ಐಎಂಎ ಕಂಪನಿಯಲ್ಲಿ ಹಣ ಹೂಡಿ ಮೋಸ ಹೋದವರಿಗೆ ಎಪಿಸಿಆರ್ ನಿಂದ ಕಾನೂನು ನೆರವು

Source: so news | By MV Bhatkal | Published on 17th June 2019, 6:08 PM | Coastal News | Don't Miss |

ಭಟ್ಕಳ: ಬೆಂಗಳೂರಿನ ಐಎಂಎ ಕಂಪನಿಯಲ್ಲಿ ಬಂಡವಾಳ ಹೂಡಿ ಮೋಸ ಹೋದ ಗ್ರಾಹಕರಿಗೆ ನಾಗರೀಕ ಹಕ್ಕು ಸಂರಕ್ಷಣಾ ಸಂಸ್ಥೆ(ಎಪಿಸಿಆರ್) ಕಾನೂನು ನೆರವು ನೀಡುವುದಾಗಿ  ಎಪಿಸಿಆರ್ ರಾಜ್ಯಸಮಿತಿ ಸದಸ್ಯ ಇನಾತುಲ್ಲಾ ಗವಾಯಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಬೆಂಗಳೂರಿನಲ್ಲಿರುವ ಸಂಸ್ಥೆಯ ನ್ಯಾಯಾವಾದಿಗಳ ತಂಡವು ಐಎಂಎ ಕಂಪನಿಯಲ್ಲಿ ಹಣ ಹೂಡಿಕೆ ಮಾಡಿ ಈಗ ತಮ್ಮ ಹಣಕ್ಕಾಗಿ ಕಾನೂನು ಹೋರಾಟ ನಡೆಸಿರುವ ಸಂತೃಸ್ತರಿಗೆ ಅಗತ್ಯ ಕಾನೂನು ನೆರವು ನೀಡುವುದರ ಮೂಲಕ ಸಂತೃಸ್ತರ ಸೇವೆಗೆ ನಮ್ಮ ಸಂಸ್ಥೆ ಸದಾ ಸಿದ್ದವಿದೆ ಎಂದ ಅವರು ಈ ಕುರಿಂತೆ ಸಂಸ್ಥೆಯ ರಾಜ್ಯಕಾರ್ಯದರ್ಶಿ ನ್ಯಾಯವಾದಿ ಮುಹಮ್ಮದ್ ನಿಯಾಝ್ ರಾಜ್ಯದ ಎಲ್ಲ ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ಯಾರೆಲ್ಲಾ ಹಣ ಹೂಡಿಕೆ ಮಾಡಿ ಮೋಸಹೋಗಿದ್ದಾರೋ ಅಂತಹ ವ್ಯಕ್ತಿಗಳ ರಕ್ಷಣೆಗಾಗಿ ಮುಂದೆ ಬಂದಿದ್ದಾರೆ ಈ ನಿಟ್ಟಿನಲ್ಲಿ ಅವರು ಎಲ್ಲಾ ಜಿಲ್ಲೆಯ ಸಂಚಾಲಕರು ಸಂತೃಸ್ತರ ಕುರಿತಂತೆ ಮಾಹಿತಿ ಪಡೆದು ಅವರಿಗೆ ಸೂಕ್ತ ಕಾನೂನು ನೆರವು ನೀಡಲು ಪ್ರಯತ್ನಿಸಬೇಕೆಂದು ಪತ್ರಿಕಾ ಪ್ರಕಟಣೆಯ ಮೂಲಕ ವಿನಂತಿಸಿಕೊಂಡಿದ್ದಾರೆ. 

ರಾಜ್ಯದಲ್ಲಿ ಐಎಂಎ ಹಗರಣ ಬೆಳಕಿಗೆ ಬಂದ ನಂತರ ಸಾವಿರಾರು ಮಂದಿ ಈ ಮೋಸದ ಕಂಪನಿಯಲ್ಲಿ ಹಣಹೂಡಿಕೆ ಮಾಡುವುದರ ಮೂಲಕ ಸಾಕಷ್ಟು ನಷ್ಟವನ್ನು ಅನುಭವಿಸುತ್ತಿದ್ದಾರೆ. ಮಧ್ಯಮ ವರ್ಗದ ಜನರೇ ಇದರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹಣಹೂಡಿಕೆ ಮಾಡಿರುವುದು ಕಂಡು ಬಂದಿದ್ದು ಎಪಿಸಿಆರ್ ಸಂಸ್ಥೆಗೆ ಸಂಪರ್ಕಿಸಿದ್ದಲ್ಲಿ  ಆ ಎಲ್ಲ ಸಂತೃಸ್ತರಿಗೆ ಕಾನೂನು ನೆರವು ನೀಡುವ ಪಣ ತೊಟ್ಟಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದು ಹೆಚ್ಚಿನ ಮಾಹಿತಿಗಾಗಿ ಉತ್ತರಕನ್ನಡ ಜಿಲ್ಲೆಯ ಜನತೆ ಎಪಿಸಿಆರ್ ಜಿಲ್ಲಾ ಸಂಚಾಲಕ ಖಮರುದ್ದೀನ್ ಮಷಾಯಿಖ್ (9148529567) ಹಾಗೂ  ಎಪಿಸಿಆರ್ ಕರ್ನಾಟಕ ಘಟಕ 080-23435669 ಗೆ ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬೇಕೆಂದು ತಿಳಿಸಲಾಗಿದೆ.  

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...