ಭಟ್ಕಳ ವೆಂಕಟಾಪುರದಲ್ಲಿ ಹೆದ್ದಾರಿಯಿಂದ ಕೆಳಗೆ ಬಿದ್ದ ಲಾರಿ
ಭಟ್ಕಳ: ಚಲಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಎಡಕ್ಕೆ ಹೊರಳಿ ತಗ್ಗು ಪ್ರದೇಶದಲ್ಲಿದ್ದ ಗೋಡೆಗೆ ಢಿಕ್ಕಿ ಹೊಡೆದಿದ್ದು, ಅದೃಷ್ಟವಶಾತ್ ಚಾಲಕ ಹಾಗೂ ಕ್ಲೀನರ್ ಇಬ್ಬರೂ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾದ ಘಟನೆ ತಾಲೂಕಿನ ಶಿರಾಲಿ ವೆಂಕಟಾಪುರ ಸಮೀಪ ಶುಕ್ರವಾರ ಸಂಜೆ ನಡೆದಿದೆ.
ಚಾಲಕ ಹುಬ್ಬಳ್ಳಿಯ ಇಮ್ರಾನ್ ಖಾನ್ ಪಠಾಣ್ನಿಗೆ ಇಲ್ಲಿನ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಪ್ಲಾಯ್ವುಡ್ ತುಂಬಿದ ಈ ಲಾರಿಯು ಮಂಗಳೂರಿನಿಂದ ಹುಬ್ಬಳಿಯ ಕಡೆಗೆ ಪ್ರಯಾಣಿಸುತ್ತಿತ್ತು ಎಂದು ತಿಳಿದು ಬಂದಿದೆ. ಕೆಳಕ್ಕೆ ಬಿದ್ದ ರಭಸಕ್ಕೆ ಲಾರಿಯ ಮುಂಭಾಗ ಜಖಂಗೊಂಡಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಎಸೈ ರವಿ ನೇತೃತ್ವದಲ್ಲಿ ತನಿಖೆ ಮುಂದುವರೆದಿದೆ.