ಭಟ್ಕಳ ಕೈಕಿಣಿಯಲ್ಲಿ ಬಾವಿಗೆ ಬಿದ್ದು ವ್ಯಕ್ತಿ ಸಾವು

Source: S O news service | By I.G. Bhatkali | Published on 3rd September 2021, 2:20 PM | Coastal News |

ಭಟ್ಕಳ: ಬಾವಿಯಿಂದ ನೀರು ತರಲು ಹೋಗಿದ್ದ ವ್ಯಕ್ತಿಯೋರ್ವ ಕಟ್ಟೆ ಕುಸಿದು ಬಾವಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ತಾಲೂಕಿನ ಕೈಕಿಣಿ ಗ್ರಾಪಂ ಮಠದಹಿತ್ಲುವಿನಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಶಾಂತಾ ಟೆಲ್ಲೀಸ್ (46) ಎಂದು ಗುರುತಿಸಲಾಗಿದೆ. ಮೃತರು ಹೆಂಡತಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಈ ಕುರಿತು ಮೃತರ ಪತ್ನಿ ಶಲೀನ್ ಶಾಂತಾ ಪೊಲೀಸರಿಗೆ ದೂರನ್ನು ನೀಡಿದ್ದಾರೆ. ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಎಸೈ ರವೀಂದ್ರ ಬಿರಾದಾರ ತನಿಖೆ ಕೈಗೊಂಡಿದ್ದಾರೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...