ಕೋಲಾರ:- ಸರ್ಕಾರಿ ಶಾಲೆಗಳ ಮಕ್ಕಳ ಕಲಿಕೆಗೆ ಪೂರಕವಾಗಿ ಉಳ್ಳವರು ನೆರವಿನ ಹಸ್ತ ಚಾಚುವ ಸಾಮಾಜಿಕ ಕಾಳಜಿಯ ಕಾರ್ಯ ಸ್ಮರಣೀಯ ಎಂದು ಹಿರಿಯ ಛಾಯಾಗ್ರಾಹಕ ಹಾಬಿ ರಮೇಶ್ ಅಭಿಪ್ರಾಯಪಟ್ಟರು.
ಶುಕ್ರವಾರ ತಾಲ್ಲೂಕಿನ ಅರಾಭಿಕೊತ್ತನೂರು ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ನಗರದ ಸತ್ಯನಾರಾಯಣ ಜ್ಯುವೆಲರ್ಸ್ನ ಮಾಲೀಕರಾದ ವೆಂಕಟೇಶ್ ಅವರ ದಿವಂಗತ ಪುತ್ರ ಶ್ರೀಹರಿ ಸ್ಮರಣಾರ್ಥ ಶಾಲಾ ಮಕ್ಕಳಿಗೆ ಬ್ಯಾಗ್ಗಳನ್ನು ವೆಂಕಟೇಶ್ ಅವರ ಸಮ್ಮುಖದಲ್ಲಿ ವಿತರಿಸಿ,ಶ್ರದ್ದಾಂಜಲಿ ಅರ್ಪಿಸಿ ಅವರು ಮಾತನಾಡುತ್ತಿದ್ದರು.
ಧಾರ್ಮಿಕ ಕಾರ್ಯಗಳಲ್ಲಿ ನಿರಂತರವಾಗಿ ತೊಡಗಿಕೊಳ್ಳುತ್ತಿದ್ದ ವೆಂಕಟೇಶ್ ಅವರ ಕುಟುಂಬಕ್ಕೆ ಮಗನ ಸಾವು ತುಂಬಲಾರದ ನಷ್ಟ ತಂದಿದೆ ಎಂದು ವಿಷಾದಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲೆಯ ಮುಖ್ಯ ಶಿಕ್ಷಕ ಸಿ.ಎನ್.ಪ್ರದೀಪ್ ಕುಮಾರ್, ದುಃಖದಲ್ಲೂ ಬಡ ಮಕ್ಕಳಿಗೆ ನೆರವಾಗುವ ಹೃದಯವಂತಿಕೆ ಎಲ್ಲರಿಗೂ ಬರಲಾರದು ಎಂದರು.
ತಮ್ಮ ಮಗನ ಸಾವಿನ ದುಃಖದ ನಡುವೆ ಸರ್ಕಾರಿ ಶಾಲೆಯ ಮಕ್ಕಳಿಗೆ ನೆರವಾಗಬೇಕೆಂಬ ಅವರ ಬಯಕೆ ನಿಜಕ್ಕೂ ಸಾರ್ಥಕತೆ ತರುತ್ತದೆ ಎಂದು ತಿಳಿಸಿ ಅಪಘಾತದಲ್ಲಿ ಕೊನೆಯುಸಿರೆಳೆದ ವೆಂಕಟೇಶ್ ಅವರ ಪುತ್ರ ಶ್ರೀಹರಿ ಅವರಿಗೆ ಚಿರಶಾಂತಿ ಸಿಗಲಿ ಎಂದು ಹಾರೈಸಿದರು.
ವಿಹಿಂಪ ಅಧ್ಯಕ್ಷರಾಗಿ ವೆಂಕಟೇಶ್ ಅವರ ತಂದೆ ಸತ್ಯನಾರಾಯನಶೆಟ್ಟಿ ಅವರು ಅನೇಕ ಧಾರ್ಮಿಕ ಕಾರ್ಯಗಳ ಮೂಲಕ ಮನೆಮಾತಾಗಿದ್ದರು, ಅವರಂತೆಯೇ ಅವರ ಮಗ ವೆಂಕಟೇಶ್ ಅವರು ನಿರಂತರವಾಗಿ ಅಂತರಗಂಗೆಯಲ್ಲಿ ಕೊನೆ ಕಾರ್ತಿಕ ಸೋಮವಾರ ನಡೆಸಿಕೊಂಡು ಬಂದಿರುವ ಅನ್ನದಾಸೋಹ ಸ್ಮರಣೀಯ ಎಂದರು.
ಕಾರ್ಯಕ್ರಮದಲ್ಲಿ ಹಾಜರಿದ್ದ ಫ್ಯಾನ್ಸಿಹಾಲ್ನ ಮಾಲೀಕರಾದ ರಾಜೇಂದ್ರ ಕಾರ್ಲೇಕರ್,ಪ್ರಸಾದ್ ಜ್ಯುವೆಲರ್ಸ್ನ ಪ್ರಸಾದ್ ಮಾತನಾಡಿ, ವೆಂಕಟೇಶ್ ಅವರಿಗೆ ತಮ್ಮ ಮಗನ ಸಾವಿನ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸಿದರು.
ಇದೇ ಸಂದರ್ಭದಲ್ಲಿ ಶಾಲಾ ಮಕ್ಕಳು,ಶಿಕ್ಷಕರು ಎರಡು ನಿಮಿಷ ಮೌನಾಚರಣೆ ಮೂಲಕ ದಿವಂಗತ ಶ್ರೀಹರಿ ಅವರಿಗೆ ಶ್ರದ್ಧಾಂಜಲಿ ಅರ್ಪಿಸಿದರು.
ಕಾರ್ಯಕ್ರಮದಲ್ಲಿ ಎಸ್ಡಿಎಂಸಿ ಅಧ್ಯಕ್ಷ ಮುನಿರಾಜು, ಮಾಜಿ ಅಧ್ಯಕ್ಷ ಮುಳ್ಳಹಳ್ಳಿ ಮಂಜುನಾಥ್, ಶಿಕ್ಷಕರಾದ ಸಿ.ಎಂ.ವೆಂಕಟರಮಣಪ್ಪ, ಎಸ್.ಅನಂತಪದ್ಮನಾಭ್,ಸತೀಶ್ ಎಸ್.ನ್ಯಾಮತಿ, ಭವಾನಿ, ಶ್ವೇತಾ, ಸುಗುಣಾ,ಲೀಲಾ, ಡಿ.ಚಂದ್ರಶೇಖರ್, ವಸಂತಮ್ಮ ಮತ್ತಿತರರು ಹಾಜರಿದ್ದು, ಸಿ.ಎಲ್.ಶ್ರೀನಿವಸಲು ಸ್ವಾಗತಿಸಿ, ನಿರೂಪಿಸಿದರು.ವರದಿ: ಮೊಹಮ್ಮದ್ ಶಬ್ಬೀರ್, ಶ್ರೀನಿವಾಸಪುರ
Read These Next
ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ
ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...
ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!
ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!
ನಾಮಫಲಕಗಳಲ್ಲಿ ಶೇ.೬೦% ಕನ್ನಡ ಕಡ್ಡಾಯ; ಹೈಕೋರ್ಟ್ ಮಧ್ಯಂತರ ಆದೇಶ
ಬೆಂಗಳೂರು: ಕನ್ನಡ ನಾಮಫಲಕಗಳಲ್ಲಿ ಶೇ 60ರಷ್ಟು ಕಡ್ಡಾಯ ಬಳಕೆ ಮಾಡದ ವಾಣಿಜ್ಯ ಸಂಸ್ಥೆಗಳು, ಅಂಗಡಿ-ಮುಂಗಟ್ಟುಗಳನ್ನು ಮುಚ್ಚಬಾರದು ...
ಸೀಟು ಹಂಚಿಕೆ ವಿವಾದ; ಬಿಜೆಪಿ ಜೆಡಿಎಸ್ ಮೈತ್ರಿಯಲ್ಲಿ ಬಿರುಕು?
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಎರಡು ಕ್ಷೇತ್ರಗಳನ್ನು ತೆಗೆದುಕೊಳ್ಳಲು ನಾನು ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳಬೇಕಿತ್ತಾ? ...
ಲೋಕಸಭಾ ಚುನಾವಣೆ; ರಾಜ್ಯದಲ್ಲಿ 2 ಹಂತಗಳಲ್ಲಿ ಮತದಾನ
ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಎಪ್ರಿಲ್ 26 ಹಾಗೂ ಮೇ 7ರಂದು ತಲಾ 14 ಕ್ಷೇತ್ರಗಳಿಗೆ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಜೂನ್ ...
ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ
ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...
ಪದವಿಧರ ಕ್ಷೇತ್ರ ಚುನಾವಣೆ: ಸಂಚಾರಿ ವಿಚಕ್ಷಣಾ ತಂಡಗಳ ರಚನೆ
ಧಾರವಾಡ : ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ ಅಕ್ಟೋಬರ್ 28 ರಂದು ನಡೆಯುವ ಹಿನ್ನೆಲೆಯಲ್ಲಿ ಸಮಾಜ ...
ಪ್ರಜಾಸತ್ತೆಯ ಬಂಧನ!
ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...
ಚಿಂದಿ ಆಯುವ ಹಕ್ಕು
ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...
ಜಿದ್ದಾ: ಐಎಫ್ಎಫ್ ಕುಟುಂಬ ಸಮ್ಮಿಲನ “ ಸಂಭ್ರಮ-2019” ವಿಜೃಂಭಣೆಯಿಂದ ಸಂಭ್ರಮಿಸಿದ ಅನಿವಾಸಿ ಕನ್ನಡಿಗರು
ಜಿದ್ದಾ: ಐಎಫ್ಎಫ್ ಕುಟುಂಬ ಸಮ್ಮಿಲನ “ ಸಂಭ್ರಮ-2019” ವಿಜೃಂಭಣೆಯಿಂದ ಸಂಭ್ರಮಿಸಿದ ಅನಿವಾಸಿ ಕನ್ನಡಿಗರು.
’ದಲಿತ’ ಪದವನ್ನು ’ಪರಿಶಿಷ್ಟ ಜಾತಿ’ ಎಂಬ ಅರ್ಥಕ್ಕೆ ಸೀಮಿತಗೊಳಿಸಬಾರದು
ಕೇಂದ್ರದ ಮಾಹಿತಿ ಮತ್ತು ಪ್ರಸಾರ ಇಲಾಖೆಯು ಇನ್ನು ಮುಂದೆ ಮಾಧ್ಯಮಗಳು ದಲಿತ ಎಂಬ ಪದವನ್ನು ಬಳಸಬಾರದೆಂದು ಇತ್ತೀಚೆಗೆ ಸಲಹಾತ್ಮಕ ...
ನಿಜಕ್ಕೂ ಸಾದಿಯಾ ಯಾರು?
ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...