ಮಂಗಳೂರು: 90 ಲಕ್ಷ ರೂ. ಮೌಲ್ಯದ ಅಂಬರ್ ಗ್ರೀಸ್ ವಶ – ಮೂವರ ಬಂಧನ

Source: SO News | By Laxmi Tanaya | Published on 12th September 2023, 9:53 PM | Coastal News | Don't Miss |

ಮಂಗಳೂರು: ಪಣಂಬೂರು ಬೀಚ್ ಪರಿಸರದಲ್ಲಿ ಕೋಟ್ಯಾಂತರ ಬೆಲೆಬಾಳುವ ಅಪರೂಪದ ವನ್ಯ ಜೀವಿ ಉತ್ಪನ್ನವಾದ ಅಂಬರ್ ಗ್ರೀಸ್(ತಿಮಿಂಗಲ ವಾಂತಿ)ನ್ನು ಮಾರಾಟ ಮಾಡಲು ಯತ್ನಿಸುತ್ತಿರುವ ಮೂವರು ವ್ಯಕ್ತಿಗಳನ್ನು ಸಿ.ಸಿ.ಬಿ ಪೊಲೀಸರು ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ಸೆರೆ ಹಿಡಿಯುವುದಲ್ಲಿ ಯಶಸ್ವಿಯಾಗಿದ್ದಾರೆ.

 ಉಡುಪಿ ಜಿಲ್ಲೆ ಸಾಲಿಗ್ರಾಮ ಮೂಲದ ಜಯಕರ(29), ಶಿವಮೊಗ್ಗ ಜಿಲ್ಲೆ ಸಾಗರದ ಆದಿತ್ಯ (25), ಹಾವೇರಿ ಜಿಲ್ಲೆ ಲೋಹಿತ್ ಕುಮಾರ್ ಗುರಪ್ಪನವರ್ (39) ಬಂಧಿತರೆಂದು  ಗುರುತಿಸಲಾಗಿದೆ.

ಬಂಧಿತರಿಂದ 900 ಗ್ರಾಂ ತೂಕದ 90 ಲಕ್ಷ ಬೆಲೆಬಾಳುವ ಅಂಬರ್ ಗ್ರೀಸನ್ನು ವಶಪಡಿಸಿಕೊಳ್ಳಲಾಗಿದೆ. ಮಂಗಳೂರು ನಗರದ ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್ ರವರ ಮಾರ್ಗದರ್ಶನದಲ್ಲಿ ಸಿ.ಸಿ.ಬಿ ಘಟಕದ ಅಧಿಕಾರಿ ಹಾಗೂ ಸಿಬ್ಬಂದಿಯವರು ಕಾರ್ಯಾಚರಣೆ ನಡೆಸಿದ್ದರು.

Read These Next

ಪ್ರಜಾಧ್ವನಿ ಸಮಾವೇಶ: ಭಟ್ಕಳದಿಂದ ಕುಮಟಾ ದ ವರೆಗೆ ಬೈಕ್ ರ್ಯಾಲಿ ಮೂಲಕ ಶಕ್ತಿ ಪ್ರದರ್ಶನ

ಕುಮಟಾ: ಪಟ್ಟಣದ ಮಣಕಿ ಮೈದಾನದಲ್ಲಿ ಆಯೋಜನೆಗೊಂಡಿದ್ದ ಪ್ರಜಾಧ್ವನಿ- 2 ಸಮಾವೇಶಕ್ಕೂ ಪೂರ್ವ ಬೃಹತ್ ಬೈಕ್ ರ್ಯಾಲಿ ಮೂಲಕ ಕರಾವಳಿಯಲ್ಲಿ ...

ರೇಪಿಷ್ಟ್ ಗಳ ಜೊತೆ ಬಿಜೆಪಿ ಹೊಂದಾಣಿಕೆ;  ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದು ಅಂದರೆ ಇದೇನಾ? -ಸಿದ್ಧರಾಮಯ್ಯ

ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...