ಮಂಗಳೂರು : ದಕ್ಷಿಣಕನ್ನಡ ಜಿಲ್ಲಾಧಿಕಾರಿ ಡಾ|ಕೆ.ವಿ. ರಾಜೇಂದ್ರ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು ಮನೆಯಲ್ಲೇ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.
ಅವರ ಪತ್ನಿ ಹಾಗೂ ಮಗುವಿಗೂ ಪರೀಕ್ಷೆ ನಡೆಸಿದ ಸಂದರ್ಭ ಅವರ ವರದಿಯಲ್ಲೂ ಸೋಂಕು ದೃಢಪಟ್ಟಿದೆ ಹೀಗಾಗಿ ಎಲ್ಲರೂ ಹೋಂ ಕ್ವಾರಂಟೈನ್ ಮಾಡಲಾಗಿದೆ.
ಕೋವಿಡ್ ಪ್ರಕರಣದ ಹಿನ್ನೆಲೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಕಮಿಷನರ್ ಕೂಡಾ ಹೋಮ್ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ದಿನೇ ದಿನೆ ಪ್ರಕರಣಗಳು ಹೆಚ್ಚೆಚ್ಚು ವರದಿಯಾಗುತ್ತಿದೆ, ಜಿಲ್ಲೆಯಲ್ಲಿ ಸೋಮವಾರ 303 ಪಾಸಿಟಿವ್ ಪ್ರಕಾರಣಗಳು ದಾಖಲಾಗಿದ್ದು ಸಾರ್ವಜನಿಕರು ಜಾಗರೂಕತೆ ವಹಿಸಬೇಕಾಗಿದೆ.