ಕೋಲಾರ:ನಾಗರಾಜ್ ಅವರ ಜಾಗೃತಿ ಗೀತೆಗಳ ಕೃತಿ ಬಿಡುಗಡೆ-ಸಾಹಿತ್ಯ ರಾಷ್ಟ್ರಭಕ್ತಿ ಮೂಡಿಸುವಂತಿರಲಿ-ರಘುನಾಥರೆಡ್ಡಿ

Source: shabbir | By Arshad Koppa | Published on 29th July 2017, 1:29 PM | State News | Guest Editorial |

ಕೋಲಾರ:- ಸಾಹಿತ್ಯ ರಚನೆ ಮಕ್ಕಳಲ್ಲಿ ರಾಷ್ಟ್ರಭಕ್ತಿ ಮೂಡಿಸುವ ಮತ್ತು ಸಾಮಾಜಿಕ ಬದುಕಿನಲ್ಲಿ ಸಹನೆ,ಸೌಹಾರ್ದತೆಯಿಂದ ಸಾಗುವ ಕುರಿತು ಜಾಗೃತಿ ಮೂಡಿಸುವಂತಿರಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ರಘುನಾಥರೆಡ್ಡಿ ತಿಳಿಸಿದರು.


ತಮ್ಮ ಕಚೇರಿಯಲ್ಲಿ ದಲಿತ ಸಾಹಿತ್ಯ ಪರಿಷತ್ ಅಧ್ಯಕ್ಷ ತಿಮ್ಮಸಂದ್ರ ನಾಗರಾಜ್ ಸಂಗ್ರಹಿಸಿದ ಜಾಗೃತಿ ಗೀತೆಗಳ ಕೃತಿ ಬಿಡುಗಡೆ ಮಾಡಿ ಅವರು ಮಾತನಾಡುತ್ತಿದ್ದರು.
ಮಕ್ಕಳಲ್ಲಿ ಕಲೆ,ಸಾಹಿತ್ಯಾಭಿರುಚಿ ಬೆಳೆಸುವ ಕೆಲಸವನ್ನು ಶಿಕ್ಷಕರು ಮಾಡಬೇಕು ಎಂದ ಅವರು, ಅನೇಕ ಮಕ್ಕಳಲ್ಲಿ ಚಿಕ್ಕವಯಸ್ಸಿನಲ್ಲೇ ಸಾಹಿತ್ಯ ರಚಿಸುವ ಪ್ರತಿಭೆ ಇರುತ್ತದೆ, ಅದನ್ನು ಹೊರತರಬೇಕೆಂದರು.
ತಿಮ್ಮಸಂದ್ರ ನಾಗರಾಜ್ ಅವರು ಸಂಗ್ರಹಿಸಿ ಹೊರ ತಂದಿರುವ ಜಾಗೃತಿ ಕೃತಿಯಲ್ಲಿನ ಅನೇಕ ಗೀತೆಗಳು ಸಾಮಾಜಿಕ ನ್ಯಾಯಕ್ಕಾಗಿ ಜಾಗೃತಿ ಮೂಡಿಸುವ ಶಕ್ತಿ ಹೊಂದಿವೆ ಎಂದರು.
ಗ್ರಾಮೀಣರ ಬದುಕಿನಲ್ಲಿ ಕಷ್ಟದ ಕೆಲಸಗಳ ನಡುವೆ ಸ್ವಾಭಾವಿಕವಾಗಿಯೇ ಮೂಡಿ ಬಂದ ಅನೇಕ ಜಾನಪದ ಗೀತೆಗಳು ಇಂದು ಮರೆಯಾಗುತ್ತಿವೆ, ಇದನ್ನು ಸಂಗ್ರಹಿಸಿ ಉಳಿಸುವ ಕೆಲಸವನ್ನು ಮಾಡಿ ಎಂದು ಸಲಹೆ ನೀಡಿದರು.
ತಿಮ್ಮಸಂದ್ರ ನಾಗರಾಜ್ ಮಾತನಾಡಿ, ಜಾಗೃತಿ ಕೃತಿಯಲ್ಲಿ ಸಂಗ್ರಹಿಸಿರುವ ಗೀತೆಗಳು ಅಸ್ಪøಶ್ಯತೆ ವಿರುದ್ದ ಹೋರಾಡುವ, ಅನ್ಯಾಯದ ವಿರುದ್ದ ತಲೆಯೆತ್ತಿ ನಿಲ್ಲುವ ಜಾಗೃತಿಯೊಂದಿಗೆ ಸಾಮಾಜಿಕ ನ್ಯಾಯಕ್ಕೆ ಆಗ್ರಹಿಸುವುದಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಬಿಇಒ ಕಚೇರಿ ವ್ಯವಸ್ಥಾಪಕ ಕೆ.ಎಂ.ಮುನಿಸ್ವಾಮಿಗೌಡ, ಅಧೀಕ್ಷಕ ನಾರಾಯಣಸ್ವಾಮಿ, ವೆಂಕಟರಮಣಪ್ಪ, ಇಲಾಖೆಯ ಶ್ರೀನಿವಾಸಮೂರ್ತಿ, ಶಿಕ್ಷಕ ಶ್ರೀನಿವಾಸ್, ಸುಬ್ರಮಣಿ,ಗಿರೀಶ್ ಮತ್ತಿತರರಿದ್ದರು.ವರದಿ: ಮೊಹಮ್ಮದ್ ಶಬ್ಬೀರ್, ಶ್ರೀನಿವಾಸಪುರ

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಅವಧಿ ಉಲ್ಲೇಖಿಸದೇ ಪ್ರಜ್ವಲ್ ರೇವಣ್ಣ ಜೆಡಿಎಸ್‌ನಿಂದ ಅಮಾನತು

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಪ್ರಕರಣ ಸಂಬಂಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ರೇವಣ್ಣ, ಪ್ರಜ್ವಲ್ ಉಚ್ಚಾಟನೆಗೆ ಜೆಡಿಎಸ್ ಶಾಸಕರ ಪಟ್ಟು

ರಾಜ್ಯದ ಜನತೆಯ ಮುಂದೆ ತಲೆ ತಗ್ಗಿಸುವಂತಹ ಕೆಲಸ ಮಾಡಿದವರನ್ನು ರಾಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಘನತೆಯನ್ನು ಉಳಿಸಬೇಕಿದೆ ಎಂದು ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ: ಕುಮಾರಸ್ವಾಮಿ

ಜೆಡಿಎಸ್ ಸಂಸದ ಪ್ರಜಿ ಕುಮಾರಸ್ವಾಮಿ ಡ್ರೈವ್ ಪ್ರಕರಣದಲ್ಲಿ ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ' ಎಂದು ಮಾಧ್ಯಮಗಳ ಮುಂದೆ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ತ್ವರಿತಗತಿಯಲ್ಲಿ ತನಿಖೆ ನಡೆಸಿ, ವರದಿ ಸಲ್ಲಿಸಲು ಸೂಚನೆ: ಪರಮೇಶ್ವ‌ರ್

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ, ವರದಿ ಸಲ್ಲಿಸುವಂತೆ ...

ಪ್ರಜಾಸತ್ತೆಯ ಬಂಧನ!

ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...

ಚಿಂದಿ ಆಯುವ ಹಕ್ಕು

ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...