ಜಿಲ್ಲೆಯಲ್ಲಿ ಕೆ.ಎಸ್.ಐ.ಸಿ. ಮೈಸೂರು ಸಿಲ್ಕ್ ಸೀರೆಗಳ ಮಾರಾಟ-ಪ್ರದರ್ಶನ

Source: so news | Published on 11th December 2019, 12:02 AM | Coastal News | Don't Miss |

 

ಉಡುಪಿ: ಮೈಸೂರು ಎಲ್ಲಾ ವಿಷಯಗಳಲ್ಲಿ ಬ್ರಾಂಡ್ ಆಗಿದೆ. ದೇಶದಲ್ಲಿಯೇ ಕೆ.ಎಸ್.ಐ.ಸಿ. ಮೈಸೂರು ಸಿಲ್ಕ್ ಸೀರೆಗಳು ತುಂಬಾ ಒಳ್ಳೆಯ ಹೆಸರು ಗಳಿಸಿದ್ದು, ಭಾರತದಲ್ಲಿ ದೊರೆಯುವ ರೇಷ್ಮೆ ವಸ್ತ್ರಗಳಿಂತ ಮೈಸೂರು ಸಿಲ್ಕ್ ವಿಭಿನ್ನವಾಗಿದೆ ಎಂದು ಜಿಲ್ಲಾಧಿಕಾರಿ ಜಿ ಜಗದೀಶ್ ಹೇಳಿದರು.
ಅವರು ಮಂಗಳವಾರ ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತದಿಂದ ಉಡುಪಿಯ ಡಯಾನ ಹೋಟೆಲ್ನಲ್ಲಿ ಆಯೋಜಿಸಲಾದ ಕೆ.ಎಸ್.ಐ.ಸಿ ಮೈಸೂರು ಸಿಲ್ಕ್ ಸೀರೆಗಳ ಪ್ರದರ್ಶನ ಮತ್ತು ಮಾರಾಟವನ್ನು ಉದ್ಘಾಟಿಸಿ ಮಾತನಾಡಿ, ಮಹಾರಾಜರ ಕಾಲದಲ್ಲಿ ಮೈಸೂರನ್ನು ಬ್ರಾಂಡಿಂಗ್ ಮಾಡಲು ಒತ್ತು ನೀಡಿದ್ದು, ಇಂದಿಗೂ ಅಂತಹ ಕುರುಹು ಕಾಣಸಿಗುತ್ತದೆ. ದೇಶ-ವಿದೇಶಗಳಲ್ಲಿ ಪ್ರಖ್ಯಾತಿ ಹೊಂದಿರುವ ಮೈಸೂರು ಸಿಲ್ಕ್ ಸೀರೆಗಳನ್ನು ಉಡುಪಿಗೆ ತಂದು, ಇಲ್ಲಿ ಶೇ. 25 ರಷ್ಟು ರಿಯಾಯಿತಿ ದರದಲ್ಲಿ ನೀಡುತ್ತಿದ್ದಾರೆ. ಸಾರ್ವಜನಿಕರು ಇದರ ಸದುಪಯೋಗ ಪಡೆದು, ಕೆ.ಎಸ್.ಐ.ಸಿ. ಮೈಸೂರು ಸಿಲ್ಕ್ ಸೀರೆಗಳ ಪ್ರದರ್ಶನ ಮತ್ತು ಮಾರಾಟವನ್ನು ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮದ ಪ್ರಧಾನ ವ್ಯವಸ್ಥಾಪಕ ಭಾನುಪ್ರಕಾಶ್ ಪ್ರಾಸ್ತಾವಿಕವಾಗಿ ಮಾತನಾಡಿ, ಕೆ.ಎಸ್.ಐ.ಸಿ ಮೈಸೂರು ಸಿಲ್ಕ್ ಸೀರೆಗಳು ಸರಕಾರಿ ಸಾಮ್ಯದ ಏಕೈಕ ಸಂಸ್ಥೆಯಾಗಿದ್ದು, 100 ವರ್ಷದ ಇತಿಹಾಸವಿದೆ. ಪ್ರಾಕೃತಿಕ ರೇಷ್ಮೆ ಗೂಡಿನಿಂದ ದೊರೆಯುವ ಅತ್ಯುತ್ತಮ ರೇಷ್ಮೆ ಹಾಗೂ ಪರಿಶುದ್ಧ ಚಿನ್ನದಿಂದ ಮಾಡಲ್ಪಟ್ಟಿದೆ. ಹಾಗೂ ಕೆ.ಎಸ್.ಐ.ಸಿ.ಯ ಮೈಸೂರು ಸಿಲ್ಕ್ ಸೀರೆಗಳಿಗೆ ಭೌಗೋಳಿಕ ಗುರುತಿನ ನೋಂದಾವಣಿ ಪಡೆದುಕೊಂಡಿದೆ. ಪ್ರತಿ ದಿನ 250 ಸೀರೆಗಳನ್ನು ತಯಾರಿಸಲಾಗುತ್ತಿದ್ದು, 350 ಸೀರೆಗಳ ಬೇಡಿಕೆ ಇದ್ದು, 6 ಸಾವಿರದಿಂದ 1.5 ಲಕ್ಷ ರೂ. ಗಳ ಸೀರೆಗಳು ಲಭ್ಯವಿದೆ. ಕೆ.ಎಸ್.ಐ.ಸಿ. ಮೈಸೂರು ಸಿಲ್ಕ್ ಸೀರೆಗಳ ಪ್ರದರ್ಶನ ಮತ್ತು ಮಾರಾಟವು ಇಂದಿನಿಂದ ಡಿ. 13 ರ ವರೆಗೆ ಉಡುಪಿಯಲ್ಲಿ ನಡೆಯಲಿದ್ದು, ಈ ಬಾರಿ 200 ಕೋಟಿ ರೂ. ಗಳ ಗುರಿಯನ್ನು ಹೊಂದಿದೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ವಾರ್ತಾಧಿಕಾರಿ ಬಿ.ಎ.ಖಾದರ್ ಷಾ, ಕೆ.ಎಸ್.ಐ.ಸಿ. ಮೈಸೂರು ಸಿಲ್ಕ್ ನ ಸಿಬ್ಬಂದಿಗಳು, ಉಡುಪಿ ಡಯಾನ ಹೋಟೇಲ್ನ ಮಾಲೀಕ ವಿಠಲ್ ಪೈ, ಮತ್ತಿತರರು ಹಾಜರಿದ್ದರು.

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...