ಮಂಗಳೂರು: ಪಶ್ಚಿಮ ವಲಯದ ಡಿಐಜಿಯಾಗಿ ಅಮಿತ್ ಸಿಂಗ್ ಅಧಿಕಾರ ಸ್ವೀಕಾರ.
ಮಂಗಳೂರು: ನೂತನವಾಗಿ ನೇಮಕಗೊಂಡ ಪಶ್ಚಿಮ ವಲಯ ಪೊಲೀಸ್ ಮಹಾನಿರೀಕ್ಷಕ ಅಮಿತ್ ಸಿಂಗ್ ಸೋಮವಾರ ಅಧಿಕಾರ ಸ್ವೀಕರಿಸಿದರು.
ಬೆಂಗಳೂರಿಗೆ ವರ್ಗಾವಣೆಗೊಂಡಿರುವ ಚಂದ್ರಗುಪ್ತ ಐಪಿಎಸ್ ಅವರಿಂದ ಸಿಂಗ್ ಅಧಿಕಾರ ವಹಿಸಿಕೊಂಡರು. ಬಳಿಕ ಮಾತನಾಡಿ, ಮಾದಕವಸ್ತು ಸಂಬಂಧಿತ ಅಪರಾಧಗಳು ಮತ್ತು ಕೋಮು ಹಿಂಸಾಚಾರದ ವಿರುದ್ಧ ಇಲಾಖೆಯು ಶೂನ್ಯ- ಸಹಿಷ್ಣು ನೀತಿಯನ್ನು ಅಳವಡಿಸಿಕೊಳ್ಳಲಿದೆ ಎಂದು ಸಿಂಗ್ ಹೇಳಿದರು.
ಸೈಬರ್ ಅಪರಾಧಗಳು ಸೇರಿದಂತೆ ಎಲ್ಲಾ ರೀತಿಯ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲಾಗುವುದು. ಸೈಬರ್ ಅಪರಾಧಗಳನ್ನು ನಿಭಾಯಿಸುವಲ್ಲಿ ಹೆಚ್ಚಿನ ಜಾಗರೂಕತೆ ಮತ್ತು ನಿಗಾ ಪ್ರಯತ್ನಗಳು ಇರುತ್ತವೆ ಎಂದರು.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ ಬಿ ರಿಷ್ಯಂತ್, ಉಡುಪಿ ಜಿಲ್ಲಾ ಎಸ್ಪಿ ಅರುಣ್ ಕುಮಾರ್ ಉಪಸ್ಥಿತರಿದ್ದರು.