ಕುಮಟಾ : ಖಾಸಗಿ ಆಸ್ಪತ್ರೆಗಳಲ್ಲಿ ಬಾಣಂತಿ ಸಾವು. ವೈದ್ಯರ ನಿರ್ಲಕ್ಷ್ಯ ಆರೋಪ.

Source: SO News | By Laxmi Tanaya | Published on 28th June 2022, 10:27 PM | Coastal News | Don't Miss |

ಕುಮಟಾ :  ಖಾಸಗಿ ಆಸ್ಪತ್ರೆಯಲ್ಲಿ ಬಾಣಂತಿ ಮಹಿಳೆಯೋರ್ವಳು ಸಾವನ್ನಪ್ಪಿದ ಘಟನೆ ಮಂಗಳವಾರ ನಡೆದಿದೆ. 

 ವೈದ್ಯರ ನಿರ್ಲಕ್ಷದಿಂದಲೇ ಮಹಿಳೆ ಸಾವನ್ನಪ್ಪಿದ್ದಾಳೆಂದು ಮೃತಳ ಸಂಬಂಧಿಕರು ಆಸ್ಪತ್ರೆಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 ಜಯಮಾಲ ಲೋಕೇಶ ಮಿರ್ಜಾನಕರ್ (23) ಮೃತ ಬಾಣಂತಿಯಾಗಿದ್ದು, 
ಕಳೆದ ಎರಡು ದಿನಗಳ ಹಿಂದಷ್ಟೆ ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ಮಹಿಳೆ ಮಗುವಿಗೆವಜನ್ಮ ನೀಡಿದ್ದಳು‌.  ಎದೆನೋವೆಂದು ಹೇಳಿದ್ದರೂ ಕೂಡ ವೈದ್ಯರು ನಿರ್ಲಕ್ಷ್ಯ ಮಾಡಿದ್ದಾರೆಂದು ಸಂಬಂಧಿಕರು ಆರೋಪಿಸಿದ್ದಾರೆ.

ಈ ವೇಳೆ ಪೊಲೀಸರು ಮತ್ತು ವೈದ್ಯರೊಂದಿಗೆ ಮಾತಿನ ಚಕಮಕಿ ನಡೆದಿದೆ. ಪೋಸ್ಟ್ ಮಾರ್ಟ್ಂ ಬಳಿಕ ಸಾವಿಗೆ ನಿಖರ  ಕಾರಣ ಗೊತ್ತಾಗಲಿದೆ ಎಂದು ಪೊಲೀಸರು ಸಂಬಂಧಿಕರಿಗೆ ಸಮಧಾನ ಹೇಳಿದ್ದಾರೆ.

Read These Next

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...