ಕುಂದಾಪುರ:ತಿರುಪತಿಗೆ ಪಾದ ಯಾತ್ರೆ

Source: so english | By Arshad Koppa | Published on 29th July 2017, 4:43 PM | Coastal News | Guest Editorial |

ಕುಂದಾಪುರ: ಹಲವುವರ್ಷಗಳಿಂದ ಕಾಲ್ನಡಿಗೆಯಲ್ಲಿ ಪಾದ ಯಾತ್ರೆಯನ್ನು ಹಮ್ಮಿಕೊಳ್ಳುತ್ತಿರುವ ಖ್ಯಾತ ಉದ್ಯಮಿ ಹಾಗೂ ಶ್ರೀ ವೆಂಕಟೇಶ್ವರ ಸ್ವೀಟ್ ನ ಮಾಲೀಕ ಲಕ್ಷ್ಮೀ ನಾರಾಯಣ ರಾವ್ ಮತ್ತು ಶ್ರೀಧರ ಪಿ. ಎಸ್.  ಅವರ ನೇತೃತ್ವದಲ್ಲಿ ಸುಮಾರು ನೂರಕ್ಕೂ ಮಿಕ್ಕಿದ ಭಕ್ತರ ತಂಡ ನಿನ್ನೆ ಬೆಳಗ್ಗೆ ಕಾಲ್ಮಡಿಗೆಯಲ್ಲಿ ತಿರುಪತಿ ಯಾತ್ರೆಗೆ ಸಾಲಿಗ್ರಾಮದಿಂದ ಹೊರಟಿದೆ.  ದಿನವೊಂದರ ಸುಮಾರು 40ರಿಂದ 50 ಕಿ.ಮಿ. ಸಂಚರಿಸುವ ಈ ತಂಡದಲ್ಲಿ ಕುಮಟಾ, ಅಂಕೋಲ, ಹೊನ್ನಾವರ ಸೇರಿದಂತೆ ಕೊಲ್ಲೂರಿನ ಭಕ್ತಾಧಿಗಳು ಬಾಗವಹಿಸುತ್ತಿದ್ದು, ಕುಂದಾಪುರ ಚಿಕನ್ ಸಾಲ್ ವಾಸಿಗಳಾದ ಪ್ರಶಾಂತ ಮೇಲ್ಮನೆ, ವೆಂಕಟೇಶ್(ಟಿಂಕು), ಶರತ್ ಸೇರಿದಂತೆ ಹಲವರಿದ್ದಾರೆ. ಸುಮಾರು ಹದಿನೆಂಟು ದಿನಗಳಲ್ಲಿ ತಿರುಪತಿಯನ್ನು ತಲಪುವ ಗುರಿಯನ್ನಿರಿಸಿಕೊಳ್ಳಲಾಗಿದೆಯೆಂದು ಯಾತ್ರಿಗಳು ತಿಳಿಸಿದ್ದಾರೆ.   
 

Read These Next

ಪ್ರಜಾಸತ್ತೆಯ ಬಂಧನ!

ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...

ಚಿಂದಿ ಆಯುವ ಹಕ್ಕು

ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...