ಮಂಗಳೂರು: ಪ್ರಕೃತಿ ಚಿಕಿತ್ಸೆ ದಿನದ ಅಂಗವಾಗಿ ಯೆನೆಪೋಯ ದಿಂದ ಬೀದಿನಾಟಕ

Source: SO News | By Laxmi Tanaya | Published on 24th November 2023, 9:38 PM | Coastal News | Don't Miss |

ಮಂಗಳೂರು: ಯೆನೆಪೋಯ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜು ವಿದ್ಯಾರ್ಥಿಗಳಿಂದ 6 ನೇ ರಾಷ್ಟೀಯ ಪ್ರಕೃತಿ ಚಿಕಿತ್ಸೆ ದಿನಾಚರಣೆ ಅಂಗವಾಗಿ ನಾಟೆಕಲ್ ಬಸ್ಟ್ಯಾಂಡ್ ಬಳಿ ಬೀದಿನಾಟಕ ಆಯೋಜಿಸಲಾಯಿತು.

ಜನರಿಗೆ ಪ್ರಕೃತಿ ಚಿಕಿತ್ಸೆಯ ಮಹತ್ವವನ್ನು ನಾಟಕದ ಮೂಲಕ ಅರಿವು ಮೂಡಿಸಲಾಯಿತು. ಪ್ರಕೃತಿಯಲ್ಲಿ ಸಿಗುವಂತಹ ಆಹಾರದ ಪ್ರಾಮುಖ್ಯತೆ ತಿಳಿಸಲಾಯಿತು. ದಿನನಿತ್ಯ ಯೋಗಾಭ್ಯಾಸ ಮಾಡುವುದರ ಮೂಲಕ ಮಾನಸಿಕ ಅರೋಗ್ಯ ವ್ರಿದ್ಧಿಗೊಳಿಸಲು ಸಹಾಯವಾಗುತ್ತದೆ ಎಂಬ ಸಾರಾಂಶದ ಮೂಲಕ ಜನರಿಗೆ ಈ ಬೀದಿನಾಟಕ ಪ್ರದರ್ಶಿಸಿಸಲಾಯಿತು.

ಈ ಸಂದರ್ಭದಲ್ಲಿ ಯೆನೆಪೋಯದ ಶಿಬಿರಾಧಿಕಾರಿ ರಜಾಕ್ ರವರು, ಮಂಜನಾಡಿ ಪಂಚಾಯತ್ ಅಧ್ಯಕ್ಷರಾದ ಸರೋಜಿನಿ ಹಾಗೂ ಯೆನೆಪೋಯ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜು ವೈದ್ಯಾಧಿಕಾರಿಗಳಾದ ಡಾ. ಶಗುಪ್ತ, ಡಾ. ಅರ್ಪಿತ್ ಕುಮಾರ್ ಮತ್ತು ಅಜಿತ್ ರವರು ಉಪಸ್ಥಿತರಿದ್ದರು.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...