ಕುಮಟಾ : ಉತ್ತರಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಅಂಕೋಲಾ, ಕುಮಟಾ, ಹೊನ್ನಾವರ ಭಾಗದಲ್ಲಿ ನೆರೆ ಪರಿಸ್ಥಿತಿ ಉದ್ಭವವಾಗಿದೆ.
ಅಂಕೋಲಾದ ಬಿಳಿಹೊಂಯ್ಗಿ, ಕೂರ್ವೆ, ಶಿರೂರು, ಬೆಳ್ಸೆ ಭಾಗದಲ್ಲಿ ಮನೆ, ಕೃಷಿ ಭೂಮಿಗಳಿಗೆ ನೀರು ನುಗ್ಗಿದೆ. ಕುಮಟಾ ತಾಲೂಕಿನ ಊರಕೇರಿ ಗ್ರಾಮದ ಹಲವೆಡೆ ಮಳೆ ಬಾರೀ ಆವಾಂತರ ಸೃಷ್ಟಿಸಿದೆ.
ಅಘನಾಶಿನಿ ನದಿ ಸೇರಿದಂತೆ ಅಕ್ಕಪಕ್ಕದ ಕೃಷಿ ಜಮೀನುಗಳು ಜಲಾವೃತವಾಗಿದ್ದು ಜನತೆ ತೊಂದರೆ ಅನುಭವಿಸಿದ್ದಾರೆ. ಶಾಸಕ ದಿನಕರ ಶೆಟ್ಟಿ ವಿವಿಧೆಡೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.