ಕುಂದಾಪುರ : ಅಕ್ರಮ ಸಕ್ರಮದಲ್ಲಿಯೂ ಅವ್ಯವಹಾರ - ಆರು ಜನರ ವಿರುದ್ದ ಪ್ರಕರಣ ದಾಖಲು

Source: manju | By Arshad Koppa | Published on 4th November 2016, 12:01 PM | State News | Incidents | Don't Miss |

photo: ಗೋಪಾಲ ಪೂಜಾರಿ,ವಿಜಯ ಶೆಟ್ಟಿ,  ಹಿಂದಿನ ತಹಸೀಲ್ದಾರ್ ಗಾಯತ್ರಿ ನಾಯಕ್

ಕುಂದಾಪುರ : ಅಕ್ರಮ ಸಕ್ರಮ ಸಮಿತಿಯ ಸದಸ್ಯರ ಕುಟುಂಬಕ್ಕೆ ಹಲವು ಎಕ್ರೆ ಬೂಮಿಯನ್ನು ಅಧಿಕಾರ ದುರುಪಯೋಗಪಡಿಸಿಕೊಂಡು ಮಂಜೂರು ಮಾಡಿದ ಘಟನೆಗೆ ಸಂಬಂಧಿಸಿ ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ ಸೇರಿದಂತೆ ಆರು ಜನರ ವಿರುದ್ಧ ಕುಂದಾಪುರದ ಲೋಕಾಯುಕ್ತ ನ್ಯಾಯಾಲಯದಲ್ಲಿ ದೂರು ದಾಖಲಾದ ಘಟನೆ ನಡೆದಿದೆ. ಆ ಮೂಲಕ ಅಕ್ರಮ ಸಕ್ರಮ ಸಮಿತಿಯಲ್ಲಿ ನಡೆಯುತ್ತಿರುವ ಅವ್ಯವಹಾರಗಳು, ಭ್ರಷ್ಟಾಚಾರ ವಿರುದ್ಧ ಗ್ರಾಮಸ್ಥರು ಸೆಟೆದು ನಿಮತಿದ್ದು, ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿಯಲ್ಲಿ ಪ್ರಕರರಣ ದಾಖಲಿಸಿ ತನಿಖೆ ನಡೆಸಿ ವರದಿ ನೀಡುವಂತೆ ಲೋಕಾಯುಕ್ತ ನ್ಯಾಯಾಲಯದ ನ್ಯಾಯಾಧೀಶ ರಾಜಶೇಖರ ವಿ ಪಾಟೀಲ್ ಕುಂದಾಪುರ ಡಿವೈಎಸ್ಪಿಯವರಿಗೆ ಆದೇಶ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಬೈಂದೂರು ವುಧಾನ ಸಭಾ ಸದಸ್ಯ ಕೆ. ಗೋಪಾಲ ಪೂಜಾರಿ ಅಧ್ಯಕ್ಷತೆಯಲ್ಲಿರುವ್ಷಕ್ರಮ ಸಕ್ರಮ ಸಮಿತಿಯಲ್ಲಿ ಕಾಲ್ತೋಡು ವಿಜಯ ಶೆಟ್ಟಿ, ಸಾಧು ಎಸ್. ಬಿಲ್ಲವ, ಭೋಜ ನಾಯಕ್ ಇದ್ದು, ಅಂದಿನ ತಹಸೀಲ್ದಾರ್ ಗಾಯತ್ರಿ ಎಸ್. ನಾಯಕ್ ಕಾರ್ಯದರ್ಶಿಯಾಗಿದ್ದರು. ಈ ಸಂದರ್ಭ ವಿಜಯ ಶೆಟ್ಟಿಯವರು ಸಮಿತಿಯನ್ನು ದುರುಪಯೋಗಪಡಿಸಿಕೊಂಡು ಅವರ ಪತ್ನಿ ಜ್ಯೋತಿ ಶೆಟ್ಟಿಯವರ ಹೆಸರಿಗೆ ಹಲವು ಎಕ್ರೆ ಭೂಮಿ ಮಂಜೂರು ಮಾಡಿಸಕೊಂಡಿದ್ದಲ್ಲದೇ ನಿಯಮದಂತೆ ಕೃಷಿ ಮಾಡಬೇಕಾದ ಭೂಮಿಯಲ್ಲಿ ಕೆಂಪು ಕಲ್ಲುಕ್ವಾರಿ ನಡೆಸುತ್ತಿದ್ದು ಇದು ಭ್ರಷ್ಟಾಚಾರಕ್ಕೆ ಹಿಡಿದ ಕನ್ನಡಿ ಎಂಬುದಾಗಿ ಸ್ಥಳೀಯರಾದ ಬಿ.ಎಸ್.ಸುರೇಶ್ ಶೆಟ್ಟಿ ಎಂಬುವರು ಕುಂದಾಪುರದ ಲೋಕಾಯುಕ್ತ ನ್ಯಾಯಾಲಯಕ್ಕೆ ಖಾಸಗೀ ಪಿರ್ಯಾದಿ ಸಲ್ಲಿಸಿದ್ದರು ಎಂದು ತಿಳಿದು ಬಂದಿದೆ. ದೂರನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಧೀಶ ರಾಜಶೇಖರ ವಿ ಪಾಟೀಲ್ ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸಿ ವರದಿ ನೀಡುವಂತೆ ಕುಂದಾಪುರ ಡಿವೈಎಸ್ಪಿಗೆ ಆದೇಶಿಸಿದ್ದಾರೆ ಎಂಬುದಾಗಿ ದೂರುದಾರ ಪರ ವಕೀಲ ಕೆ.ಸಿ.ಶೆಟ್ಟಿ ತಿಳಿಸಿದ್ದಾರೆ.

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...