ಭಟ್ಕಳ ತಾಲೂಕಾ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಮಾನಾಸುತ ಶಂಭು ಹೆಗಡೆ

Source: SOnews | By Staff Correspondent | Published on 28th January 2023, 11:56 PM | Coastal News |


ಭಟ್ಕಳ : ಫೆಬ್ರವರಿ ೧೭ರಂದು ಭಟ್ಕಳ ತಾಲೂಕಿನ ಮುರ್ಡೇಶ್ವರದಲ್ಲಿ ನಡೆಯಲಿರುವ ಭಟ್ಕಳ ತಾಲೂಕಾ ೧೦ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಕವಿ ಮಾನಾಸುತ ಶಂಭು ಹೆಗಡೆ  ಆಯ್ಕೆ ಯಾಗಿದ್ದಾರೆ. ಇವರನ್ನು ಸಮ್ಮೇಳನಾಧ್ಯಕ್ಷರಾಗಿ ತಾಲೂಕು ಕಸಾಪ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಕಸಾಪ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ ತಿಳಿಸಿದ್ದಾರೆ.

ಕಳೆದ ಮೂರು ದಶಕಗಳಿಂದ ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಶಂಭು ಹೆಗಡೆಯವರು ಕವಿಯಾಗಿ ಪ್ರಕಾಶಕರಾಗಿ ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾರೆ. ಮಾನಾಸುತ ಎಂಬ ಕಾವ್ಯನಾಮದಿಂದ ಚುಟುಕುಬಳ್ಳಿ, ನಾಲ್ಕುಸಾಲು,  ಜೇನಹನಿ ಮುಂತಾದ ಕೃತಿಗಳನ್ನು ರಚಿಸಿದ್ದಾರೆ.  ಶಾಂಭವಿ ಪ್ರಕಾಶನದ ಮೂಲಕ  ತಂದೆಯವರಾದ ಮಾಳ್ಕೋಡು ನಾರಾಯಣ ಹೆಗಡೆಯವರ ಕಾದಂಬರಿ. ಕವನ ಸಂಕಲನ, ಯಕ್ಷಗಾನಕ್ಕೆ ಸಂಬAಧಿಸಿದAತೆ ೧೦ ಕೃತಿಗಳನ್ನು ಪ್ರಕಟಿಸಿದ್ದಾರೆ. ಹೀಗೆ ಕವಿಯಾಗಿ ಪ್ರಕಾಶಕರಾಗಿ ಸಾಹಿತ್ಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಮಾನಾಸುತ  ವೃತ್ತಿಯಲ್ಲಿ ಭಟ್ಕಳ ಅರ್ಬನ ಬ್ಯಾಂಕಿನ ವ್ಯವಸ್ಥಾಪಕರಾಗಿ ಪ್ರಧಾನ ವ್ಯವಸ್ಥಾಪಕರಾಗಿ ನಿವೃತ್ತರಾಗಿದ್ದಾರೆ. ಅವರ ಸರ್ವಾಧ್ಯಕ್ಷತೆಯಲ್ಲಿ ನಡೆಯುವ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಎಲ್ಲರೂ ಭಾಗವಹಿಸಿ ಯಶಸ್ವಿಗೊಳಿಸುವಂತೆ  ಕಸಾಪ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ ಕೋರಿದ್ದಾರೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...