ಕುಂದಾಪುರ: ಬೆರಳೆಣಿಕೆ ದಿನಗಳ ಹಿಂದಷ್ಟೇ ಅಕ್ರಮ ಸಂಬಂಧ ಅಕ್ರಮವಲ್ಲ, ಅಪರಾಧವಲ್ಲಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು. ತೀರ್ಪು ಬಂದ ಎರಡೇ ದಿನಕ್ಕೆ ಶೃಂಗೇರಿಯ ವಿವಾಹಿತ ಪ್ರೇಮಿಗಳು ಉಡುಪಿಯ ಕುಂದಾಪುರದ ಲಾಡ್ಜ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಸಿಂಧುವಳ್ಳಿ ಗ್ರಾಮದ ಗುರುಮೂರ್ತಿ (೪೮) ಮತ್ತು ನೇತ್ರವಳ್ಳಿ ಗ್ರಾಮದ ಶಾರದಾ (೩೦) ಆತ್ಮಹತ್ಯೆ ಮಾಡಿಕೊಂಡ ವಿವಾಹಿತ ಪ್ರೇಮಿಗಳು. ಘಟನಾ ಸ್ಥಳದಲ್ಲಿ ಶಾರದಾ ಬರೆದಿರುವ ಡೆತ್ ನೋಟ್ ಸಿಕ್ಕಿದ್ದು, ನಮ್ಮ ಸಾವಿಗೆ ನನ್ನ ಗಂಡ ರಮೇಶ ಕಾರಣ ಅಂತ ಬರೆದುಕೊಂಡಿದ್ದಾಳೆ. ಬೇಸಾಯ ಮಾಡುತ್ತಿದ್ದ ಗುರುಮೂರ್ತಿಗೆ ಪುತ್ರಿಯಿದ್ದಾಳೆ. ಅವರು ತನ್ನ ಪತ್ನಿ ಮತ್ತು ಪುತ್ರಿಯನ್ನು ತೊರೆದು ಶಾರದಾ ಜೊತೆಗೆ ಬಂದಿದ್ದ. ಶಾರದಾಗೂ ಪತಿ ಮತ್ತು ಒಬ್ಬಳು ಮಗಳು ಇದ್ದು ಅವರಿಬ್ಬರನ್ನು ಬಿಟ್ಟು ಬಂದಿದ್ದಳು.
ನಡೆದ್ದು ಏನು?
ಸಪ್ಟೆಂಬರ್ ೨೬ರಂದು ಶೃಂಗೇರಿಯ ಉಡುಪಿಯ ಕುಂದಾಪುರಕ್ಕೆ ಬಂದಿದ್ದ ಈ ಜೋಡಿ, ನಾಲ್ಕು ದಿನಕ್ಕಾಗಿ ಹರಿಪ್ರಸಾದ್ ಲಾಡ್ಜ್ ನಲ್ಲಿ ಕೊಠಡಿ ಪಡೆದಿತ್ತು. ಸುತ್ತಮುತ್ತ ಓಡಾಡಿಕೊಂಡು ಮತ್ತೆ ಬಂದು ಲಾಡ್ಜ್ ನಲ್ಲಿ ತಂಗುತ್ತಿದ್ದರು. ಆದರೆ ಕಳೆದ ರಾತ್ರಿಯಿಂದ ಕೊಠಡಿ ಬಂದ್ ಇತ್ತು. ಸಂಜೆಯವರೆಗೆ ಬಾಗಿಲು ತೆಗೆಯದ ಕಾರಣ ಲಾಡ್ಜ್ ಸಿಬ್ಬಂದಿ ಸಂಶಯ ವ್ಯಕ್ತಪಡಿಸಿ, ಬಾಗಿಲು ಒಡೆದಿದ್ದಾರೆ. ಈ ಸಂದರ್ಭ ಎರಡು ಮೃತದೇಹಗಳು ಕಂಡುಬಂದಿದೆ. ಗುರುಮೂರ್ತಿ ಮೃತದೇಹ ಬೆಡ್ ಮೇಲಿದ್ದರೆ, ಶಾರದಾ ದೇಹ ಕೆಳಗೆ ಮಲಗಿದ ಸ್ಥಿತಿಯಲ್ಲಿತ್ತು.
ಮದ್ಯಕ್ಕೆ ಕೀಟನಾಶಕ ಬೆರೆಸಿ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಂದಾಪುರ ಪೊಲೀಸರು ಪ್ರಾಥಮಿಕ ಮಾಹಿತಿ ನೀಡಿದ್ದಾರೆ. ಕೊಠಡಿಯೊಳಗೆ ವಿಷದ ಬಾಟಲಿ ಮತ್ತು ಮದ್ಯದ ಬಾಟಲಿ ಸಿಕ್ಕಿದೆ. ಸ್ಥಳದಲ್ಲಿ ಶಾರದಾ ಬರೆದಿರುವ ಡೆತ್ ನೋಟ್ ಸಿಕ್ಕಿದೆ. ನಮ್ಮ ಸಾವಿಗೆ ನನ್ನ ಗಂಡ ರಮೇಶ ಕಾರಣ ಅಂತ ಬರೆದುಕೊಂಡಿದ್ದಾಳೆ.
ಗುರುಮೂರ್ತಿ ಹಾಗೂ ಶಾರದಾ ಪ್ರೀತಿಗೆ, ಅಕ್ರಮ ಸಂಬಂಧಕ್ಕೆ ಶಾರದಾ ಗಂಡ ರಮೇಶ ತಡೆಯೊಡ್ಡಿದ್ದನಂತೆ. ಈ ಬಗ್ಗೆ ಸಾಕಷ್ಟು ಬಾರಿ ಗಲಾಟೆಯಾಗಿದೆ ಎಂದು ಮೃತರ ಸಂಬಂಧಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದರಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗಿದೆ. ರಮೇಶನ ವಿರುದ್ಧ ಕುಂದಾಪುರ ಪೊಲೀಸರು ಪ್ರಕರಣ ದಾಖಲಿಸಲಿದ್ದಾರೆ
Read These Next
ಕಾರವಾರ: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ತಿಂಗಳಿಗೆ ಹತ್ತೂವರೆ ಸಾವಿರ: ಸೈಲ್
ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವನ್ನ ಗೆಲ್ಲಿಸಿದರೆ ತಿಂಗಳಿಗೆ ಹತ್ತೂವರೆ ಸಾವಿರ ಬಡ ಮಹಿಳೆಯರ ಖಾತೆಗೆ ಬರಲಿದೆ. ಈ ಅವಕಾಶವನ್ನ ...
ಭಟ್ಕಳದ ಅಂಜುಮಾನ್ ಇಂಜಿನಿಯರಿಂಗ್ ಕಾಲೇಜು ಗುಡ್ಡದ ಮೇಲಿನ ಸ್ವರ್ಗ - ಡಾ. ದಿನೇಶ್ ಗಾಂವ್ಕರ್
೨೦೨೪- ಶಿಕ್ಷಕ ಶೀರ್ಷಿಕೆ ಅಡಿಯಲ್ಲಿ ಅಂಜುಮಾನ್ ತಾಂತ್ರಿಕ ವಿದ್ಯಾಲಯದಲ್ಲಿ ಕನ್ನಡ ವೇದಿಕೆಯ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ...
ಕಣ್ಣೂರಿನಲ್ಲಿ ಭೀಕರ ರಸ್ತೆ ಅಪಘಾತ; ಒಂದೇ ಕುಟುಂಬದ ಐವರು ಮೃತ್ಯು
ಕಣ್ಣೂರಿನಲ್ಲಿ ಭೀಕರ ರಸ್ತೆ ಅಪಘಾತ; ಒಂದೇ ಕುಟುಂಬದ ಐವರು ಮೃತ್ಯು; ಮನೆಮಗನನ್ನು ಕೋಝಿಕ್ಕೋಡ್ನ ಹಾಸ್ಟೆಲ್ ಗೆ ದಾಖಲಿಸಿ ...
ಭಟ್ಕಳದ ಏಐಟಿಎಮ್ (AITM) ನಲ್ಲಿ ಕ್ಯೂ ಸ್ಪೈಡರ್ಸ್ ನಿಂದ ಕ್ಯಾಂಪಸ್ ಸಂದರ್ಶನ
ಬೆಂಗಳೂರಿನ ಕ್ಯೂ ಸ್ಪೈಡರ್ಸ್ ನಡೆಸಿದ ಕ್ಯಾಂಪಸ್ ಸಂದರ್ಶನದಲ್ಲಿ ಭಟ್ಕಳದ ಅಂಜುಮನ್ ಇನ್;ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ...
ಕಾರವಾರ: ಮಾದರಿ ನೀತಿ ಸಂಹಿತೆ ಉಲ್ಲಂಘನೆ ; ವಸ್ತುಗಳ ವಶ
ಅಬಕಾರಿ ಇಲಾಖೆ ವತಿಯಿಂದ 44.31 ಲೀ ಮದ್ಯ (ಮೌಲ್ಯ ರೂ.20,717) ವಶಪಡಿಸಿಕೊಂಡಿದ್ದು , ಇದುವರೆಗೆ ಅಬಕಾರಿ ಇಲಾಖೆ ವತಿಯಿಂದ ಒಟ್ಟು 1016 ಮತ್ತು ...
ಕಾರವಾರ: ಉಚಿತ ಕೌಶಲ್ಯ ಆಧಾರಿತ ತರಬೇತಿಗೆ ಅರ್ಜಿ ಆಹ್ವಾನ
ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ತರಬೇತಿ ಸಂಸ್ಥೆಯಲ್ಲಿ 18 ರಿಂದ 45 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗ ಯುವಕ ...
ಭಟ್ಕಳದ ಏಐಟಿಎಮ್ (AITM) ನಲ್ಲಿ ಕ್ಯೂ ಸ್ಪೈಡರ್ಸ್ ನಿಂದ ಕ್ಯಾಂಪಸ್ ಸಂದರ್ಶನ
ಬೆಂಗಳೂರಿನ ಕ್ಯೂ ಸ್ಪೈಡರ್ಸ್ ನಡೆಸಿದ ಕ್ಯಾಂಪಸ್ ಸಂದರ್ಶನದಲ್ಲಿ ಭಟ್ಕಳದ ಅಂಜುಮನ್ ಇನ್;ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ...
ಕಾರವಾರ: ಉಚಿತ ಕೌಶಲ್ಯ ಆಧಾರಿತ ತರಬೇತಿಗೆ ಅರ್ಜಿ ಆಹ್ವಾನ
ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ತರಬೇತಿ ಸಂಸ್ಥೆಯಲ್ಲಿ 18 ರಿಂದ 45 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗ ಯುವಕ ...
ಕಾರವಾರ: ಮೇ 7 ರ ವರೆಗೆ ತಾಪಮಾನ ಹೆಚ್ಚಳ: ಜಿಲ್ಲಾಧಿಕಾರಿ
ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜಿಲ್ಲೆಯಲ್ಲಿ ಮೇ 7 ರ ವರೆಗೆ ತಾಪಮಾನವು 33 ರಿಂದ 40 ಡಿಗ್ರಿ ಸೆಲ್ಸಿಯಸ್ ನಷ್ಟು ಹೆಚ್ಚಾಗುವ ...
ಕಾರವಾರ: ಚುನಾವಣಾ ಸಹಾಯವಾಣಿ ಕರೆ ಮತ್ತು ಸೀ ವಿಜಿಲ್ ದೂರು
ಸಾರ್ವಜನಿಕರ ಸಂದೇಹಗಳು ಮತ್ತು ದೂರುಗಳ ನಿವಾರಣೆಗೆ ಆರಂಭಿಸಿರುವ ಉಚಿತ ಸಹಾಯವಾಣಿ ಸಂಖ್ಯೆ 1950 ಗೆ ಏಪ್ರಿಲ್ 29 ರಂದು 14 ರಂದು ಕರೆಗಳನ್ನು ...
ಕಾರವಾರ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಂಚೆ ಮತದಾನ ಕೇಂದ್ರ
ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಂಚೆ ಮತದಾನ ಕೇಂದ್ರವನ್ನು ಸ್ಥಾಪಿಸಲಾಗಿದ್ದು, ಜಿಲ್ಲೆಯಲ್ಲಿ ಈಗಾಗಲೇ ಅಂಚೆ ಮತದಾನಕ್ಕೆ ...
ಕಾರು ಮರಕ್ಕೆ ಡಿಕ್ಕಿ:ಯುವತಿ ಸ್ಥಳದಲ್ಲಿ ಸಾವು,ನಾಲ್ವರಗೆ ಗಂಭೀರ ಗಾಯ
ಕಾರು ಮರಕ್ಕೆ ಡಿಕ್ಕಿ:ಯುವತಿ ಸ್ಥಳದಲ್ಲಿ ಸಾವು,ನಾಲ್ವರಗೆ ಗಂಭೀರ ಗಾಯ