ಭಟ್ಕಳ: ಗದ್ದೆ ಕೆಲಸಕ್ಕೆಂದು ಶನಿವಾರ ಮನೆಯಿಂದ ಹೊರಟಿದ್ದ ವ್ಯಕ್ತಿಯೋರ್ವರ ಶವವು ತಾಲೂಕಿನ ವೆಂಕಟಾಪುರ ಹೊಳೆಯಲ್ಲಿ ರವಿವಾರ ಸಂಜೆ ಪತ್ತೆಯಾಗಿದೆ.
ಮೃತ ವ್ಯಕ್ತಿಯನ್ನು ತಾಲೂಕಿನ ಜಾಲಿ ಪಟ್ಟಣ ಪಂಚಾಯತ ವ್ಯಾಪ್ತಿಯ ವೆಂಕಟಾಪುರ ದೋಣದಾರಿ ನಿವಾಸಿ ವೆಂಕಟ್ರಮಣ ನಾಗಪ್ಪ ಗೊಂಡ (51) ಎಂದು ಗುರುತಿಸಲಾಗಿದೆ. ಮೃತರು ತಾಯಿ ಹಾಗೂ ಮೂವರು ಸಹೋದರರನ್ನು ಅಗಲಿದ್ದಾರೆ. ಎಸೈ ರತ್ನಾ ಸಿಬ್ಬಂದಿಗಳೊಡನೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಭಟ್ಕಳ ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.