ಕಾರವಾರ: ರೈತರು ವಿಮಾ ಕಂತು ಪಾವತಿಸಲು ಜೂನ್ 30 ಕೊನೆಯದಿನ
ಕಾರವಾರ: ಮುಂಗಾರು ಹಂಗಾಮಿನಲ್ಲಿ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು ಅನುಷ್ಟಾನಗೊಳಿಸಲು, ರಾಜ್ಯ ಸರ್ಕಾರದ ಆದೇಶದ ಪ್ರಕಾರ, ಬೆಳೆ ಸಾಲ ಪಡೆಯುವ ಮತ್ತು ಬೆಳೆ ಸಾಲ ಪಡೆಯದ ರೈತರು ವಿಮಾ ಕಂತನ್ನು ಪಾವತಿಸಲು ಜೂನ 30 ಕೊನೆಯ ದಿನವಾಗಿರುತ್ತದೆ.
ಜಿಲ್ಲೆಯಲ್ಲಿ ಅಡಿಕೆ ಮತ್ತು ಕಾಳುಮೆಣಸು ಬೆಳೆಗಳಿಗೆ ಬೆಳೆ ವಿಮಾ ಸೌಲಭ್ಯವಿದ್ದು, ಅಡಿಕೆ ಬೆಳೆಯ ವಿಮಾ ಮೊತ್ತ ರೂ. 1,28,000 ಪ್ರತಿ ಹೆಕ್ಟೇರ್ ಆಗಿದ್ದು, ರೈತರು ಭರಿಸುವ ಪ್ರೀಮಿಯಂ ಮೊತ್ತ ರೂ. 6,400 ಪ್ರತಿ ಹೆಕ್ಟೇರ್ (ವಿಮಾ ಮೊತ್ತದ 5%) ಆಗಿರುತ್ತದೆ. ಕಾಳುಮೆಣಸು ಬೆಳೆಯ ವಿಮೆ ಮೊತ್ತ ರೂ. 47,000 ಪ್ರತಿ ಹೆಕ್ಟೇರ್ಗೆ ಆಗಿದ್ದು, ರೈತರು ರೂ. 2,350/ ಹೆಕ್ಟೇರ್ಗೆ (ವಿಮಾ ಮೊತ್ತದ 5%) ಪಾವತಿಸಬೇಕು. ನಿಗದಿತ ಅರ್ಜಿ ನಮೂನೆ, ಬ್ಯಾಂಕ್ ಪಾಸ್ ಪುಸ್ತಕದ ಯಥಾ ಪ್ರತಿ, ಬೆಳೆ ನಮೂದಿರುವ ಪಹಣಿ ಪತ್ರಿಕೆ, ಸ್ವಯಂ ದೃಢೀಕರಣ ಮತ್ತು ಆಧಾರ್ ಕಾರ್ಡ್ನ ಪ್ರತಿಯೊಂದಿಗೆ ಸಂಬಂಧಿತ ಬ್ಯಾಂಕ್ ಶಾಖೆಯಲ್ಲಿ ಅಂತಿಮ ದಿನಾಂಕದ ಒಳಗಾಗಿ ನೊಂದಾವಣೆ ಮಾಡಿಕೊಳ್ಳಬಹುದಾಗಿದೆ.
ಪ್ರಸಕ್ತ ಸಾಲಿಗೆ ಉತ್ತರ ಕನ್ನಡ ಜಿಲ್ಲೆಗೆ ಒರಿಯೆಂಟಲ್ ಆಯ್ಸಿ., ಇವರನ್ನು ವಿಮಾ ಸಂಸ್ಥೆಯನ್ನಾಗಿ ಗುರುತಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ತೋಟಗಾರಿಕಾ ಇಲಾಖೆಯ ಕಛೇರಿ ಅಥವಾ ಹತ್ತಿರದ ಬ್ಯಾಂಕ್ ಶಾಖೆಗಳನ್ನು ಸಂಪರ್ಕಿಸಬಹುದಾಗಿದೆ.