ಕೋಲಾರ: ಪತ್ರಿಕೋದ್ಯಮ ಸ್ನಾನತಕೋತ್ತರ ಪದವೀಧರರಿಗೆ ತರಬೇತಿ

Source: shabbir | By Arshad Koppa | Published on 22nd August 2017, 8:39 AM | State News | Guest Editorial |

ಕೋಲಾರ, ಆಗಸ್ಟ್ 21:    ಕರ್ನಾಟಕ ಮಾಧ್ಯಮ ಅಕಾಡೆಮಿಯು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಉಪಯೋಜನೆಯಡಿಯಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಐದು ಮಂದಿಗೆ ಹಾಗೂ ಇತರೆ ವರ್ಗಗಳ ಐದು ಮಂದಿಗೆ ಪ್ರಮುಖ ದಿನಪತ್ರಿಕೆ/ ವಿದ್ಯುನ್ಮಾನ ಮಾಧ್ಯಮಗಳ ಕಚೇರಿಯಲ್ಲಿ ತರಬೇತಿ ನೀಡಲಾಗುವುದು. 
    ಆಯ್ಕೆಯನ್ನು ಮೆರಿಟ್ ಆಧಾರದ ಮೇಲೆ ಮಾಡಲಾಗುತ್ತದೆ. ಅಭ್ಯರ್ಥಿಗಳು 28 ವರ್ಷದೊಳಗಿನವರಾಗಿರಬೇಕು. ತರಬೇತಿ ಅವಧಿಯು 10 ತಿಂಗಳಾಗಿದ್ದು ಈ ಅವಧಿಯಲ್ಲಿ ತಲಾ ಮಾಸಿಕ 10 ಸಾವಿರ ರೂಗಳ ಗೌರವಧನ ನೀಡಲಾಗುವುದು. 
    ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ಸ್ವ ವಿವರ, ವಿದ್ಯಾರ್ಹತೆ ಪತ್ರಗಳು, ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ ಮತ್ತು ಛಾಯಾಚಿತ್ರಗಳನ್ನು ಸ್ಕ್ಯಾನ್ ಮಾಡಿ ಇ-ಮೇಲ್ ವಿಳಾಸ [email protected] ಮೂಲಕ ಅಥವಾ ಪೋಡಿಯಂ ಬ್ಲಾಕ್, ವಿಶ್ವೇಶ್ವರಯ್ಯ ಕೇಂದ್ರ, ಡಾ.ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು-56001 ಈ ವಿಳಾಸಕ್ಕೆ ಅಂಚೆ ಮೂಲಕ ದಿನಾಂಕ:31-08-2017ರೊಳಗಾಗಿ ಸಲ್ಲಿಸಬಹುದಾಗಿದೆ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾದ ಎಂ.ಸಿದ್ದರಾಜು ಅವರು ತಿಳಿಸಿದ್ದಾರೆ. 

ನಾಗರೀಕ ಬಂದೂಕು ತರಬೇತಿಗೆ ಅರ್ಜಿ ಆಹ್ವಾನ
ಕೋಲಾರ, ಆಗಸ್ಟ್ 21 ;    ಜಿಲ್ಲಾ ಸಶಸ್ತ್ರ ಮೀಸಲು ಪಡೆಯಿಂದ ನಾಗರೀಕ ಬಂದೂಕು ತರಬೇತಿ ಶಿಬಿರವನ್ನು ದಿನಾಂಕ: 11-09-2017 ರಿಂದ 17-09-2017 ರವರೆಗೆ ಕೋಲಾರ ಪೊಲೀಸ್ ಕವಾಯತು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ. 
    ಆಸಕ್ತ ನಾಗರೀಕರು ಅರ್ಜಿಗಳನ್ನು ಜಿಲ್ಲಾ ಸಶಸ್ತ್ರ ಮೀಸಲು ಪಡೆ, ಕೋಲಾರ ಇಲ್ಲಿ ಪಡೆದು ದಿನಾಂಕ: 10-09-2017 ರೊಳಗಾಗಿ ಸಲ್ಲಿಸಬಹುದಾಗಿದೆ. ಮಹಿಳೆಯರಿಗೆ ವಿಶೇಷ ಆದ್ಯತೆ ಇರುತ್ತದೆ ಎಂದು ಸಶಸ್ತ್ರ ಆರಕ್ಷಕ ನಿರೀಕ್ಷಕರಾದ ಕೆ.ಆರ್.ರಘು ಅವರು ತಿಳಿಸಿದ್ದಾರೆ. 

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಪ್ರಜಾಸತ್ತೆಯ ಬಂಧನ!

ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...

ಚಿಂದಿ ಆಯುವ ಹಕ್ಕು

ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...