ಸುಳ್ಯ : ಇಲ್ಲಿನ ಶಾಂತಿನಗರದಲ್ಲಿ ಗುರುವಾರ ಬೆಳಗಿನ ಜಾವ ದುಷ್ಕರ್ಮಿಗಳ ತಂಡದವರು ವ್ಯಕ್ತಿಯೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.
ಸಂಪತಕುಮಾರ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಸಂಪತ್ ಕುಮಾರ ವರ್ಷದ ಹಿಂದೆ ನಡೆದ ಸಂಪ ಕಾಳಗಿ ಬಾಲಚಂದ್ರ ಕೊಲೆ ಪ್ರಕರಣದ ಆರೋಪಿ ಎಂದು ತಿಳಿದು ಬಂದಿದೆ.
ಕಾರಿನಲ್ಲಿ ಬಂದ ಅಪರಿಚಿತ ತಂಡವೊಂದು ಸಂಪತ್ಗೆ ಗುಂಡಿಕ್ಕಿ ಪರಾರಿಯಾಗಿದೆ. ಗಾಯಗೊಂಡ ಸಂಪತ್ ಕುಮಾರನನ್ನ ಸುಳ್ಯ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿತ್ತಾದರೂ ಅಷ್ಟರಲ್ಲಿ ಮೃತಪಟ್ಟಿದ್ದಾರೆ.
ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.