ಮಂಗಳೂರು : ಸಿ.ಎಂ ತವರು ಜಿಲ್ಲೆಯಲ್ಲಿ ಕಾನೂನು ವ್ಯವಸ್ಥೆ ಇಲ್ಲವಾ. ಜನ ಸಾಮಾನ್ಯರ ಮರಳು ಗಾಡಿಯನ್ನ ವಶ ಪಡಿಸಿಕೊಳ್ಳತ್ತಾರೆ. ಆದರೆ ಲಾರಿಯಲ್ಲಿ ಸ್ಪೋಟಕ ವಸ್ತು ಸಾಗಾಟ ಮಾಡುವವರನ್ನ ಏಕೆ ಹಿಡಿದಿಲ್ಲ ಎಂದು ಶಾಸಕ ಯು ಟಿ ಖಾದರ್ ಹೇಳಿದ್ದಾರೆ
ಶಿವಮೊಗ್ಗ ಜಿಲ್ಲೆಯಲ್ಲಿನ ಸ್ಪೋಟಕ ವಿಚಾರಕ್ಕೆ ಪ್ರತಿಕ್ರೀಯಿಸಿದ ಅವರು,
ಯಾಕೆ ಇದು ಯಾವುದು ಅಧಿಕಾರಿಗಳು ಗೊತ್ತಿಲ್ಲವಾ ? ಗಣಿಗಾರಿಕೆ ಅಧಿಕಾರಿಗಳನ್ನ ಕೂಡಲೇ ಸಸ್ಪೆಂಡ್ ಮಾಡಿ ಎಂದು ಒತ್ತಾಯಿಸಿದರು.
ಘಟನೆಯಿಂದ ಜನಸಾಮಾನ್ಯರ ಮನೆಗಳು ಹಾಳಾಗಿವೆ. ಯಾಕೆ ಸರಕಾರ ಇದರ ಬಗ್ಗೆ ತನಿಖೆ ಮಾಡಲು ಹಿಂದೇಟು ಹಾಕಿದೆ.
ಮುಂದಿನ ದಿನಗಳಲ್ಲಿ ಶಿವಮೊಗ್ಗ ಜಿಲ್ಲೆ ಜನರ ಜೀವನದ ಮೇಲೆ ಪರಿಣಾಮ ಬೀಳಲಿದೆ ಎಂದರು.
ಮನೆ ಹಾಳದವರಿಗೆ ಕೂಡಲೇ ಪರಿಹಾರ ನೀಡಬೇಕು ಎಂದು ಮಾಜಿ ಸಚಿವ ಯು.ಟಿ.ಖಾದರ್ ಮಂಗಳೂರನಲ್ಲಿ ಆಗ್ರಹಿಸಿದ್ದಾರೆ.