ಗೋರಕ್ಷಕರ ದಾಳಿ ಭೀತಿ; ಸಾಕುದನವನ್ನು ಪೊಲೀಸ್ ಠಾಣೆಗೆ ಒಪ್ಪಿಸಿದ ಕಾರ್ಪೋರೇಟರ್

Source: sonews | By Staff Correspondent | Published on 18th January 2018, 1:24 AM | National News | Don't Miss |

ಲಕ್ನೊ: ತನ್ನ ಮೇಲೆ ‘ಗೋರಕ್ಷಕ’ರಿಂದ ದಾಳಿ ನಡೆಯಬಹುದೆಂಬ ಭೀತಿಯಿಂದ ಉತ್ತರಪ್ರದೇಶದ ಮೀರತ್ ನಗರದ ಮುಸ್ಲಿಂ ಕಾರ್ಪೊರೇಟರ್ ತಮ್ಮ ಮನೆಯಲ್ಲಿ ಸಾಕುತ್ತಿದ್ದ ದನವನ್ನು ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.

ವಾರ್ಡ್ 73ರ ಕಾರ್ಪೊರೇಟರ್, ಬಹುಜನ ಸಮಾಜವಾದಿ ಪಕ್ಷದ ಮುಖಂಡ ಅಬ್ದುಲ್ ಗಫ್ಫಾರ್ ಮಂಗಳವಾರ ತಮ್ಮ ಸಾಕುದನದೊಂದಿಗೆ ನೌಚಾಂಡಿ ಪೊಲೀಸ್ ಠಾಣೆಗೆ ಆಗಮಿಸಿ, ಹಸುವನ್ನು ನೋಡಿಕೊಳ್ಳುವಂತೆ ಪೊಲೀಸ್ ಅಧಿಕಾರಿ ಸಂಜಯ್ ಕುಮಾರ್  ರನ್ನು ಕೋರಿದ್ದಾರೆ. ಇವರೊಂದಿಗೆ ಕುಟುಂಬದ ಸದಸ್ಯರು ಹಾಗೂ ನೆರೆಮನೆಯವರಿದ್ದರು. ಈ ದನವನ್ನು ಸಾಕುವವರಿಗೆ ಹಸ್ತಾಂತರಿಸಬೇಕು. ಪ್ರತೀ ತಿಂಗಳು ಅವರ ಮನೆಗೆ ಹೋಗಿ ನನ್ನ ದನವನ್ನು ನೋಡಿಕೊಂಡು ಬರುತ್ತೇನೆ ಎಂದು ಪೊಲೀಸರನ್ನು ವಿನಂತಿಸಿರುವುದಾಗಿ ಗಫ್ಫಾರ್ ತಿಳಿಸಿದ್ದಾರೆ. ಹಸುವನ್ನು ಠಾಣೆಗೆ ಹಸ್ತಾಂತರಿಸಿದ ಬಗ್ಗೆ ಗಫ್ಫಾರ್  ಗೆ ರಶೀದಿ ನೀಡಲಾಗಿದೆ. ಎರಡು ವರ್ಷದ ಹಿಂದೆ ತನ್ನ ಸೋದರಿ ನೀಡಿದ ಕರುವನ್ನು ಅತ್ಯಂತ ಕಾಳಜಿಯಿಂದ ಸಾಕಿದ್ದೇನೆ. ಆದರೆ ಈಗ ತಥಾಕಥಿತ ಗೋರಕ್ಷಕರ ದಾಳಿಯ ಭೀತಿಯ ಕಾರಣ ಅತ್ಯಂತ ನೋವಿನಿಂದ ದನವನ್ನು ಮನೆಯಿಂದ ಹೊರಗೆ ಕಳಿಸುತ್ತಿದ್ದೇನೆ . ಇದು ತನ್ನ ವೈಯಕ್ತಿಕ ನಿರ್ಣಯ. ಇದರಲ್ಲಿ ಪಕ್ಷದ ಪಾತ್ರವೇನೂ ಇಲ್ಲ ಎಂದು ಗಫ್ಫಾರ್ ಹೇಳಿದ್ದಾರೆ. 
ಹಸುವನ್ನು ಗಫ್ಫಾರ್  ಗೆ ಮರಳಿಸುವುದಾಗಿ ಪೊಲೀಸ್ ಅಧೀಕ್ಷಕ ಮಾನ್  ಸಿಂಗ್ ಚೌಹಾಣ್ ಹೇಳಿದ್ದಾರೆ. ಆದರೆ ತನ್ನ ನಿರ್ಧಾರ ಬದಲಿಸುವುದಿಲ್ಲ ಎಂದು ಗಫ್ಫಾರ್ ತಿಳಿಸಿದ್ದಾರೆ. 
ಕಳೆದ ಕೆಲ ವರ್ಷಗಳಲ್ಲಿ ದೇಶದಾದ್ಯಂತ ಗೋರಕ್ಷಣೆಯ ಹೆಸರಲ್ಲಿ ನಡೆಯುತ್ತಿರುವ ಹಿಂಸಾಚಾರ ಹೆಚ್ಚಿದ್ದು ತಥಾಕಥಿಕ ಗೋರಕ್ಷಕರು ಜನರನ್ನು ಥಳಿಸುವುದು, ಅವರ ಬಳಿಯಿದ್ದ ಹಸುಗಳನ್ನು ಸೆಳೆದೊಯ್ಯುವುದು ಇತ್ಯಾದಿ ಕೃತ್ಯಗಳಿಂದ ಒಂದು ವರ್ಗದ ಜನರಲ್ಲಿ ಭೀತಿಯ ವಾತಾವರಣ ಮೂಡಿಸಿದ್ದಾರೆ. ಕೆಲವು ಸಂಘಟನೆಗಳು ಅಲ್ಪಸಂಖ್ಯಾತ ಸಮುದಾಯದವರನ್ನು ಗುರಿಯಾಗಿಸಿ ನಡೆಸುತ್ತಿರುವ ಈ ಹಿಂಸಾಚಾರವನ್ನು ಹತ್ತಿಕ್ಕಲು ಕೇಂದ್ರದ ಬಿಜೆಪಿ ನೇತೃತ್ವದ ಸರಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ವಿಪಕ್ಷಗಳು ಟೀಕಿಸಿವೆ.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...