ಬಿಸಿಲಿನ ತಾಪಮಾನ ಏರಿಕೆಯ ನಡುವೆಯೂ ಹಕ್ಕು ಚಲಾಯಿಸಿದ ಮೆತದಾರರು

Source: Vb | By I.G. Bhatkali | Published on 27th April 2024, 1:24 AM | State News |

ಬೆಂಗಳೂರು: ತಾಪಮಾನ ಏರಿಕೆಯ ನಡುವೆಯೂ ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಮತದಾನ ಬಿರುಸಿನಿಂದ ಸಾಗಿದೆ. ಶುಕ್ರವಾರ ಬೆಳಗ್ಗೆ 7 ಗಂಟೆಯಿಂದಲೇ ಮತದಾನ ಆರಂಭವಾಗಿದ್ದು, ಬಿಸಿಲು ಹೆಚ್ಚಾಗುವ ಕಾರಣ ಮತದಾರರು ಬೆಳಗ್ಗೆ ಮತಗಟ್ಟೆಗಳಿಗೆ ಬಂದು ಮತದಾನ ಮಾಡಿದರು.

ರಾಜ್ಯದಲ್ಲಿ ಇನ್ನು ಐದು ದಿನಗಳ ಕಾಲ ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿ ಗಾಳಿ ಬೀಸಲಿದೆ. ಜನರು ಮಧ್ಯಾಹ್ನ 12ರಿಂದ 3 ಗಂಟೆಯ ವರೆಗೆ ಮನೆಗಳಿಂದ ಹೊರಗಡೆ ಹೋಗದಂತೆ ಹವಾಮಾನ ಇಲಾಖೆಯು ಗುರುವಾರದಂದು(ಎ.25) ಎಚ್ಚರಿಕೆ ನೀಡಿತ್ತು. ಇದರ ನಡುವೆಯೂ ಮತದಾರರು ತಮ್ಮ ಮತಗಳನ್ನು ಉತ್ಸಾಹದಿಂದ ಚಲಾಯಿಸಿದ್ದಾರೆ. 

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 37 ಡಿಗ್ರಿ ಸೆಲ್ಸಿಯಸ್‌ನಷ್ಟು ದಾಖಲಾಗಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 35 ಡಿಗ್ರಿ ಸೆಲ್ಸಿಯಸ್ ಗಡಿ ದಾಟಿದೆ. ಒಂದು ವಾರದಿಂದ ಬಿಸಿಲಿನ ಪ್ರಮಾಣ ಕಡಿಮೆಯಾಗಿಲ್ಲ. ಹೀಗಾಗಿ ತಾಪಮಾನ ಏರಿಕೆ ನಡುವೆ ಚುನಾವಣೆಯಲ್ಲಿ ಮತದಾನವನ್ನು ಹೆಚ್ಚಿಸಲು ಚುನಾವಣಾ ಆಯೋಗ ಹಲವು ಕ್ರಮಕ್ಕೆ ಮುಂದಾಗಿತ್ತು.

ಬೇಸಿಗೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ಸಲುವಾಗಿ ಎಲ್ಲ ಮತಗಟ್ಟೆಗಳಲ್ಲೂ ನೀರಿನ ವ್ಯವಸ್ಥೆ ಸೇರಿದಂತೆ ಎಲ್ಲ ರೀತಿಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿ ಸಲಾಗಿತ್ತು. ಕೆಲ ಲೋಕಸಭಾ ಕ್ಷೇತ್ರಗಳಲ್ಲಿ ಸಖಿ ಮತಗಟ್ಟೆ, ಯುವ ಮತಗಟ್ಟೆ, ವಿಶೇಷ ಚೇತನ ಮತಗಟ್ಟೆ ಸೇರಿದಂತೆ ಇತ್ಯಾದಿ ವಿಷಯಾಧಾರಿತ ಮತಗಟ್ಟೆಗಳನ್ನೂ ಸ್ಥಾಪಿಸಲಾಗಿತ್ತು.

Read These Next

ರೇಪಿಷ್ಟ್ ಗಳ ಜೊತೆ ಬಿಜೆಪಿ ಹೊಂದಾಣಿಕೆ;  ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದು ಅಂದರೆ ಇದೇನಾ? -ಸಿದ್ಧರಾಮಯ್ಯ

ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...

ಮುಂಡಗೋಡ: ಮೋದಿ ಸುಳ್ಳುಗಳ ಸರದಾರ, ಬಿಜೆಪಿ ಸುಳ್ಳಿನ ಕಾರ್ಖಾನೆ: ಸಿದ್ದರಾಮಯ್ಯ ವಾಗ್ದಾಳಿ

ಯುವಕರು ಕೆಲಸ ಕೊಡಿ ಎಂದರೆ ಪಕೋಡಾ ಮಾರಲು ಹೋಗಿ ಎಂದು ಪ್ರಧಾನಿ ಮೋದಿಯವರು ವಿದ್ಯಾವಂತ ಯುವಜನರಿಗೆ ಬೇಜವಾಬ್ದಾರಿ ಹೇಳಿಕೆ ಕೊಟ್ಟರು. ...

ಅತಿಕ್ರಮಣದಾರರ ವಿಚಾರದಲ್ಲೂ ಬಿಜೆಪಿಯಿಂದ ರಾಜಕೀಯ; ಮುಂಡಗೋಡದಲ್ಲಿ ಡಿಕೆಶಿ ವಾಗ್ದಾಳಿ

ರೈತರ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಆದಾಯ ಡಬಲ್ ಮಾಡುತ್ತೇವೆಂದು ಹೇಳಿ ರೈತರಿಗೆ ಮರಳು ಮಾಡಿದೆ. ಅತಿಕ್ರಮಣದಾರರ ...