ಅಣೆಕಟ್ಟಿನ ನೀರು ಬಿಡುವ ಎಚ್ಚರಿಕೆ. ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಶರಾವತಿ ನದಿ ಪಾತ್ರದ ಜನರಿಗೆ ಸೂಚನೆ.
ಹೊನ್ನಾವರ : ಶಿವಮೊಗ್ಗ ಜಿಲ್ಲೆಯಲ್ಲಿ ಬಾರೀ ಮಳೆ ಸುರಿಯುತ್ತಿದ್ದು, ಲಿಂಗನಮಕ್ಕಿ ಜಲಾಶಯಕ್ಕೆ ವ್ಯಾಪಕ ಪ್ರಮಾಣದ ನೀರು ಹರಿದು ಬರುತ್ತಿದೆ. ಮಳೆ ಹೀಗೆ ಮುಂದುವರಿದರೆ ಜಲಾಶಯದ ನೀರುಬಿಡಲಾಗುವುದು ಎಂದು ಸೂಚನೆ ನೀಡಲಾಗಿದೆ.
ಲಿಂಗನಮಕ್ಕಿ ಜಲಾಶಯದ ಗರಿಷ್ಠ ಮಟ್ಟ 1819 ಅಡಿ ಇದೆ. ಮಂಗಳವಾರ ನೀರಿನ ಮಟ್ಟ 1812.30 ಅಡಿ ತಲುಪಿದೆ. ನೀರಿನ ಒಳ ಹರಿವು ಕೂಡ 44 ಸಾವಿರ ಕ್ಯೂಸೆಕ್ ಇದೆ. ಮತ್ತೆ ಮಳೆ ಮುಂದುವರಿದರೆ ನೀರು ಬಿಡುವುದು ಅನಿವಾರ್ಯ ಎಂದು ಎಚ್ಚರಿಕೆ ನೀಡಲಾಗಿದೆ. ಲಿಂಗನಮಕ್ಕಿ ಜಲಾಶಯದಿಂದ ಬಿಟ್ಟ ನೀರು ಗೇರುಸೊಪ್ಪಾ ಜಲಾಶಯಕ್ಕೆ ಹರಿದು ಬರುತ್ತದೆ. ಇದು ಬ್ಯಾಲೇನ್ಸಿಂಗ್ ಡ್ಯಾಮ್ ಆಗಿರುವುದರಿಂದ ಲಿಂಗನಮಕ್ಕಿ ಜಲಾಶಯದಿಂದ ಬಿಟ್ಟಷ್ಟು ನೀರನ್ನು ಬಿಡುವುದು ಅನಿವಾರ್ಯವಾಗುತ್ತದೆ.
ಆದ್ದರಿಂದ ಶರಾವತಿ ನದಿ ತೀರದ ಜನರು ತಮ್ಮ ಜನ ಜಾನುವಾರುಗಳೊಂದಿಗೆ ಸುರಕ್ಷಿತ ಸ್ಥಳಕ್ಕೆ ತೆರಳಲು ಕೆಪಿಸಿಎಲ್ ನಿಂದ ಸೂಚನೆ ನೀಡಲಾಗಿದೆ.