ಜೀವನವೂ ಒಂದು ಕ್ರೀಡೆ ಇದ್ದಂತೆ: ಆಕ್ರಮಣಶೀಲ ಆಟವಾಡಿ ಗೆಲುವು ನಮ್ಮದಾಗಿಸಿಕೊಳ್ಳಬೇಕು-ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Source: SO News | By Laxmi Tanaya | Published on 16th January 2023, 10:58 PM | State News | Don't Miss |

ಧಾರವಾಡ : ಸ್ವಾಮಿ ವಿವೇಕಾನಂದರ ಹೆಸರಿನಲ್ಲಿ ರಾಜ್ಯ ಸರ್ಕಾರ ಯೋಜನೆ ರೂಪಿಸಿದೆ. ಗ್ರಾಮೀಣ ಯುವಸಂಘಗಳ ಮೂಲಕ ಸ್ಥಳೀಯ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಿ ಐದು ಲಕ್ಷ ಜನರಿಗೆ ಉದ್ಯೋಗ ಒದಗಿಸುವ ಹೊಂದಲಾಗಿದೆ. ಯುವನೀತಿಯಲ್ಲಿ ಶಿಕ್ಷಣ, ಕ್ರೀಡೆ, ಸಂಸ್ಕೃತಿ, ವ್ಯಕ್ತಿತ್ವ ವಿಕಸನಕ್ಕೆ ಆದ್ಯತೆ ನೀಡಲಾಗಿದೆ. ಜೀವನವೂ ಒಂದು ಕ್ರೀಡೆಯಾಗಿದೆ ಇಲ್ಲಿ ಸೋಲದಂತೆ ಎಚ್ಚರಿಕೆಯ ಆಕ್ರಮಣಕಾರಿ ಆಟ ಆಡಿ ಗೆಲ್ಲಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಇಲ್ಲಿನ ಕೃಷಿ ವಿವಿಯಲ್ಲಿ ಆಯೋಜಿಸಿದ್ದ 26 ನೇ ರಾಷ್ಟ್ರೀಯ ಯುವಜನೋತ್ಸವ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. 
ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಯುವಜನರ ಸಮಗ್ರ ವಿಕಾಸಕ್ಕಾಗಿ ಮಹತ್ವದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ರಾಜ್ಯಸರ್ಕಾರವೂ ಸ್ವಾಮಿ ವಿವೇಕಾನಂದ ಯೋಜನೆ ಅನುಷ್ಠಾನ ಮಾಡುತ್ತಿದೆ. ಯುವಜನರ ಸರ್ವಾಂಗೀಣ ಅಭಿವೃದ್ಧಿಗೆ ಯುವನೀತಿ ರೂಪಿಸಲಾಗಿದೆ ಎಂದರು.

ರಾಷ್ಟ್ರೀಯ ಯುವಜನೋತ್ಸವವನ್ನು ಅತ್ಯಂತ ಯಶಸ್ವಿಗೊಳಿಸಿರುವುದು ಅಭಿನಂದನೀಯ ಕಾರ್ಯವಾಗಿದೆ. ಐದು ದಿನಗಳ ಈ ಉತ್ಸವ ಸ್ಮರಣೀಯವಾಗಿದೆ. ದೇಶದ ಮೂಲೆ ಮೂಲೆಗಳಿಂದ ಆಗಮಿಸಿರುವ ಯುವ ಜನರಲ್ಲಿ, ವೈವಿಧ್ಯಮಯ ಸಂಸ್ಕೃತಿ, ಜೀವನ ವಿಧಾನಗಳಿವೆ ಎಲ್ಲರ ಹೃದಯಗಳು ಭಾರತಮಾತೆಗೆ ಮಿಡಿಯುತ್ತಿವೆ. ಆ ಭಾವನೆಯೇ ನಮ್ಮೆಲ್ಲರನ್ನೂ ಒಂದುಗೂಡಿಸಿದೆ. ದೇಶಕ್ಕಾಗಿ ಪ್ರಾಣವನ್ನು ಕೊಡುವ ಕಾಲ ಈಗಿಲ್ಲ, ಜೀವನ ಮುಡಿಪಾಗಿಡುವ ಕಾಲ ಇದಾಗಿದೆ.ಸಮಯ ಯಾರಿಗಾಗಿಯೂ ಕಾಯುವುದಿಲ್ಲ.ದೇಶವೂ ಕೂಡ ಯಾರಿಗಾಗಿ ಕಾಯುವುದಿಲ್ಲ ನಾವು ನಮ್ಮ ದಕ್ಷತೆ, ಸಕ್ಷಮತೆ ಹೆಚ್ಚಿಸಿಕೊಳ್ಳಬೇಕು. ಯೌವ್ವನದಲ್ಲಿ ಏನಾದರೂ ಸಾಧಿಸದಿದ್ದರೆ ಭವಿಷ್ಯದಲ್ಲಿಯೂ ಕೂಡ ವಿಶೇಷ ಸಾಧನೆ ಮಾಡಲು ಸಾಧ್ಯವಾಗುವುದಿಲ್ಲ. ಇಂದು ಇಚ್ಛಿಸಿದ ಕಾರ್ಯಗಳು ನಾಳೆಗೆ ಕೈಗೂಡಬೇಕಾದರೆ ಸತತ ಪ್ರಯತ್ನಶೀಲತೆ ಬೇಕು. ದೇಶದ ಅತಿ ಎತ್ತರದ ಶಿಖರವಾಗಿರುವ ಮೌಂಟ್ ಎವರೆಸ್ಟ್ ಏರಿದ ತೇನ್‍ಸಿಂಗ್ ಭಾರತದ ತ್ರಿವರ್ಣಧ್ವಜ ಹಾರಿಸಿದ ಅವರ ಶ್ರಮದ ಹಿಂದೆ ಆತನ ತಾಯಿಯ ಪ್ರೇರಣೆ, ಸ್ಫೂರ್ತಿ ಇತ್ತು. ಅವರು ತಮ್ಮ 42 ನೇ ವಯಸ್ಸಿನಲ್ಲಿ ಈ ಸಾಧನೆ ಮಾಡಿದಾಗ ಪ್ರತಿಕ್ರಿಯೆ ನೀಡಿ, ಇದು ಒಂದು ದಿನಕ್ಕೆ ಸಾಧ್ಯವಾದುದಲ್ಲ ತನ್ನ 10 ನೇ ವಯಸ್ಸಿನಿಂದ ಆ ನಿಟ್ಟಿನಲ್ಲಿ ಪ್ರಾರಂಭಿಸಿದ ಪ್ರಯತ್ನ ಇದಕ್ಕೆ ಕಾರಣವೆಂಬುದನ್ನು ಒತ್ತಿ ಹೇಳಿದರು. ಯುವಜನರು ತಾವು ಕಂಡ ಕನಸುಗಳನ್ನು ನನಸು ಮಾಡಿಕೊಳ್ಳಬೇಕು, ಗುರಿ ಮುಟ್ಟುವ ತನಕ ವಿರಮಿಸಬಾರದು. ಭಾರತದ ಜನಸಂಖ್ಯೆಯೇ ನಮ್ಮ ಮಾನವ ಸಂಪನ್ಮೂಲವಾಗಿದೆ. ಭಾರತದ ಮಕ್ಕಳ ಕಲಿಕೆಯ ಬೌಧ್ಧಿಕ ಮಟ್ಟ ಉನ್ನತವಾಗಿದೆ. ಭಾರತದಂತಹ ಬೃಹತ್ ರಾಷ್ಟ್ರವು ನರೇಂದ್ರ ಮೋದಿಯವರ ಸಮರ್ಥ ನಾಯಕತ್ವದಲ್ಲಿ ಕೋವಿಡ್ ವಿಷಮ ಪರಿಸ್ಥಿತಿಯಲ್ಲಿಯೂ ಎಲ್ಲರಿಗೂ ಆಹಾರ, ಉದ್ಯೋಗ, ಲಸಿಕೆ ನೀಡುವಲ್ಲಿ ಯಶಸ್ವಿಯಾಗಿದೆ. ಶಿಕ್ಷಣದೊಂದಿಗೆ ಕೌಶಲ್ಯಾಭಿವೃದ್ಧಿಗೆ ಒತ್ತು ನೀಡಲಾಗಿದೆ. ಮುದ್ರಾ ಯೋಜನೆ,ಸ್ವನಿಧಿ ಯೋಜನೆಗಳ ಮೂಲಕ ಸ್ವ ಉದ್ಯೋಗಕ್ಕೆ ದೊಡ್ಡ ಪ್ರೋತ್ಸಾಹ ದೊರೆತಿದೆ. ನಮ್ಮ ಏಕತೆಯಲ್ಲಿಯೇ ನಮ್ಮ ಶಕ್ತಿ ಇದೆ ಎಂದು ಮುಖ್ಯಮಂತ್ರಿ ಹೇಳಿದರು.
ರಾಜ್ಯಪಾಲ ಥಾವರ್ ಚಂದ ಗ್ಲೇಹೋಟ, ಕೇಂದ್ರ ಸಚಿವರಾದ ಅನುರಾಗ ಸಿಂಗ್ ಠಾಕೂರ, ಪ್ರಲ್ಹಾದ ಜೊಶಿ, ಸಭಾಪತಿ ಬಸವರಾಜ ಹೊರಟ್ಟಿ,  ಜಿಲ್ಲಾ ಉಸ್ತುವಾರಿ ಸಚಿವ ಆಚಾರ ಹಾಲಪ್ಪ ಬಸಪ್ಪ, ಕ್ರೀಡಾ ಸಚಿವ ಡಾ.ಕೆ.ಸಿ. ನಾರಾಯಣಗೌಡ, ಶಾಸಕರಾದ ಅಮೃತ ದೇಸಾಯಿ, ಅರವಿಂದ ಬೆಲ್ಲದ, ಮಹಾಪೌರ ಈರೇಶ ಅಂಚಟಗೇರಿ ವೇದಿಕೆಯಲ್ಲಿದ್ದಾರೆ.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಅವಧಿ ಉಲ್ಲೇಖಿಸದೇ ಪ್ರಜ್ವಲ್ ರೇವಣ್ಣ ಜೆಡಿಎಸ್‌ನಿಂದ ಅಮಾನತು

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಪ್ರಕರಣ ಸಂಬಂಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ರೇವಣ್ಣ, ಪ್ರಜ್ವಲ್ ಉಚ್ಚಾಟನೆಗೆ ಜೆಡಿಎಸ್ ಶಾಸಕರ ಪಟ್ಟು

ರಾಜ್ಯದ ಜನತೆಯ ಮುಂದೆ ತಲೆ ತಗ್ಗಿಸುವಂತಹ ಕೆಲಸ ಮಾಡಿದವರನ್ನು ರಾಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಘನತೆಯನ್ನು ಉಳಿಸಬೇಕಿದೆ ಎಂದು ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ: ಕುಮಾರಸ್ವಾಮಿ

ಜೆಡಿಎಸ್ ಸಂಸದ ಪ್ರಜಿ ಕುಮಾರಸ್ವಾಮಿ ಡ್ರೈವ್ ಪ್ರಕರಣದಲ್ಲಿ ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ' ಎಂದು ಮಾಧ್ಯಮಗಳ ಮುಂದೆ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ತ್ವರಿತಗತಿಯಲ್ಲಿ ತನಿಖೆ ನಡೆಸಿ, ವರದಿ ಸಲ್ಲಿಸಲು ಸೂಚನೆ: ಪರಮೇಶ್ವ‌ರ್

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ, ವರದಿ ಸಲ್ಲಿಸುವಂತೆ ...