ಕೋಲಾರ, ಆಗಸ್ಟ್ 22 :ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಹಾಗೂ ವಿಶ್ವಕರ್ಮ ಜಯಂತಿಯನ್ನು ಅನುಕ್ರಮವಾಗಿ ಸೆಪ್ಟಂಬರ್ 16 ಮತ್ತು 17 ರಂದು ಆಚರಣೆ ಮಾಡಲು ಅಪರ ಜಿಲ್ಲಾಧಿಕಾರಿ ಕೆ.ವಿದ್ಯಾಕುಮಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವ ಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಇಂದು ನಡೆದ ಪೂರ್ವಭಾವಿ ಸಭೆಯಲ್ಲಿ, ಜಯಂತಿಗಳಲ್ಲಿ ಆಚರಣೆಯು ಸುಗಮವಾಗಿ ನಡೆಯುವಂತೆ ಮುಖಂಡರುಗಳು ಜವಾಬ್ದಾರಿ ವಹಿಸಬೇಕು. ಅದೇ ರೀತಿ ಮೆರವಣ ಗೆಯಲ್ಲಿ ಯಾವುದೇ ರೀತಿಯ ಅಹಿತರ ಘಟನೆಗಳು ನಡೆಯದಂತೆ ಜಾಗೃತಿ ವಹಿಸಬೇಕು ಎಂದು ತಿಳಿಸಿದರು.
ವಿಶ್ವಕರ್ಮ ಜಯಂತಿಯ ಮೆರವಣ ಗೆಯು ಕಾಳಿಕಾಂಬ ದೇವಸ್ಥಾನದಿಂದ ಪ್ರಾರಂಭಿಸಲು ತೀರ್ಮಾನಿಸಲಾಯಿತು. ಅದರಂತೆ ಕನ್ನಡ ಮತ್ತು ಸಂಸ್ಕøತಿ ಇಲಾಖೆಯು ಎರಡು ಕಲಾತಂಡಗಳನ್ನು ಮೆರವಣ ಗೆಗೆ ನಿಯೋಜಿಸಬೇಕು. ನಂತರ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಸೂಚಿಸಿದರು.
ಈ ಸಂದರ್ಭದಲ್ಲಿ ಸಮುದಾಯದ ಮುಖಂಡರುಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.