ಕೋಲಾರ ಆ.15: ಪತ್ರಕರ್ತರಿಗೆ ರಾಜೀವ್ ಆರೋಗ್ಯ ಭಾಗ್ಯ ಯೋಜನೆಯಡಿ ವಿಶೇಷ ಗುರುತಿನ ಚೀಟಿಯನ್ನು ಸ್ವಾತಂತ್ರ್ಯ ದಿನಾಚರಣೆ ಶುಭ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಆರ್. ರಮೇಶ್ ಕುಮಾರ್ ರವರು ಹಿರಿಯ ಪತ್ರಕರ್ತರಾದ ಕಲಾವಿದ ವಿಷ್ಣುರವರಿಗೆ ರಾಜ್ಯದಲ್ಲೇ ಪ್ರಥಮ ಬಾರಿಗೆ ರಾಜೀವ್ ಆರೋಗ್ಯ ಭಾಗ್ಯದ ಗುರುತಿನ ಚೀಟಿಯನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಕೋಲಾರ ಲೋಕಸಭಾ ಸಂಸದ ಕೆ.ಹೆಚ್.ಮುನಿಯಪ್ಪ, ಶಾಸಕ ಆರ್. ವರ್ತೂರ್ ಪ್ರಕಾಶ್, ಜಿಲ್ಲಾಧಿಕಾರಿ ಡಾ|| ತ್ರೀಲೋಕಚಂದ್ರ, ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಶ್ರೀಮತಿ ಪಲ್ಲವಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ವರದಿ: ಮೊಹಮ್ಮದ್ ಶಬ್ಬೀರ್, ಶ್ರೀನಿವಾಸಪುರ