ಕೋಲಾರ: ಸರ್ಕಾರದಿಂದ ಬರುವ ಹೆಣ್ಣು ಮಕ್ಕಳಿಗೆ ಮತ್ತು ಗರ್ಭಿಣಿಯರಿಗಾಗಿ ಬರುವ ಆಹಾರ ಕಾಳಸಂತೆಗೆ-ಮನವಿ ಸಲ್ಲಿಕೆ

Source: shabbir | By Arshad Koppa | Published on 24th August 2017, 8:39 PM | State News | Guest Editorial |

ಕೋಲಾರ,ಆ.24:  ಸರ್ಕಾರದಿಂದ ಬರುವ ಹೆಣ್ಣು ಮಕ್ಕಳಿಗೆ ಮತ್ತು ಗರ್ಭಿಣಿಯರಿಗೆ ಬರುವ ಆಹಾರ ಪಧಾರ್ಥಗಳು ಕಾಳ ಸಂತೆಗೆ ರವಾನೆಯಾಗಿ ಬಡ ಹೆಣ್ಣು ಮಕ್ಕಳಿಗೆ ಪೌಷ್ಠಿಕ ಆಹಾರ ಸಿಗದೆ ಲೂಟಿಯಾಗುತ್ತಿದ್ದು, ಗ್ರಾಮೀಣ ಭಾಗದಲ್ಲಿ ಸರ್ಕಾರದಿಂದ ಬರುವ ಹೆಣ್ಣು  ಮಕ್ಕಳ ಆಹಾರ ಪಧಾರ್ಥಗಳನ್ನು ಸಮರ್ಪಕವಾಗಿ ವಿತರಿಸಿ. ಹೆಣ್ಣು ಮಕ್ಕಳಿಗೆ ಅಪೌಷ್ಠಿಕತೆ ಕಾಡದಂತೆ ಮತ್ತು ಸಾವುಗಳಾಗದಂತೆ  ಕ್ರಮ ಕೈಗೊಳ್ಳಬೇಕೆಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರಭಾರಿ ಉಪನಿರ್ದೇಶಕರಿಗೆ ಮನವಿ ನೀಡಿ ಆಗ್ರಹಿಸಲಾಯಿತು.
    ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಮಾತನಾಡಿ ಸರ್ಕಾರದಿಂದ ಮಹಿಳಾ ಕಲ್ಯಾಣ ಇಲಾಖೆಗೆ 13ವರ್ಷದವರೆಗಿನ ಹೆಣ್ಣು ಮಕ್ಕಳಿಗೆ ಮತ್ತು ಗರ್ಭಿಣ ಯರಿಗೆ ಮತ್ತು ಭಾಣಂತಿಯರಿಗೆ ಪ್ರತಿ ತಿಂಗಳು ವಿತರಿಸಲು  ಪ್ರತಿ ವರ್ಷವು ಕೋಟ್ಯಾಂತರ ರೂ ಆಹಾರ ಪದಾರ್ಥಗಳು ಸರಬರಾಜು ಆಗುತ್ತಿವೆ. ಸರಬರಾಜಾದ ಆಹಾರ ಪದಾರ್ಥಗಳಿಗೂ ಸರ್ಮಕವಾಗಿ ಸರ್ಕಾರಕ್ಕೆ ಲೆಕ್ಕವನ್ನು ಪುಸ್ತಕದಲ್ಲಿ ನೀಡುವ ಇಲಾಖೆ ಗ್ರಾಮೀಣ ಪ್ರದೇಶದಲ್ಲಿ ಮಾತ್ರ ಈ ಆಹಾರ ಪದಾರ್ಥಗಳು ಮಹಿಳೆಯರ ಕೈಗೆ ಸೇರುತ್ತಿಲ್ಲ. ಇವು ಗುತ್ತಿಗೆದಾರರ ಮತ್ತು ಅಧಿಕಾರಿಗಳ ಕಳ್ಳಲೆಕ್ಕಗಳಿಂದ ಕಾಳಸಂತೆಗೆ ಬಹಿರಂಗವಾಗಿಯೇ ರವಾನೆಯಾಗಿ ಮಾರಾಟವಾಗಿ ಇಂದು ಗ್ರಾಮೀಣ ಮಹಿಳೆಯರು ಅಪೌಷ್ಠಿಕತೆಯಿಂದ ನರಳಲು ಈ ಅಧಿಕಾರಗಳ ಆಹಾರ ದಾನ್ಯಗಳ ಲೂಟಿಯೇ ಕಾರಣವಾಗಿದೆಂದು ಆರೋಪಿಸಿದರು.
    ಪ್ರತಿ ಗ್ರಾಮದಲ್ಲಿ ಅಂಗನವಾಡಿಗಳ ಮೂಲಕ ಈ ಹೆಣ್ಣು ಮಕ್ಕಳ ಆಹಾರ ಪದಾರ್ಥಗಳನ್ನು ತಿಂಗಳು ತಿಂಗಳು ನೀಡಬೇಕು. ಅಧಿಕಾರಿಗಳ ಲೆಕ್ಕದಲ್ಲಿ ಒಂದು ಹಳ್ಳಿಗೆ 50-70ಮಂದಿ ಈ ಪಲಾನುಭವಿಗಳಿದ್ದಾರೆಂದು ಸರ್ಕಾರಕ್ಕೆ ಲೆಕ್ಕ ಕೊಡುತ್ತಾರೆ.ಆದರೆ ಹಳ್ಳಿಗಳಲ್ಲಿ 5-10ಮಂದಿಗೆ ಈ ಆಹಾರ ಧಾನ್ಯಗಳು ಸೇರದೆ ಕಾಳಸಂತೆಯಲ್ಲಿ ಮಾರಾಟವಾಗುವಾಗ ಸುಮಾರು ಬಾರಿ ಸಿಕ್ಕಿ ಬಿದ್ದ ಉದಾಹರಣೆಗಳಿವೆ. ಈ ಬಗ್ಗೆ ಸುಮಾರು ಬಾರಿ ಇಲಾಖೆ ಗಮನಕ್ಕೆ ತಂದರೂ ಈ ಆಕ್ರಮಗಳು ನಿಲ್ಲದೆ, ಹೆಣ್ಣು ಮಕ್ಕಳಲ್ಲಿ ಅಪೌಷ್ಠಿಕತೆ ಕಾಡಿ ಮಹಿಳೆಯರು ಮತ್ತು ಹುಟ್ಟುವ ಮಕ್ಕಳು ಸಾಯಲು ಇಲಾಖೆಯ ಈ ಲೂಟಿಯೇ ಕಾರಣವಾಗಿದ್ದು, ಈ ಆಹಾರ ಪದಾರ್ಥಗಳ ಲೂಟಿಗೆ ಕಡಿವಾಣ ಹಾಕಿ ಹೆಣ್ಣು ಮಕ್ಕಳ ಮತ್ತು ಶಿಶುಗಳ ಜೀವಹಾನಿಯನ್ನು ತಪ್ಪಿಸಬೇಕೆಂದು ಆಗ್ರಹಿಸಲಾಯಿತು.
    ಮನವಿ ಸ್ವೀಕರಿಸಿದ ಉಪನಿರ್ದೇಶಕರು ಆಹಾರ ಪದಾರ್ಥಗಳ ವಿತರಣೆಯಲ್ಲಿ ಸಣ್ಣ ಪುಟ್ಟ ಲೋಪಗಳಾಗುತ್ತಿದ್ದು, ಕೇಲವು ಪ್ರಕರಣಗಳು ಬೆಳಕಿಗೆ ಬಂದಿದ್ದು, ಈ ಬಗ್ಗೆ ಸಮಗ್ರ ತನಿಖೆ ಕೈಗೊಂಡು ಆಹಾರ ಪದಾರ್ಥಗಳನ್ನು ಮಹಿಳೆಯರಿಗೆ ಸೇರಿಸದೇ ದುರುಪಯೋಗವಾಗುತ್ತಿರುವ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
    ಈ ನಿಯೋಗದಲ್ಲಿ ಜಿಲ್ಲಾದ್ಯಕ್ಷ ಮರಗಲ್ ಶ್ರೀನಿವಾಸ್, ಕೋರಂಗಡಹಳ್ಲಿ ಮಂಜು, ಕೆಂಬೋಡಿ ಕೃಷ್ಣೇಗೌಡ, ಈಕಂಬಳ್ಳಿ ಮಂಜುನಾಥ್ ಇದ್ದರು.


ಕೆ.ಶ್ರೀನಿವಾಸಗೌಡ
 

ವರದಿ: ಮೊಹಮ್ಮದ್ ಶಬ್ಬೀರ್, ಶ್ರೀನಿವಾಸಪುರ 

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ಪ್ರಜಾಸತ್ತೆಯ ಬಂಧನ!

ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...

ಚಿಂದಿ ಆಯುವ ಹಕ್ಕು

ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...