ಮಂಗಳೂರು ಕಿಡ್ನಾಪ್ ಪ್ರಕರಣ. ಮೂವರನ್ನ ಬಂಧಿಸಿದ ಮಂಗಳೂರು ಪೊಲೀಸರು.

Source: SO News | By Laxmi Tanaya | Published on 16th January 2021, 7:51 PM | Coastal News |

ಮಂಗಳೂರು : ಮಂಗಳೂರಲ್ಲಿ ಮಕ್ಕಳ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಟಿವಿ ಕ್ಯಾಮೆರಾ ದೃಶ್ಯವನ್ನು ಆಧರಿಸಿ 3 ಮಂದಿಯನ್ನು ಬಂಧನ ಮಾಡಲಾಗಿದೆ ಎಂದು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್   ತಿಳಿಸಿದರು.

ರಕ್ಷಿತ್ ಶೆಟ್ಟಿ, ರಾಹುಲ್ ಸಿನ್ಹಾ, ಅಲಿಸ್ಟಾರ್ ಎಂಬುವರನ್ನು ಬಂಧನ ಮಾಡಲಾಗಿದೆ. ಈ ಮೂವರು  ಮಕ್ಕಳನ್ನು ಗೋಣಿ ಚೀಲದಲ್ಲಿ ತುಂಬಿಕೊಂಡು ಅಪಹರಣ ಮಾಡಲು ಯತ್ನಿಸಿದ್ದು, ತನಿಖೆಯಿಂದ ತಿಳಿದು ಬಂದಿದೆ. ಈ ಪ್ರಕರಣದಲ್ಲಿ ಭಾಗಿ ಆಗಿರುವ ಮೂವರ ವಿರುದ್ದ ಹಿಂದೆ ಕೂಡ ಪ್ರಕರಣ ದಾಖಲಾಗಿವೆ ಎಂದು ತಿಳಿಸಿದರು. 

ಆರೋಪಿಗಳು ಡ್ರಗ್ ಪ್ರಕರಣಗಳಲ್ಲಿ ಕೂಡ ಇವರು ಇದ್ದಾರೆ. ಪ್ರಕರಣದ ಪತ್ತೆಗೆ ತಂಡವನ್ನು ರಚನೆ ಮಾಡಲಾಗಿತ್ತು ಎಂದು ಕಮಿಷನರ್ ಶಶಿಕುಮಾರ್ ತಿಳಿಸಿದರು

Read These Next