ಕೋಲಾರ:ಕೋಲಾರ ರೋಟರಿ ಕ್ಲಬ್ ವತಿಯಿಂದ ವಿವಿಧ ಸ್ಥಳಗಳಲ್ಲಿ ದ್ವಜಾರೋಹಣ

Source: shabbir | By Arshad Koppa | Published on 16th August 2017, 8:16 AM | State News | Guest Editorial |

ಕೋಲಾರ: 71ನೇ ಸ್ವತಂತ್ರ್ಯ ದಿನಾಚರಣೆ ಪ್ರಯುಕ್ತ ಕೋಲಾರ ರೋಟರಿ ಕ್ಲಬ್ ವತಿಯಿಂದ ವಿವಿಧ ಸ್ಥಳಗಳಲ್ಲಿ ದ್ವಜಾರೋಹಣ ಹಾಗೂ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ಮತ್ತು ನಿಘಂಟು ವಿತರಣೆ, ವೃದ್ಧರಿಗೆ ಹಣ್ಣು ಹಂಪಲು ವಿತರಣೆ ಮುಂತಾದ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
      ಮೊದಲಿಗೆ ಬೆಳಗ್ಗೆ 6:30ಕ್ಕೆ ರೋಟರಿ ಭವನದಲ್ಲಿ ಹಾಗೂ ಸ್ಕೌಟ್ ಮತ್ತು ಗೈಡ್ಸ್ ಕಛೇರಿ ಆವರಣದಲ್ಲಿ ರೋಟರಿ ಕ್ಲಬ್ ಅಧ್ಯಕ್ಷರಾದ ಬಿ.ಕೆ.ದೇವರಾಜ್‍ರವರು ದ್ವಜಾರೋಹಣ ನೆರವೇರಿಸಿದರು. 
           ನಂತರ 8:00 ಗಂಟೆಗೆ ಕಾರಂಜಿಕಟ್ಟೆಯ ಸುಭಾಷ್ ಶಾಲೆ, 8:30ಕ್ಕೆ ಹೊದಲವಾಡಿ ಪ್ರಾರ್ಥಮಿಕ ಶಾಲೆ, 9:00 ಗಂಟೆಗೆ ಕಾಮದೇನಹಳ್ಳಿ ಪ್ರಾರ್ಥಮಿಕ ಶಾಲೆ, 10:00 ಗಂಟೆಗೆ ನೇತ್ರ ದೀಪ ಆಸ್ಪತ್ರೆಯಲ್ಲಿ ದ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ನೋಟ್ ಪುಸ್ತಕಗಳನ್ನು ಹಾಗೂ ಪ್ರೌಢಶಾಲಾ ಮಕ್ಕಳಿಗೆ ನಿಘಂಟು ವಿತಾರಣೆ ಮಾಡಲಾಯಿತು. 10:30ಕ್ಕೆ ಅಂತರಗಂಗೆ ವಿದ್ಯಾ ಸಂಸ್ಥೆಯಲ್ಲಿ ಮಕ್ಕಳಿಗೆ ಊಟ ಮತ್ತು ಹಣ್ಣುಗಳನ್ನು ವಿತರಿಸಲಾಯಿತು, 11:00 ಗಂಟೆಗೆ ಹುದುಕುಳ ಪ್ರಾರ್ಥಮಿಕ ಶಾಲೆಯಲ್ಲಿ ದ್ವಜಾರೋಹಣ ಕಾರ್ಯಕ್ರಮ ನೆಡೆಸಿ ಕಳೆದ ವರ್ಷದ ಪ್ರತಿಭಾವಂತ ಮಕ್ಕಳಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು, ಮತ್ತೆ 12:30ಕ್ಕೆ ಬೀರಂಡಹಳ್ಳಿ ವೃದಾಶ್ರಮದಲ್ಲಿನ ವಯೋವೃದರಿಗೆ ಹಣ್ಣು ಹಂಪಲು ವಿತರಿಸಲಾಯಿತು.


    ಕಾರ್ಯಕ್ರಮದಲ್ಲಿ ರೋಟರಿ ಸಂಸ್ಥೆ ಖಜಾಂಚಿ ಸಿ.ಆರ್.ಆಶೋಕ್, ಕಾರ್ಯದರ್ಶಿ ಎಸ್. ಎಂ.ಚಂದ್ರಶೇಖರ್,  ಮಾಜಿ ಅದ್ಯಕ್ಷ ಬೈಚಪ್ಪ, ಕೆ.ಗೋಪಾಲರೆಡ್ಡಿ, ರಾಮಚಂದ್ರಪ್ಪ,  ಗೋಪಾಲಕೃಷ್ಣರೆಡ್ಡಿ ಮತ್ತು ಸ್ಕೌಟ್ ಮತ್ತು ಗೈಡ್ಸ್ ಅದ್ಯಕ್ಷ ಪ್ರಹ್ಲದ್‍ರಾವ್, ಬಿಸಪ್ಪಗೌಡ, ಕೆ.ವಿ.ಶಂಕರಪ್ಪ, ಡಾ.ಮೌನಿ, ವಿ.ಪಿ.ಸೋಮಶೇಖರ್ ಸೇರಿದಂತೆ ಶಾಲಾ ಮುಖ್ಯೋಪಾದ್ಯಯರುಗಳು ಮತ್ತು ಶಾಲಾ ಶಿಕ್ಷಕವೃಂದ ಉಪಸ್ಥಿತರಿದ್ದರು.


     (ಬಿ.ಕೆ.ದೇವರಾಜ್) 
ಅಧ್ಯಕ್ಷರು ರೋಟರಿ ಕ್ಲಬ್ ಕೋಲಾರ


ವರದಿ: ಮೊಹಮ್ಮದ್ ಶಬ್ಬೀರ್, ಶ್ರೀನಿವಾಸಪುರ

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಪ್ರಜಾಸತ್ತೆಯ ಬಂಧನ!

ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...

ಚಿಂದಿ ಆಯುವ ಹಕ್ಕು

ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...