ಮಂಗಳೂರು-ದುಬೈ ಜೆಟ್ ಏರ್‌ವೇಸ್ ವಿಳಂಬ ಸಾಧ್ಯತೆ; ಪ್ರಯಾಣಿಕರ ಗೊಂದಲ

Source: S O News service | By Staff Correspondent | Published on 31st December 2016, 11:15 PM | Coastal News | National News | Gulf News | Don't Miss |

ಮಂಗಳೂರು : ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಶನಿವಾರ ರಾತ್ರಿ 11:25 ಗಂಟೆಗೆ ಮಂಗಳೂರಿನಿಂದ ದುಬೈಗೆ ಹೊರಡಬೇಕಾಗಿದ್ದ ಜೆಟ್ ಏರ್‌ವೇಸ್ ವಿಮಾನ ವಿಳಂಬವಾಗುವ ಸಾಧ್ಯತೆ ಬಗ್ಗೆ ಆತಂಕಗೊಂಡಿರುವ ಪ್ರಯಾಣಿಕರು ಈ ಕುರಿತು ಮುನ್ಸೂಚನೆ ನೀಡದ ಏರ್‌ವೇಸ್ ವಿರುದ್ಧ ಕಿಡಿಕಾರಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣದಿಂದ ರಾತ್ರಿ 11:25ಕ್ಕೆ ಹೊರಡಬೇಕಾಗಿದ್ದ 9ಡಬ್ಲು532 ವಿಮಾನದ ಪ್ರಯಾಣಿಕರು ಮೂರು ಗಂಟೆ ಮುಂಚಿತವಾಗಿಯೇ ಬಂದಿದ್ದು, ವಿಮಾನ ವಿಳಂಬವಾಗುವ ಬಗೆಗಿನ ಮಾಹಿತಿಯಿಂದ ಗಾಬರಿಗೊಂಡಿದ್ದಾರೆ. ವಿಮಾನವು ಹೊರಡಲು ತುಸು ವಿಳಂಬವಾಗಬಹುದು ಇಲ್ಲವೇ ರದ್ದಾಗಬಹುದೆಂದು ಹೇಳಲಾಗುತ್ತಿದ್ದು, ಈ ಬಗ್ಗೆ ಪ್ರಯಾಣಿಕರು ಏರ್‌ವೇಸ್‌ನ ಸಿಬ್ಬಂದಿಯನ್ನು ವಿಚಾರಿಸಲು ಸ್ಪಷ್ಟ ಮಾಹಿತಿ ನೀಡುತ್ತಿಲ್ಲ ಎಂದು ಪ್ರಯಾಣಿಕರು ಆರೋಪ ಮಾಡಿದ್ದಾರೆ.

ಇಂದು ದುಬೈಗೆ ಹೊರಡಬೇಕಾದ ವಿಮಾನವು ರದ್ದುಗೊಂಡಲ್ಲಿ ಅದೇ ಪ್ರಯಾಣಿಕರನ್ನು ರವಿವಾರ ಮಧ್ಯಾಹ್ನ 3:15ಕ್ಕೆ ಅಥವಾ ರವಿವಾರ ರಾತ್ರಿ 11:25ಕ್ಕೆ ಹೊರಡುವ ಜೆಟ್ ಏರ್‌ವೇಸ್ ವಿಮಾನದಲ್ಲಿ ಕಳುಹಿಸುವ ಬಗ್ಗೆಯೂ ಹೇಳಲಾಗುತ್ತಿದ್ದು, ಪ್ರಯಾಣಿಕರಲ್ಲಿ ಗೊಂದಲ ಮೂಡಿದೆ.

Read These Next

ರಿಲಯನ್ಸ್ ಜೊತೆ ನಂಟು ಹೊಂದಿರುವ ಕಂಪೆನಿಯಿಂದ ಬಿಜೆಪಿಗೆ 375 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್

ರಿಲಯನ್ಸ್ ಗುಂಪಿನೊಂದಿಗೆ ನಂಟು ಹೊಂದಿರುವ, ಆದರೆ ಹೊರಜಗತ್ತಿಗೆ ಅಪರಿಚಿತವಾಗಿರುವ ಕಂಪೆನಿ ಕ್ವಿಕ್ ಸಪ್ಪೆ ಚೇನ್ ಪ್ರೈವೇಟ್ ...

ಲೋಕಸಭಾ ಚುನಾವಣೆ; ಕಾಂಗ್ರೇಸ್ ನ ಎರಡನೇ ಪಟ್ಟಿ ಬಿಡುಗಡೆ; ಉ.ಕ ಕ್ಷೇತ್ರಕ್ಕೆ ಅಂಜಲಿ ನಿಂಬಾಳ್ಕರ್

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಕರ್ನಾಟಕದ 17, ಅರುಣಾಚಲ ...

ಸಿಎಎ ನಿಯಮಾವಳಿಗಳಿಗೆ ತಡೆ ಕೋರುವ ಅರ್ಜಿಗಳ ವಿಚಾರಣೆ ; ಸು.ಕೋರ್ಟ್‌ನಿಂದ ಕೇಂದ್ರಕ್ಕೆ ನೋಟಿಸ್

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ನಿಯಮಗಳಿಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಮಂಗಳವಾರ ...

ದುಬಾಯಿಯಲ್ಲಿ "ಗಲ್ಫ್ ಕರ್ನಾಟಕೊತ್ಸವ" ಯಶಸ್ವಿ; ಐತಿಹಾಸಿಕ ದಾಖಲೆಗೆ ಸಾಕ್ಷಿಯಾದ ಅನಿವಾಸಿ ಕನ್ನಡಿಗರು

ಕರ್ನಾಟಕದ 21 ಅತ್ಯಂತ್ ಪ್ರಭಾವಶಾಲಿ ವ್ಯಾಪಾರ  ಐಕಾನ್ ಗಳು ಗಲ್ಫ್ ಕರ್ನಾಟಕ ರತ್ನ ಪ್ರಶಸ್ತಿಗಳೊಂದಿಗೆ ಗೌರವಿಸಲಿಟ್ಟರು.

ಪ್ರವಾದಿ ಕುರಿತು ವಿವಾದಾತ್ಮಕ ಹೇಳಿಕೆಗೆ ಮುಂದುವರಿದ ಆಕ್ರೋಶ; 17 ದೇಶಗಳ ಖಂಡನೆ; ಗಲ್ಫ್ ಸಹಕಾರ ಮಂಡಳಿಯಿಂದಲೂ ಆಕ್ಷೇಪ

ತಾನು ಎಲ್ಲ ಧರ್ಮಗಳನ್ನು ಗೌರವಿಸುತ್ತೇನೆ ಎಂದು ಒತ್ತಿ ಹೇಳುವ ಮೂಲಕ ವಿವಿಧ ದೇಶಗಳಲ್ಲಿ ಭುಗಿಲೆದ್ದಿರುವ ಕ್ರೋಧದ ಅಲೆಯನ್ನು ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...