ಶಾಶ್ವತ ನೀರಿಗಾಗಿ ಆಗ್ರಹಿಸಿ ಪ್ರಧಾನಿ ಮೋದಿಗೆ  ಇಪ್ಪುತ್ತು ಸಾವಿರ ಪತ್ರ ರವಾನೆ

Source: sonews | By Staff Correspondent | Published on 4th February 2018, 11:34 PM | State News | Special Report | Don't Miss |

ಕೋಲಾರ : ಕೋಲಾರ ಜಿಲ್ಲೆಯ ನೀರಾವರಿ ಹೋರಾಟಗಾರರಿಂದ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಶಾಶ್ವತ ನೀರಿಗಾಗಿ ಆಗ್ರಹಿಸಿ ದೇಶದ ಪ್ರಧಾನಿ ನರೇಂದ್ರ ಮೋದಿಗೆ ಇಪ್ಪತ್ತು ಸಾವಿರ ಪತ್ರಗಳನ್ನು ಬರೆಯಲಾಗಿದೆ.

ಜನವರಿ 20ರಂದು ಕೋಲಾರ ಕ್ರೀಡಾಭಿವೃದ್ಧಿ ಅಕಾಡೆಮಿಯವರು ನಗರದ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡಿದ್ದ ಸಂಗೀತ ಸಾರ್ವಭೌಮ ಹೆಸರಾಂತ ಗಾಯಕ ಡಾ||ಎಸ್.ಪಿ. ಬಾಲಸುಬ್ರಮಣ್ಯಂರವರು ನಡೆಸಿಕೊಟ್ಟ ಮ್ಯೂಜಿಕಲ್ ನೈಟ್ಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಇಪ್ಪತ್ತು ಸಾವಿರ ಪ್ರೇಕ್ಷಕರಿಂದ ನೀರಾವರಿ ಹೋರಾಟಗಾರರೇ ಹೆಚ್ಚಾಗಿದ್ದ ಈ ಅಕಾಡೆಮಿಯ ಸದಸ್ಯರ ಮನವಿಯ ಮೇರೆಗೆ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಶಾಶ್ವತ ನೀರಿಗಾಗಿ ಆಗ್ರಹಿಸಿ ಇಪ್ಪತ್ತು ಸಾವಿರ ಅಂಚೆ ಪತ್ರಗಳನ್ನು ನೆರೆದಿದ್ದ ಜನ ಸಹಿ ಮಾಡಿದ್ದರು.

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಶಾಶ್ವತ ನೀರಿಗಾಗಿ ಎಸ್.ಬಿ. ಬಾಲಸುಬ್ರಮಣ್ಯಂ, ಗಾಯಕಿ ಅನುರಾಧ ಬಟ್, ಗಾಯಕ ಚಿನ್ಮಯಿ, ಹೆಸರಾಂತ ತಬಲ ಕಲಾವಿದ ವೇಣು, ಜಾನಪದ ಕಲಾವಿದ ಗೋ.ನಾ.ಸ್ವಾಮಿ ಸಹಿ ಮಾಡಿದ್ದರು. ಇವರೊಟ್ಟಿಗೆ ಕಾರ್ಯಕ್ರಮದ ಅತಿಥಿಗಳಾದ ಕೋಲಾರ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗಣೇಶ್, ಓಂ ಶಕ್ತಿ ಚಲಪತಿ, ಕೆ.ವಿ.ಶಂಕರಪ್ಪ, ಕನ್ನಡ ರಕ್ಷಣಾ ವೇದಿಕೆಯ ರಾಘವೇಂದ್ರ, ಸಿ.ಎಂ.ಆರ್. ಶ್ರೀನಾಥ್ ಸಹಿ ಮಾಡಿದ ಪತ್ರಗಳು ಮತ್ತು ಇತರೆ ಎಲ್ಲಾ 20,000 ಪತ್ರಗಳನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ 3ನೇ ಫೆಬ್ರವರಿ ಶನಿವಾರ ಕೋಲಾರ ಪ್ರಧಾನ ಅಂಚೆ ಕಛೇರಿಯ ಮುಖಾಂತರ  ಕಳುಹಿಸಿಕೊಡಲಾಯಿತು.

ಈ ಸಂದರ್ಭದಲ್ಲಿ ಕುರುಬರಪೇಟೆ ವೆಂಕಟೇಶ್, ಚಿನ್ನಿಶ್ರೀನಿವಾಸ್, ಚಂದ್ರಕಾಂತ್ ಸೂರ್ಯವಂಶಿ, ಮಾಯಂಡಿ ಮನೋಹರ್, ಕನ್ನಡ ಪ್ರಕಾಶ್, ಮಧುಕರ್.ಕೆ.ವಿ, ಮಲ್ಲಿಕಾ ಪ್ರಕಾಶ್, ಮಂಜುನಾಥ್, ಐ.ಟಿ.ಐ. ಶಿವು, ನಟರಾಜ್ ಹಾಗೂ ಅಕಾಡೆಮಿಯ ನೀರಾವರಿ ಹೋರಾಟಗಾರರು ಉಪಸ್ಥಿತರಿದ್ದರು.

                             

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ರೇವಣ್ಣ, ಪ್ರಜ್ವಲ್ ಉಚ್ಚಾಟನೆಗೆ ಜೆಡಿಎಸ್ ಶಾಸಕರ ಪಟ್ಟು

ರಾಜ್ಯದ ಜನತೆಯ ಮುಂದೆ ತಲೆ ತಗ್ಗಿಸುವಂತಹ ಕೆಲಸ ಮಾಡಿದವರನ್ನು ರಾಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಘನತೆಯನ್ನು ಉಳಿಸಬೇಕಿದೆ ಎಂದು ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ: ಕುಮಾರಸ್ವಾಮಿ

ಜೆಡಿಎಸ್ ಸಂಸದ ಪ್ರಜಿ ಕುಮಾರಸ್ವಾಮಿ ಡ್ರೈವ್ ಪ್ರಕರಣದಲ್ಲಿ ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ' ಎಂದು ಮಾಧ್ಯಮಗಳ ಮುಂದೆ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ತ್ವರಿತಗತಿಯಲ್ಲಿ ತನಿಖೆ ನಡೆಸಿ, ವರದಿ ಸಲ್ಲಿಸಲು ಸೂಚನೆ: ಪರಮೇಶ್ವ‌ರ್

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ, ವರದಿ ಸಲ್ಲಿಸುವಂತೆ ...

ಹನೂರು: ಇಂಡಿಗನ ಮತಗಟ್ಟೆ ಮೇಲೆ ಕಲ್ಲು ತೂರಾಟ, ಇವಿಎಂಗೆ ಹಾನಿ ತಹಶೀಲ್ದಾರ್, ಇನ್‌ಸ್ಪೆಕ್ಟರ್, ಚುನಾವಣಾಧಿಕಾರಿ ಸಹಿತ ಹಲವರಿಗೆ ಗಾಯ

ಮಹದೇಶ್ವರ ಬೆಟ್ಟ ಸಮೀಪದ ಇಂಡಿಗನತ್ತ ಮೆಂದಾರೆ ಮತಗಟ್ಟೆ ಬಳಿ ಮತದಾನ ನಡೆಯುವ ಬದಲು ರಣರಂಗವಾಗಿ ಮಾರ್ಪಟ್ಟು ಮತಗಟ್ಟೆ ಸಂಪೂರ್ಣ ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...