ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ: ಕುಮಾರಸ್ವಾಮಿ
ಶಿವಮೊಗ್ಗ: ಜೆಡಿಎಸ್ ಸಂಸದ ಪ್ರಜಿ ಕುಮಾರಸ್ವಾಮಿ ಡ್ರೈವ್ ಪ್ರಕರಣದಲ್ಲಿ ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ' ಎಂದು ಮಾಧ್ಯಮಗಳ ಮುಂದೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿನಂತಿಸಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ಪೆನ್ಡೈವ್ ಪ್ರಕರಣದಲ್ಲಿ ಎಚ್. ಡಿ. ದೇವೇಗೌಡರ ಹೆಸರು ಏಕೆ ತರುತ್ತೀರಿ? ನನ್ನ ಹೆಸರನ್ನು ಏಕೆ ಎಳೆದುತರುತ್ತೀರಿ' ಎಂದ ಅವರು ತಪ್ಪು ಮಾಡಿದವರು ಶಿಕ್ಷೆ ಅನುಭವಿಸಲೇಬೇಕು ಎಂದು ಖಾರವಾಗಿಯೇ ಹೇಳಿದರು.ಈ ಹಗರಣದಿಂದ ನನಗಷ್ಟೇ ಮುಜುಗರವಾಗೋದಿಲ್ಲ, ಇಡೀ ಸಮಾಜಕ್ಕೆ ಮುಜುಗರವಾಗುತ್ತದೆ ಎಂದು ಹೇಳಿದ ಅವರು, ಇದರಲ್ಲಿ ಯಾರನ್ನೂ ವಹಿಸಿಕೊಳ್ಳಲು ಹೋಗಲ್ಲ. ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ ಎಂದರು.
ಎಫ್ಐಆರ್ ಆಗಿದೆ, ಸತ್ಯಾಂಶ ಹೊರಬರಲಿ. ಎಸ್ಐಟಿ ತನಿಖೆ ಮಾಡಿ ವರದಿಯನ್ನು ನೀಡಲಿ. ಹಾಸನದಲ್ಲಿ ಪೆನ್ ಡ್ರೈವ್ ಬಿಟ್ಟವರು ಯಾರು? ಪೆನ್ ಡ್ರೈವ್ ಹಿಂದೆ ಯಾರಿದ್ದಾರೆ ಗೊತ್ತಾಗಲಿ ಎಂದು ಹೇಳಿದರು.