ಶಿರೂರಿನ ಮಣೆಗಾರ್ ಮೀರಾನ್ ಸಾಹೇಬ್‌ರವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ.

Source: SO News | By Laxmi Tanaya | Published on 28th October 2020, 2:56 PM | State News | Coastal News | Gulf News |

ಶಿರೂರು: ಶಿರೂರಿನ ಅಭಿವೃದ್ದಿಯಲ್ಲಿ ಹಗಲಿರುಳು ತೊಡಗಿಸಿಕೊಂಡು ಜಾಗತಿಕ ಮಟ್ಟದಲ್ಲಿ ಅಪಾರ ಕೊಡುಗೆ ನೀಡಿದ ಅನಿವಾಸಿ ಉದ್ಯಮಿ ಮಣೆಗಾರ್ ಮೀರಾನ್ ಸಾಹೇಬ್ ಶಿರೂರು ಅವರಿಗೆ ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಘೋಷಣೆಯಾಗಿದೆ.

ಮಣೆಗಾರ್ ಮೀರಾನ್ ಸಾಹೇಬ್ ಅವರು ಕಳೆದ 40 ವರ್ಷಗಳಿಂದ ಗಲ್ಪ್ ರಾಷ್ಟ್ರಗಳಲ್ಲಿ ಕನ್ನಡದ ನಾಡು ನುಡಿಯ ಸೇವೆ ಮಾಡಿದ್ದಾರೆ. ಶಿಕ್ಷಣ,ಸಾಮಾಜಿಕ,ಸಾಂಸ್ಕ್ರತಿಕ ಸೇರಿದಂತೆ ಹೊರನಾಡಿನಲ್ಲಿ ಪ್ರತಿ ವರ್ಷ ಕನ್ನಡಿಗರ ಸಂಘಟನೆಗೆ ಮತ್ತು ಕನ್ನಡದ ಅಭಿವೃದ್ದಿಗಾಗಿ ವಿವಿಧ ಸಂಘ ಸಂಸ್ಥೆಗಳ ಜವಬ್ದಾರಿ ಆದ್ಯತೆಯ ಮೇರೆಗೆ ಅನುಪಮ ಕೊಡುಗೆ ನೀಡಿದ್ದಾರೆ.

 ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಪ್, ಶಿರೂರು ಅಸೋಸಿಯೇಶನ್ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದಾರೆ. ವಿದೇಶದಲ್ಲಿ ಮಾತ್ರವಲ್ಲದೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಜನಪರ ಕಾಳಜಿಯ ಕಾರ್ಯಕ್ರಮ ಸಂಘಟಿಸುವ ಜೊತೆಗೆ ನೂರಾರು ಬಡ ಕುಟುಂಬಗಳಿಗೆ ನೆರವಾಗಿದ್ದಾರೆ. 

ಇದೇ ಮೊದಲ ಬಾರಿಗೆ ಶಿರೂರಿನ ವ್ಯಕ್ತಿಯೊಬ್ಬರಿಗೆ ರಾಜ್ಯೋತ್ಸವ ಪ್ರಶಸ್ತಿ ದೊರೆತಿರುವುದು ಸಂತಸ ಹೆಚ್ಚಾಗಿದೆ. ಮಿರಾನ್ ಸಾಹೇಬರು ಶಿರೂರು ಗ್ರೀನ್‌ವ್ಯಾಲಿ ಸಂಸ್ಥೆಯ ಟ್ರಸ್ಟಿಯಾಗಿದ್ದಾರೆ . ಶಿರೂರಿನ ಅಭಿವೃದ್ದಿಗೆ ಅಂಬುಲೆನ್ಸ್ ಕಸದ ವಾಹನ ಸೇರಿದಂತೆ ಹಲವು ಮಹತ್ತರ ಕೊಡುಗೆ ನೀಡಿದ್ದಾರೆ.

Read These Next

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳದಲ್ಲಿ ಭಾವೈಕ್ಯತೆ ಮತ್ತು ಧರ್ಮ ಸಮನ್ವಯತೆ ಸಾರುವ ಚೆನ್ನಪಟ್ಟಣ ಶ್ರೀಹನುಮಂತ ದೇವರ ರಥೋತ್ಸವ ಸಂಪನ್ನ

ಭಟ್ಕಳ: ತಾಲೂಕಿನ ಐತಿಹಾಸಿಕ ಚೆನ್ನಪಟ್ಟಣ ಶ್ರೀ ಹನುಮಂತ ದೇವರ ಭಾವೈಕ್ಯದ ಬ್ರಹ್ಮರಥೋತ್ಸವ ಬುಧವಾರ ಸಂಜೆ ಅತ್ಯಂತ ಸಡಗರ ...

ದುಬಾಯಿಯಲ್ಲಿ "ಗಲ್ಫ್ ಕರ್ನಾಟಕೊತ್ಸವ" ಯಶಸ್ವಿ; ಐತಿಹಾಸಿಕ ದಾಖಲೆಗೆ ಸಾಕ್ಷಿಯಾದ ಅನಿವಾಸಿ ಕನ್ನಡಿಗರು

ಕರ್ನಾಟಕದ 21 ಅತ್ಯಂತ್ ಪ್ರಭಾವಶಾಲಿ ವ್ಯಾಪಾರ  ಐಕಾನ್ ಗಳು ಗಲ್ಫ್ ಕರ್ನಾಟಕ ರತ್ನ ಪ್ರಶಸ್ತಿಗಳೊಂದಿಗೆ ಗೌರವಿಸಲಿಟ್ಟರು.