ಮಂಗಳೂರು : ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನೆಯ್ಯ ವಿಮಾನ ನಿಲ್ದಾಣ ಎಂದು ಹೆಸರಿಡಬೇಕು ಎಂದು ಅದಾನಿ ಸಂಸ್ಥೆ ಅಧ್ಯಕ್ಷ ಗೌತಮ್ ಅದಾನಿ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಆಗ್ರಹಿಸಿದ್ದಾರೆ .
ಈ ಬಗ್ಗೆ ಮಿಥುನ್ ರೈ ಅವರು ಫೇಸ್ ಬುಕ್ ಪೋಸ್ಟ್ ನಲ್ಲಿ ಮಂಗಳೂರು ವಿಮಾನ ನಿಲ್ದಾಣದ ನಿರ್ವಹಣೆ ನಿಮ್ಮ ಕೈಗೆ ಬಂದಿರುವುದರಿಂದ ಅದಕ್ಕೆ ಅದಾನಿ ವಿಮಾನನಿಲ್ದಾಣ ಹೆಸರು ಇಡುವುದಲ್ಲ. ಕೋಟಿ ಚೆನ್ನೆಯ್ಯ ವಿಮಾನ ನಿಲ್ದಾಣ ಎಂದು ಹೆಸರಿಡಲು ಬೇಕಾಗಿ ಸಮಸ್ತ ನಾಗರಿಕರು ದಕ್ಷಿಣ ಕನ್ನಡ ಜಿಲ್ಲಾ ನಿಮ್ಮೊಂದಿಗೆ ಆಗ್ರಹಿಸುವುದಾಗಿ ತಿಳಿಸಿದ್ದಾರೆ .
ಅಂತಾರಾಷ್ಟ್ರೀಯ ಮಂಗಳೂರು ವಿಮಾನ ನಿಲ್ದಾಣವನ್ನು ಖಾಸಗೀಕರಣಗೊಳಿಸುವ ಕೇಂದ್ರ ಸರಕಾರದ ಯೋಜನೆಯನ್ವಯ ಗೌತಮ್ ಅದಾನಿ ಒಡೆತನದ ಅದಾನಿ ಸಮೂಹ ಸಂಸ್ಥೆಗೆ ನಿರ್ವಣೆಗಾಗಿ ಹಸ್ತಾಂತರದ ಪ್ರಕ್ರಿಯೆ ನಿನ್ನೆ ತಡರಾತ್ರಿ ಹನ್ನೆರಡು ಗಂಟೆಗೆ ನಡೆದಿದೆ .ಈ ಮೂಲಕ ಇನ್ನು ಮುಂದೆ ಮಂಗಳೂರು ವಿಮಾನ ನಿಲ್ದಾಣ ಅದಾನಿ ಏರ್ ಪೋರ್ಟ್ ಎಂದು ಬದಲಾಗಿದೆ . ವಿಮಾನಗಳ ಹಾರಾಟ ಹೊರತುಪಡಿಸಿ ಉಳಿದೆಲ್ಲಾ ರೀತಿಯ ನಿರ್ವಹಣೆಯ ಸಂಪೂರ್ಣ ಹೊಣೆಯನ್ನು ಅದಾನಿ ಸಮೂಹ ಸಂಸ್ಥೆ ನಿರ್ವಹಿಸಲಿದೆ