ಕೋಲಾರ: ಸೇವಾದಳದ ಮೂಲಕ ನಮ್ಮ ರಾಷ್ಟ್ರದ ಮತ್ತು ಜನರ ಸೇವೆ ಮಾಡಲು ಬಿ.ಕೆ. ವೆಂಕಟ್‍ನಾರಾಯಣ್ ಕರೆ

Source: shabbir | By Arshad Koppa | Published on 22nd July 2017, 11:41 AM | State News | Guest Editorial |

ಕೋಲಾರ ಜು.21: ಭಾರತ ಸೇವಾದಳ ನೀತಿ ಮತ್ತು ಆಜ್ಞೆಗನುಗುಣವಾಗಿ ಭಾರತ ಸೇವಾದಳದ ಮೂಲಕ ನಮ್ಮ ರಾಷ್ಟ್ರದ ಮತ್ತು ಜನರ ಸೇವೆಯನ್ನು ನಮ್ಮ ಶಕ್ತಿ ಮೀರಿ ಮಾಡಲು ಭಾರತ ಸೇವಾದಳದ ಎಲ್ಲಾ ಸದಸ್ಯರು ಶ್ರಮಿಸಬೇಕಾಗಿದ್ದು, ಈ ನಿಟ್ಟಿನಲ್ಲಿ ಜಾತಿಯ ಮತ್ತು ವಣ ್ೀಯ ಭಾವನೆಗಳನ್ನು ತೆಜಿಸಿ ಜಿಲ್ಲೆಯಾದ್ಯಂತ ರಚನಾತ್ಮಕ ಕಾರ್ಯಕ್ರಮಗಳ ಮೂಲಕ ರಾಷ್ಟ್ರೀಯತೆಯನ್ನು ಹೆಚ್ಚಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಭಾರತ ಸೇವಾದಳ ಕೇಂದ್ರ ಸಮಿತಿ ಸದಸ್ಯ ಬಿ.ಕೆ. ವೆಂಕಟ್‍ನಾರಾಯಣ್ ಅಭಿಪ್ರಾಯಪಟ್ಟರು.
    ನಗರದ ಜಿಲ್ಲಾ ಭಾರತ ಸೇವಾದಳ ಕಾರ್ಯಾಲಯದಲ್ಲಿಂದು ನಡೆದ ಜಿಲ್ಲಾ ಕಾರ್ಯಕಾರಿ ಸಮಿತಿ ಪ್ರಥಮ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು. 
    ರಾಷ್ಟ್ರಪಿತ ಮಹಾತ್ಮಾಗಾಂಧಿಜೀಯವರ ತತ್ವ ಮತ್ತು ಕಾರ್ಯಕ್ರಮಗಳ ತಳಹದಿಯ ಮೇಲೆ ವಿದ್ಯಾರ್ಥಿ ಹಾಗೂ ಯುವಜನರನ್ನು ಸಂಘಟಿಸಿ ಶಿಸ್ತು, ರಾಷ್ಟ್ರೀಯ ಸೇವೆಗಾಗಿ ತರಬೇತಿಯನ್ನು ನೀಡುವ ಸೇವಾದಳದ ಕಾರ್ಯಕ್ರಮದಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಬೇಕು ಎಂದರು.    
    ಜಿಲ್ಲಾ ಭಾರತ ಸೇವಾದಳದ ಅಧ್ಯಕ್ಷ ಕೆ.ಎಸ್.ಗಣೇಶ್ ಮಾತನಾಡಿ ಯುವಕರನ್ನು ಭಾರತದ ಆದರ್ಶ ನಾಯಕರನ್ನಾಗಿ ಮಾಡಲು ಅವರಲ್ಲಿ ಸಂಯಮ, ಧೈರ್ಯ, ತ್ಯಾಗ, ಸರಳತೆ, ಸೇವೆ, ಸಹಕಾರ ಮನೋಭಾವನೆಯನ್ನು ಮೂಡಿಸುವುದೇ ಅಲ್ಲದೆ ಸೇವೆಗಾಗಿ ಬಾಳುವ ಗುರಿಯನ್ನು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಲ್ಲಿರುವ ವಿದ್ಯಾರ್ಥಿಗಳಲ್ಲಿ ಬಿತ್ತಬೇಕೆಂದು ಇದಕ್ಕೆ ಜಿಲ್ಲೆಯ ಎಲ್ಲಾ ಸೇವಾದಳ ಸ್ವಯಂಸೇವಕರು ಸಹಕಾರಿಗಳಾಗಬೇಕು ಎಂದರು.
    ಸಮಾರಂಭದಲ್ಲಿ ಭಾರತ ಸೇವಾದಳ ಜಿಲ್ಲಾ ಉಪಾಧ್ಯಕ್ಷ ಜಿ. ಶ್ರೀನಿವಾಸ್, ಕಾರ್ಯದರ್ಶಿ ಎಸ್. ಸುಧಾಕರ್, ಕೋಶಾದ್ಯಕ್ಷ ಆರ್. ರವಿಕುಮಾರ್, ಕಾರ್ಯಕಾರಿ ಸಮಿತಿ ಸದಸ್ಯರುಗಳಾದ ವಿ.ಪಿ.ಸೋಮಶೇಖರ್, ಎಂ.ನಾಗರಾಜ್, ಡಿ.ಮುನೇಶ್, ಸಿ.ನಾರಾಯಣಸ್ವಾಮಿ, ರಾಜೇಶ್ ಸಿಂಗ್, ಹೆಚ್.ಸಿ. ಬೈರೇಗೌಡ, ಸಂಘಟಕ ಎಂ.ಬಿ. ದಾನೇಶ್ ಮತ್ತಿತರರು ಉಪಸ್ಥಿತರಿದ್ದರು.
    ಇದೇ ಸಂದರ್ಭದಲ್ಲಿ ಕಾರ್ಯಕಾರಿ ಸಮಿತಿಯ ನಿರ್ಣಯದಂತೆ ಭಾರತ ಸೇವಾದಳ ವಿಶೇಷ ಆಹ್ವಾನಿತರಾಗಿ ಬೆಳಗಾನಹಳ್ಳಿ ಮುನಿವೆಂಕಟಪ್ಪ, ಅಪ್ಪಿ ನಾರಾಯಣಸ್ವಾಮಿ, ಆರ್. ಶ್ರೀನಿವಾಸನ್, ಚಾಮುಂಡೇಶ್ವರಿದೇವಿ, ಕೆ.ಟಿ. ನಾಗರಾಜ್, ಪಿ.ಎನ್. ಪರಮೇಶ್ ಹಾಗೂ ತಾಲ್ಲೂಕು ಸಂಘಟಕರಾಗಿ ಶ್ರೀನಿವಾಸಪುರ ಎಂ. ನಾಗರಾಜ್, ಮಾಲೂರು ಬಹದ್ದೂರ್ ಸಾಬ್, ಬಂಗಾರಪೇಟೆ ಕೆ.ಸಿ.ಗೋಪಾಲ್, ಮುಳಬಾಗಿಲು ರೆಡ್ಡೆಪ್ಪ ರವರುಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

 (ಜಿ. ಶ್ರೀನಿವಾಸ್)
ಕೋಲಾರ.


ವರದಿ: ಮೊಹಮ್ಮದ್ ಶಬ್ಬೀರ್, ಶ್ರೀನಿವಾಸಪುರ

Read These Next

ರೇಪಿಷ್ಟ್ ಗಳ ಜೊತೆ ಬಿಜೆಪಿ ಹೊಂದಾಣಿಕೆ;  ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದು ಅಂದರೆ ಇದೇನಾ? -ಸಿದ್ಧರಾಮಯ್ಯ

ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...

ಮುಂಡಗೋಡ: ಮೋದಿ ಸುಳ್ಳುಗಳ ಸರದಾರ, ಬಿಜೆಪಿ ಸುಳ್ಳಿನ ಕಾರ್ಖಾನೆ: ಸಿದ್ದರಾಮಯ್ಯ ವಾಗ್ದಾಳಿ

ಯುವಕರು ಕೆಲಸ ಕೊಡಿ ಎಂದರೆ ಪಕೋಡಾ ಮಾರಲು ಹೋಗಿ ಎಂದು ಪ್ರಧಾನಿ ಮೋದಿಯವರು ವಿದ್ಯಾವಂತ ಯುವಜನರಿಗೆ ಬೇಜವಾಬ್ದಾರಿ ಹೇಳಿಕೆ ಕೊಟ್ಟರು. ...

ಅತಿಕ್ರಮಣದಾರರ ವಿಚಾರದಲ್ಲೂ ಬಿಜೆಪಿಯಿಂದ ರಾಜಕೀಯ; ಮುಂಡಗೋಡದಲ್ಲಿ ಡಿಕೆಶಿ ವಾಗ್ದಾಳಿ

ರೈತರ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಆದಾಯ ಡಬಲ್ ಮಾಡುತ್ತೇವೆಂದು ಹೇಳಿ ರೈತರಿಗೆ ಮರಳು ಮಾಡಿದೆ. ಅತಿಕ್ರಮಣದಾರರ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...

ಪ್ರಜಾಸತ್ತೆಯ ಬಂಧನ!

ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...

ಚಿಂದಿ ಆಯುವ ಹಕ್ಕು

ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...