೈತರಿಗೆ ಮೇವು ಬೆಳೆಯಲು ಉತ್ತೇಜನ ನೀಡಿ. ಅವಶ್ಯಕತೆ ಇರುವವರಿಗೆ ನೀರಾವರಿ ಇರುವುದನ್ನು ಗುರುತಿಸಿ ಮಿನಿಕಿಟ್ಗಳನ್ನು ವಿತರಣೆ ಮಾಡಿ ಎಂದು ಸೂಚಿಸಿದರು.
ನಂತರ ಹಾಲು ಒಕ್ಕೂಟದಿಂದ ರೈತರಿಗೆ ಯಾವ ರೀತಿಯಾಗಿ ಮಿನಿಕಿಟ್ಗಳನ್ನು ವಿತರಣೆ ಮಾಡುತ್ತಿದ್ದೀರಿ? ಎಷ್ಟು ಬೆಲೆಗೆ ರೈತರಿಗೆ ನೀಡುತ್ತಿದ್ದೀರಿ ಎಂದು ಪಶ್ನಿಸಿದರು. ಇದಕ್ಕೆ ಹಾಲು ಒಕ್ಕೂಟದ ಉಪ ವ್ಯವಸ್ಥಾಪಕಿ ವಿಜಯಲಕ್ಷ್ಮೀ ಅವರು ಉತ್ತರಿಸಿ, ಎಂ.ಪಿ.ಸಿ.ಎಸ್ ಮೂಲಕ ರೈತರಿಗೆ ರಿಯಾಯಿತಿ ಧರದಲ್ಲಿ ಮಿನಿಕಿಟ್ಗಳನ್ನು ವಿತರಿಸಲಾಗುತ್ತಿದೆ.
ಮಿನಿಕಿಟ್ಗಳನ್ನು ಶೇ.50 ರಷ್ಟು ರಿಯಾಯಿತಿ ಧರದಲ್ಲಿ ರೈತರಿಗೆ ವಿತರಣೆ ಮಾಡಲಾಗುತ್ತಿದೆ. ಎಸ್ಎಸ್ಜಿ ಯು ಒಂದು ಕೆ.ಜಿ.ಗೆ 42 ರೂಗಳಾಗಿದ್ದು ರಿಯಾಯಿತಿ ಹೋಗಿ ರೈತರಿಗೆ 21 ರೂ ವೆಚ್ಚವಾಗಲಿದೆ. ಅದೇ ರೀತಿ ಎ.ಟಿ.ಎಂ. ಜೋಳವು ಒಂದು ಕೆ.ಜಿ.ಗೆ 39 ರೂಗಳಾಗಿದ್ದು ರಿಯಾಯಿತಿ ಹೋಗಿ ರೈತರಿಗೆ 19.5 ರೂ ಗೆ ನೀಡುತ್ತಿದ್ದೇವೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಬಿ.ಕಾವೇರಿ, ಅಪರ ಜಿಲ್ಲಾಧಿಕಾರಿ ಕೆ.ವಿದ್ಯಾಕುಮಾರಿ, ನೋಡಲ್ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
Read These Next
ಪ್ರಧಾನಿ ನರೇಂದ್ರ ಮೋದಿ ಅವರಿಂದ ಹಸಿ ಸುಳ್ಳು : ಸಿ lಎಂ ಸಿದ್ದರಾಮಯ್ಯ ಆರೋಪ
ಬೆಂಗಳೂರು : ಹಿಂದುಳಿದ ಜಾತಿ ಮತ್ತು ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಮರಿಗೆ ನೀಡಲು ಕಾಂಗ್ರೆಸ್ ಹೊರಟಿದೆ ಎಂದು ಪ್ರಧಾನಿ ...
ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ
ಬೀದರ್ : ಅಧಿಕಾರ, ಅವಕಾಶ, ಸಂಪತ್ತು ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...
ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು
ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...
ಸುಗಮ ಮತ್ತು ಶಾಂತಿಯುತ ಮತದಾನಕ್ಕೆ ಅಗತ್ಯವಾದ ಕ್ರಮಕ್ಕೆ ಸೂಚನೆ : ಪೂನಂ
ಶಿವಮೊಗ್ಗ : ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಸುಗಮ ಮತ್ತು ಶಾಂತಿಯುತ ಮತದಾನ ನಡೆಯಲು ಅಗತ್ಯವಾದ ಎಲ್ಲ ...
ಬಳ್ಳಾರಿ ಲೋಕಸಭಾ ಚುನಾವಣೆ: ಅಂತಿಮ ಕಣದಲ್ಲಿ 10 ಅಭ್ಯರ್ಥಿಗಳು.
ಬಳ್ಳಾರಿ : 09-ಬಳ್ಳಾರಿ (ಪ.ಪಂ) ಲೋಕಸಭಾ ಚುನಾವಣೆಗೆ ಸಲ್ಲಿಕೆಯಾಗಿದ್ದ ನಾಮಪತ್ರಗಳನ್ನು ಹಿಂಪಡೆಯುವ ದಿನವಾದ ಸೋಮವಾರದಂದು, ಓರ್ವ ...
ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ
ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...
ಪದವಿಧರ ಕ್ಷೇತ್ರ ಚುನಾವಣೆ: ಸಂಚಾರಿ ವಿಚಕ್ಷಣಾ ತಂಡಗಳ ರಚನೆ
ಧಾರವಾಡ : ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ ಅಕ್ಟೋಬರ್ 28 ರಂದು ನಡೆಯುವ ಹಿನ್ನೆಲೆಯಲ್ಲಿ ಸಮಾಜ ...
ಪ್ರಜಾಸತ್ತೆಯ ಬಂಧನ!
ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...
ಚಿಂದಿ ಆಯುವ ಹಕ್ಕು
ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...
ಜಿದ್ದಾ: ಐಎಫ್ಎಫ್ ಕುಟುಂಬ ಸಮ್ಮಿಲನ “ ಸಂಭ್ರಮ-2019” ವಿಜೃಂಭಣೆಯಿಂದ ಸಂಭ್ರಮಿಸಿದ ಅನಿವಾಸಿ ಕನ್ನಡಿಗರು
ಜಿದ್ದಾ: ಐಎಫ್ಎಫ್ ಕುಟುಂಬ ಸಮ್ಮಿಲನ “ ಸಂಭ್ರಮ-2019” ವಿಜೃಂಭಣೆಯಿಂದ ಸಂಭ್ರಮಿಸಿದ ಅನಿವಾಸಿ ಕನ್ನಡಿಗರು.
’ದಲಿತ’ ಪದವನ್ನು ’ಪರಿಶಿಷ್ಟ ಜಾತಿ’ ಎಂಬ ಅರ್ಥಕ್ಕೆ ಸೀಮಿತಗೊಳಿಸಬಾರದು
ಕೇಂದ್ರದ ಮಾಹಿತಿ ಮತ್ತು ಪ್ರಸಾರ ಇಲಾಖೆಯು ಇನ್ನು ಮುಂದೆ ಮಾಧ್ಯಮಗಳು ದಲಿತ ಎಂಬ ಪದವನ್ನು ಬಳಸಬಾರದೆಂದು ಇತ್ತೀಚೆಗೆ ಸಲಹಾತ್ಮಕ ...
ನಿಜಕ್ಕೂ ಸಾದಿಯಾ ಯಾರು?
ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...