ಕೋಲಾರ:ದಲಿತ ಯುವಕನನ್ನು ಪ್ರೀತಿಸಿದ ಪುತ್ರಿಯನ್ನೇ ಹತ್ಯೆಗೈದ ತಂದೆ; ಮನನೊಂದ ಯುವಕ ಆತ್ಮಹತ್ಯೆ

Source: Vb | By I.G. Bhatkali | Published on 29th June 2023, 11:24 PM | State News |

ಕೋಲಾರ: ಪರಿಶಿಷ್ಟ ಜಾತಿಯ ಯುವಕನನ್ನು ಪ್ರೀತಿಸಿದ್ದಕ್ಕೆ ತಂದೆಯೊಬ್ಬ ತನ್ನ ಪುತ್ರಿಯ ಕತ್ತು ಹಿಸುಕಿ ಕೊಲೆ ಮಾಡಿದ್ದು, ಇದನ್ನು ಮರ್ಯಾದಾ ಹತ್ಯೆ ಎಂದು ಶಂಕಿಸಲಾಗಿದೆ. ಈ ಸುದ್ದಿ ತಿಳಿಯುತ್ತಿದ್ದಂತೆಯೇ ಯುವತಿಯನ್ನು ಪ್ರೇಮಿಸುತ್ತಿದ್ದ ಯುವಕ ಕೂಡಾ ಚಲಿಸುತ್ತಿದ್ದ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ.

ಈ ಅವಳಿ ಘಟನೆಗಳು ಜೂ. 27ರಂದು ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಬೋದಗುರ್ಕಿ ಗ್ರಾಮದಲ್ಲಿ ವರದಿಯಾಗಿದೆ. 

ಮೃತಪಟ್ಟ ಯುವತಿಯನ್ನು ಪ್ರೀತಿ (20) ಹಾಗೂ ಯುವಕನನ್ನು ಗಂಗಾಧರ್ (24) ಎಂದು ಗುರುತಿಸಲಾಗಿದೆ. ಈ ಸಂಬಂಧ ಕಾಮಸಮುದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದರ ಬೆನ್ನಿಗೇ ಪೊಲೀಸರು ಯುವತಿಯ ತಂದೆ ಕೃಷ್ಣಮೂರ್ತಿ(46) ಎಂಬಾತನನ್ನು ಬಂಧಿಸಿದ್ದಾರೆ. 

ಅನ್ಯ ಜಾತಿಗಳಿಗೆ ಸೇರಿದ್ದ ಪ್ರೀತಿ ಹಾಗೂ ಗಂಗಾಧರ್ ಕಳೆದ ಕೆಲವು ತಿಂಗಳಿ ನಿಂದ ಪ್ರೀತಿಸುತ್ತಿದ್ದರು. ಈ ಸುದ್ದಿ ತಿಳಿದ ಪ್ರೀತಿಯ ತಂದೆ ಕೃಷ್ಣಮೂರ್ತಿ ಅವರಿಬ್ಬ ರಿಗೂ ದೂರಾಗುವಂತೆ ಎಚ್ಚರಿಕೆ ನೀಡಿದ್ದರು. ಆದರೆ, ಅವರಿಬ್ಬರೂ ಗುಟ್ಟಾಗಿ ಭೇಟಿ ಮಾಡುವುದನ್ನು ಮುಂದುವರಿಸಿದ್ದರು. ಇದ ರಿಂದ ಕ್ರೋಧಗೊಂಡಿದ್ದ ಕೃಷ್ಣಮೂರ್ತಿ, ಜೂನ್ 27ರಂದು ಪುತ್ರಿಯ ಕತ್ತು ಹಿಸುಕಿ ಹತ್ಯೆಗೈದಿದ್ದಾನೆ. ಪ್ರೀತಿ ಸಾವಿಗೀಡಾದ ಸುದ್ದಿ ತಿಳಿಯುತ್ತಿದ್ದಂತೆಯೇ ಮನ ನೊಂದ ಗಂಗಾಧರ್ ಕೂಡಾ ಚಲಿಸುತ್ತಿದ್ದ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.

ಈ ಘಟನೆಗಳಿಂದ ಗ್ರಾಮದಲ್ಲಿ ಉಂಟಾ ಗಿರುವ ಉದ್ವಿಗ್ನತೆಯನ್ನು ನಿಯಂತ್ರಿಸಲು ಭಾರೀ ಪೊಲೀಸ್ ಬಂದೋಬಸ್ತ್ ಮಾಡ ಲಾಗಿದ್ದು, ಪ್ರಕರಣದ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...