ಭಟ್ಕಳ: ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ತನ್ನ ಸಂಬಂಧಿಯನ್ನೆ ಕತ್ತಿಯಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಇಲ್ಲಿಗೆ ಸಮೀಮ ಹೊನ್ನಾವರ ತಾಲೂಕಿನ ಮಂಕಿ ಪೊಲೀಸ್ ಠಾಣಾ ವ್ಯಾಪ್ತಿಯ ತಾಳಮಕ್ಕಿ ಗ್ರಾಮದಲ್ಲಿ ಸೋಮವಾರ ಜರಗಿದೆ.
ಕೊಲೆಗೀಡಾದ ವ್ಯಕ್ತಿಯನ್ನು ಮಹಾಬಲೇಶ್ವರ ಹಾಲಪ್ಪ ನಾಯ್ಕ್(೬೭) ಎಂದು ಗುರುತಿಸಲಾಗಿದ್ದು ಕೊಲೆ ಮಾಡಿದ ಆರೋಪಿ ಉಮೇಶ್ ಲಕ್ಷ್ಮಣ್ ನಾಯ್ಕ(೪೮) ನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇಬ್ಬರ ನಡುವೆ ಕಳೆದ ಹಲವು ದಿನಗಳಿಂದ ಆಸ್ತಿ ವಿಷಯಕ್ಕೆ ಸಂಬಂಧಿಸಿದಂತೆ ವಿವಾದ ನಡೆಯುತ್ತಿತ್ತು ಎನ್ನಲಾಗಿದ್ದು ಸೋಮವಾರದಂದು ಉಮೇಶ ಹಾಗೂ ಮಹಾಬಲೇಶ್ವರ ನಾಯ್ಕರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯಕಂಡಿದೆ ಎಂದು ತಿಳಿದುಬಂದಿದೆ.
ಹೊನ್ನಾವರ ತಾಲೂಕಿನ ಮಂಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಕ್ರಮ ಜರಗಿಸಿದ್ದಾರೆ.