ಮಂಗಳೂರು : ಮಹಾನಗರ ಪಾಲಿಕೆಯ ಮುಂದಿನ ಅವಧಿಯ ಮೇಯರ್ ಉಪ ಮೇಯರ್ ಅಭ್ಯರ್ಥಿ ಹೆಸರು 2ದಿನಗಳಲ್ಲಿ ಅಂತಿಮಗೊಳ್ಳುವ ಸಾಧ್ಯತೆಯಿದೆ . ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ ಸಹಿತ ಮಂಗಳೂರು ದಕ್ಷಿಣ ಮತ್ತು ಉತ್ತರ ಶಾಸಕರ ಸಮಕ್ಷಮದಲ್ಲಿ ಶನಿವಾರ ಮಹತ್ವದ ಸಭೆ ನಡೆಯುವ ಸಾಧ್ಯತೆಯಿದೆ.
ಸಭೆಯಲ್ಲಿ ಮೇಯರ್ ಮತ್ತು ಉಪಮೇಯರ್ ಅಭ್ಯರ್ಥಿ ಅಂತಿಮಗೊಳ್ಳುವ ನಿರೀಕ್ಷೆ ಇದೆ . ಹಾಲಿ ಮೇಯರ್ ದಿವಾಕರ್ ಪಾಂಡೇಶ್ವರ ಅವರ ಅಧಿಕಾರ ಅವಧಿ ಫೆಬ್ರವರಿ 28ರಂದು ಕೊನೆಗೊಳ್ಳಲಿದ್ದು ನೂತನ ಮೇಯರ್ ಉಪಮೇಯರ್ ಆಯ್ಕೆ ಮಾರ್ಚ್ 2ರಂದು ಚುನಾವಣೆ ನಡೆಯಲಿದೆ .
ಪಾಲಿಕೆಯಲ್ಲಿ ಮೂರನೇ ಅವಧಿಯ ಮೇಯರ್ ಉಪ ಮೇಯರ್ ಸ್ಥಾನಕ್ಕೆ ಮೀಸಲಾತಿ ಈಗಾಗಲೇ ಪ್ರಕಟಗೊಂಡಿದ್ದು ಮೇಯರ್ ಸಾಮಾನ್ಯ ಮತ್ತು ಉಪ ಮೇಯರ್ ಸ್ಥಾನವು ಸಾಮಾನ್ಯ ಮಹಿಳೆಗೆ ಮೀಸಲಾಗಿದೆ . ಈ ಬಾರಿ ಮೇಯರ್ ಸ್ಥಾನ ಮಂಗಳೂರು ದಕ್ಷಿಣ ಕ್ಷೇತ್ರದ ಪಾಲಾಗುವ ಸಾಧ್ಯತೆ ಇದ್ದು ಪಾಲಿಕೆಯ ಹಿರಿಯ ಸದಸ್ಯರಾದ ಪ್ರೇಮಾನಂದ ಶೆಟ್ಟಿ ಸುಧೀರ್ ಶೆಟ್ಟಿ ಕಣ್ಣೂರು ಅವರ ಹೆಸರು ಮುಂಚೂಣಿಯಲ್ಲಿ ಕೇಳಿಬರುತ್ತಿದೆ. ಆದರೆ ಪಕ್ಷದ ತೀರ್ಮಾನ ಏನೆಂಬುದು ಕೆಲದಿನಗಳಲ್ಲಿಯೇ ಹೊರಬೀಳಲಿದೆ .
ಹಾಲಿ ಮೇಯರ್ ದಿವಾಕರ್ ಪಾಂಡೇಶ್ವರ ಅವರ ಅಧಿಕಾರ ಅವಧಿ ಫೆಬ್ರವರಿ 28ರಂದು ಪೂರ್ಣಗೊಳ್ಳಲಿದೆ , ಆದರೆ ಮಾರ್ಚ್ 2ರಂದು ಪಾಲಿಕೆ ಮೇಯರ್ ಉಪಮೇಯರ್ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ನಿಯಮದ ಪ್ರಕಾರ ಮಾರ್ಚ್ ಎರಡರವರೆಗೆ ಹಾಲಿ ಮೇಯರ್ ದಿವಾಕರ ಪಾಂಡೇಶ್ವರ ಮತ್ತು ಉಪಮೇಯರ್ ವೇದಾವತಿ ಅವರ ಅಧಿಕಾರ ಅವಧಿ ವಿಸ್ತರಣೆ ಗೊಳ್ಳಲಿದೆ ಎಂದು ಪಾಲಿಕೆ ಅಧಿಕಾರಿಗಳು ಮಾಧ್ಯಮಕ್ಕೆ ತಿಳಿಸಿದ್ದಾರೆ .