ಉಪಚುನಾವಣೆ ಕಾಂಗ್ರೆಸ್ ನಿಂದ ಬಿ.ಫಾರ್ಮ್ ನೀಡುವಂತೆ ಲಕ್ಷ್ಮಣ ಬನಸೋಡೆ ಮನವಿ

Source: sonews | By Staff Correspondent | Published on 20th September 2019, 5:16 PM | Coastal News |

ಮುಂಡಗೋಡ : ಯಲ್ಲಾಪುರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೇಟ್ ನೀಡಬೇಕೆಂದು  ಯುವ ಕಾಂಗ್ರೆಸ್ ಮುಖಂಡ, ಉದ್ಯಮಿ ಲಕ್ಷ್ಮಣ ಬನಸೋಡೆ ಮುಂಡಗೋಡ ತಾಲೂಕಾ ಬ್ಲಾಕ್ ಅಧ್ಯಕ್ಷ ಕೃಷ್ಣ ಹಿರಳ್ಳಿ ಅವರಿಗೆ ಮನವಿ ಅರ್ಪಿಸಿದ್ದಾರೆ.

ತಮಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಬಿ.ಫಾರ್ಮ್‍ನೀಡಬೇಕು. ತಾವು ಸ್ಪರ್ಧಿಸಿದರೆ ಗೆಲವು ನಿಶ್ಚಿತ.  ಯಲ್ಲಾಪುರ ಕ್ಷೇತ್ರದಲ್ಲಿ ಮತದಾರರು  ಕಾಂಗ್ರೆಸ್ ಪರ ಹೆಚ್ಚಿನ ಒಲವು ತೋರುತ್ತಿದ್ದಾರೆ ಅಲ್ಲದೆ  ಪಕ್ಷದ ಪರ ಹೆಚ್ಚಿನ ಮತಗಳನ್ನು ಹೊಂದಿದೆ. ಜನಪರ ಕಾಳಜಿ ಉಳ್ಳನನಗೆ ಎಲ್ಲ ಜನಾಂಗದವರ ಒಲವು ಇದೆ.

ಯಲ್ಲಾಪುರ ಕ್ಷೇತ್ರವು  ಗೆಲುವು ಸಾಧಿಸಲು ಮುಖ್ಯ ಕೇಂದ್ರವಾಗಿದೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದರೆ ನನ್ನದೇ ಆದ ಶಕ್ತಿಯಿಂದ ಮತ್ತು ಕಾಂಗ್ರೆಸ್ ಪಕ್ಷದ ಮತಗಳನ್ನು ಪಡೆದು ಸುಮಾರು 90 ರಿಂದ ಒಂದು ಲಕ್ಷ ಮತಗಳಿಗಿಂತ ಹೆಚ್ಚು ಮತಗಳನ್ನು ಪಡೆಯುವುದರ ಜೊತೆಗೆ ಜಯಗಳಿಸುತ್ತೇನೆ ಎಂಬ ದೃಢ ವಿಶ್ವಾಸ ನನಗಿದೆ. ನಾನು ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಾಗಿ ಸಮಾಜ ಸೇವೆಯನ್ನೇ ಮೈಗೂಡಿಸಿಕೊಂಡು ಸಾರ್ವಜನಿಕ ಸೇವೆಗೆ ಧಾರ್ಮಿಕ ಸಂಘಟನೆ, ಸರ್ವಧರ್ಮ ಸಮಾನತೆಗಾಗಿ ನನ್ನ ಶ್ರಮವನ್ನೇ ಮುಡಿಪಾಗಿಟ್ಟಿದ್ದೇನೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.


 

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...