ವಿಶ್ವಾಸಮತ ಯಾಚನೆಯಲ್ಲಿ ಸಿಎಂ ಎಚ್​.ಡಿ. ಕುಮಾರಸ್ವಾಮಿಗೆ ಸೋಲು: ಮೈತ್ರಿ ಸರ್ಕಾರದ ಪರರ 99, ವಿರುದ್ಧ 105 ಮತ

Source: S.O. News Service | Published on 23rd July 2019, 8:26 PM | State News | Don't Miss |

ಬೆಂಗಳೂರು: ಕರ್ನಾಟಕ ವಿಧಾನಸಭೆಯಲ್ಲಿ ಮಂಗಳವಾರ ನಡೆದ ಮತ ವಿಭಜನೆ ಪ್ರಕ್ರಿಯೆಯಲ್ಲಿ ಸಮ್ಮಿಶ್ರ ಸರ್ಕಾರದ ಪರ 99 ಶಾಸಕರು ಮತ ಹಾಕಿದರೆ, ಪ್ರತಿಪಕ್ಷದ ಪರ 105 ಶಾಸಕರು ಮತ ಹಾಕಿದರು. ತನ್ಮೂಲಕ ಸಂಖ್ಯಾಬಲ ಇಲ್ಲದೆ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ನೇತೃತ್ವದ ಸರ್ಕಾರ ಬಹುಮತ ಕಳೆದುಕೊಂಡು ಅಧಿಕಾರದಿಂದ ಕೆಳಗಿಳಿಯಿತು.

ಇದಕ್ಕೂ ಮುನ್ನ ಸಿಎಂ ಎಚ್​.ಡಿ. ಕುಮಾರಸ್ವಾಮಿ ವಿಶ್ವಾಸಮತ ಯಾಚಿಸಿದ ಬಳಿಕ ಸ್ಪೀಕರ್​ ಕೆ.ಆರ್​. ರಮೇಶ್​ಕುಮಾರ್​ ಧ್ವನಿಮತದ ಪ್ರಕ್ರಿಯೆಗೆ ಮುಂದಾದರು. ಆನಂತರದಲ್ಲಿ ಮತ ವಿಭಜನೆ ಪ್ರಕ್ರಿಯೆ ನಡೆಸುವಂತೆ ಪ್ರತಿಪಕ್ಷ ನಾಯಕ ಬಿ.ಎಸ್​. ಯಡಿಯೂರಪ್ಪ ಆಗ್ರಹಿಸಿದರು. ಅದರಂತೆ ವಿಧಾನಸಭಾಧ್ಯಕ್ಷ ಕೆ.ಆರ್​. ರಮೇಶ್​ಕುಮಾರ್​ ಮತ ವಿಭಜನೆಗೆ ಹಾಕಿದರು.

ಇದಾದ ಬಳಿಕ 2 ನಿಮಿಷ ಕಾಲ ಬೆಲ್​ ಹಾಕಿ ಎಲ್ಲ ಸದಸ್ಯರನ್ನು ಒಳಬರುವಂತೆ ಸೂಚಿಸಲಾಯಿತು. ಬಳಿಕ, ಸದನದ ಎಲ್ಲ ಬಾಗಿಲನ್ನೂ ಮುಚ್ಚಲಾಯಿತು. ಆನಂತರ ಸರ್ಕಾರ ಪರ ಮತ್ತು ಸರ್ಕಾರದ ವಿರುದ್ಧ ಇರುವ ಶಾಸಕರನ್ನು ಸಾಲುವಾರು ಎಣಿಕೆ ಮಾಡಿ ಸರ್ಕಾರದ ಪರ ಹಾಗೂ ವಿರುದ್ಧ ಇರುವ ಶಾಸಕರನ್ನು ಎಣಿಕೆ ಮಾಡಿದರು. 15 ಮಂದಿ ಅತೃಪ್ತ ಶಾಸಕರು ಹಾಗೂ ಇತರೆ 5 ಶಾಸಕರು ವಿಶ್ವಾಸಮತ ಯಾಚನೆ ಪ್ರಕ್ರಿಯೆಯಿಂದ ದೂರವುಳಿದರು.

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...