ಭಟ್ಕಳ: ಸೌದಿ ಅರೆಬಿಯಾದ ಜಿದ್ದಾದಿಂದ ಮಂಗಳೂರಿಗೆ ಬಂದಿಳಿದ ಹೊನ್ನಾವರ ತಾಲೂಕಿನ ಮಂಕಿ ಪಟ್ಟಣದ 36 ವರ್ಷದ ವ್ಯಕ್ತಿಯೊಬ್ಬರು ಅನಾರೋಗ್ಯಪೀಡಿತರಾಗಿ ಆಸ್ಪತ್ರೆಯಲ್ಲಿ ಮೃತಪಟ್ಟಿರಯವ ಘಟನೆ ಶನಿವಾರ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಜರಗಿದೆ.
ಮೂಲಗಳ ಪ್ರಕಾರ, ಮೊಹಮ್ಮದ್ ತೌಫಿಕ್ ಖಾಜಿ ಕಳೆದ 15 ವರ್ಷಗಳಿಂದ ಸೌದಿ ಅರೇಬಿಯಾದ ಜಿದ್ದಾ ಎಂಬಲ್ಲಿ ಕೆಲಸ ಮಾಡುತ್ತಿದ್ದರು. ಆಗಸ್ಟ್ 1 ರಂದು ಬೆಳಿಗ್ಗೆ 11.30 ರ ಸುಮಾರಿಗೆ ಜಿದ್ದಾದಿಂದ ಮಂಗಳೂರಿಗೆ ವಿಮಾನದ ಮೂಲಕ ಬಂದಿಳಿದ ಇವರು ಅಸ್ವಸ್ಥರಾದರು. ಅವರ ಸ್ಥಿತಿ ತುಂಬಾ ಹದಗೆಟ್ಟಿರುವುದರನ್ನು ಅರಿತು ನೇರವಾಗಿ ವಿಮಾನ ನಿಲ್ದಾಣದಿಂದ ವೆನ್ಲಾಕ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ರಾತ್ರಿ ಆಸ್ಪತ್ರೆಯಲ್ಲಿ ನಿಧನರಾದರು ಎಂದು ತಿಳಿದುಬಂದಿದೆ.
ಕರೋನಾ ಸೋಂಕು ಪರೀಕ್ಷೆಗೆ ಒಳಗಾಗಿದ್ದ ಇವರ ವರದಿಯು ನೆಗೆಟಿವೆ ಆಗಿದೆ ಎಂದು ಹೇಳಲಾಗುತ್ತಿದೆ.
ಮೃತದೇಹವನ್ನು ಹಿಂಪಡೆಯಲು ಮತ್ತು ಕಾಗದಪತ್ರಗಳನ್ನು ಪೂರ್ಣಗೊಳಿಸಲು ಮಂಕಿಯಲ್ಲಿರುವ ಸಂಬಂಧಿಕರೋರ್ವರು ಮಂಗಳೂರು ತಲುಪಿದ್ದು ಅಲ್ಲಿ ಭಟ್ಕಳ ಜಮಾಅತುಲ್ ಮುಸ್ಲಿಮೀನ್ ಮಂಗಳೂರು ಅವರು ಸಂಪೂರ್ಣ ಸಹಕಾರ ನೀಡುತ್ತಿದ್ದಾರೆ
ಮೃತ ಮುಹಮ್ಮದ್ ತೌಫಿಕ್ ಮೂವರು ಮಕ್ಕಳು, ಪತ್ನಿ ಹಾಗೂ ಬಂದುಬಳಗವನ್ನು ಅಗಲಿದ್ದಾರೆ.