ಪ್ರಧಾನಿಯಿಂದ ೧೨ಲಕ್ಷ ರೂಪೆ ಕಾರ್ಡ್ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ

Source: sonews | By Staff Correspondent | Published on 29th October 2017, 9:55 PM | Coastal News | State News | National News | Don't Miss |

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಉಜಿರೆಯ ರತ್ನವರ್ಮ ಕ್ರೀಡಾಂಗಣದಲ್ಲಿ ನಡೆದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೃಹತ್‌ ಕಾರ್ಯಕ್ರಮದಲ್ಲಿ ಇಂದು ಮಧ್ಯಾಹ್ನ ಪಾಲ್ಗೊಂಡು 12 ಲಕ್ಷ ಸ್ವಸಹಾಯ ಸಂಘದ ಸದಸ್ಯರಿಗೆ ರೂಪೇ ಕಾರ್ಡ್  ವಿತರಿಸುವ ಕಾರ್ಯಕ್ರಮಕ್ಕೆ  ಚಾಲನೆ ನೀಡಿದರು. ಇಬ್ಬರು ಮಹಿಳೆಯರಿಗೆ ಸಾಂಕೇತಿಕವಾಗಿ ರುಪೇ ಕಾರ್ಡ್ ವಿತರಿಸಿದರು.

 

“ನಮೋ ಮಂಜುನಾಥ .... ಧರ್ಮಸ್ಥಳದ ಬಂಧು ಭಗಿನೀಯರೇ  ನಿಮಗೆಲ್ಲರಿಗೂ ನನ್ನ ನಮಸ್ಕಾರ "ಎಂದು ಕನ್ನಡದಲ್ಲಿ ಭಾಷಣ  ಆರಂಭಿಸಿದ ಪ್ರಧಾನಿ ಮೋದಿ  "ಮಂಜುನಾಥ ಸ್ವಾಮಿ  ದರ್ಶನ ಪಡೆಯುವ ಅವಕಾಶ ಸಿಕ್ಕಿದ್ದು ನನ್ನ ಸೌಭಾಗ್ಯ "ಎಂದು ಬಣ್ಣಿಸಿದರು.

"ಕಳೆದ ವಾರ ಆಧಿಶಂಕರರು ಸ್ಥಾಪಿಸಿದ್ದ ಕೇದರನಾಥ್ ದರ್ಶನ ಪಡೆದಿದ್ದೆ. ಇಂದು ದಕ್ಷಿಣದ ಮಂಜುನಾಥನ ದರ್ಶನದ ಅವಕಾಶ ಸಿಕ್ಕಿದೆ ಎಂದು ಅಭಿಪ್ರಾಯಪಟ್ಟರು.

“ನನ್ನಂತ ಸಾಮಾನ್ಯ ವ್ಯಕ್ತಿಗೆ ನೀವು ಸನ್ಮಾನ ಮಾಡಿದ್ದೀರಿ.ನಿಮ್ಮಂತಹ ಮಹಾನ್ ತಪಸ್ವಿಯ  ಮುಂದೆ ನಾನು ಚಿಕ್ಕವನು. ನಿಮ್ಮ ಸಾಧನೆ ನಮಗೆಲ್ಲರಿಗೂ ಪ್ರೇರಣೆ ವಿಷಯ  "ಎಂದು ಡಾ.ಹೆಗ್ಗಡೆ ಅವರನ್ನು ಪ್ರಧಾನಿ ಮೋದಿ ಶ್ಲಾಘಿಸಿದರು.

"ಕೇಂದ್ರದ ಕೌಶಲ್ಯಾಭಿವದ್ಧಿ ಕಾರ್ಯಕ್ರಮಕ್ಕೆ ಹೆಗ್ಗಡೆಯವರೇ ಪ್ರೇರಣೆಯಾಗಿದ್ದಾರೆ. ಅವರ ತತ್ವವನ್ನೇ ಕೌಶಲ್ಯ ಅಭಿವೃದ್ಧಿ ಯೋಜನೆಯಲ್ಲಿ ಅಳವಡಿಸಲಾಗಿದೆ. ಅವರು ಸಣ್ಣ ವಯಸ್ಸಿನಿಂದ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದಾರೆ.  50 ವರ್ಷಗಳಿಂದ ಸಮಾಜದ ಹಿತಕ್ಕಾಗಿ ಕೆಲಸ ಮಾಡುವ ಅವರ ಸಾಧನೆ ದೊಡ್ಡದು" ಎಂದು ಹೇಳಿದರು.

ಶ್ರೀಕ್ಷೇತ್ರದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರು ಪ್ರಧಾನಿ ಮೋದಿಗೆ ಪೈಸೂರು ಪೇಟಾ ತೊಡಿಸಿ, ಸರಸ್ವತಿಯ ವಿಗ್ರಹ ನೀಡಿ ಸಾಂಪ್ರದಾಯಿಕವಾಗಿ ಗೌರವಿಸಿದರು.  ಇದೇ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು. ಡಾ.ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಸನ್ಮಾನಿಸಿದರು.

 ಕಂಬಳದ ನೊಗದ ಮಾದರಿ ಉಡುಗೊರೆಯನ್ನು ಸಂಸದ ನಳಿನಿ ಕುಮಾರ್ ಕಟೀಲ್ ಅವರು ಪ್ರಧಾನಿ ಮೋದಿಗೆ ಸಮರ್ಪಣೆ ಮಾಡಿದರು.

ಕೇಂದ್ರ ಸಚಿವರಾದ ಡಿ.ವಿ.ಸದಾನಂದ ಗೌಡ ಮತ್ತು  ಅನಂತ ಕುಮಾರ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ,  ಶಾಸಕ ವಸಂತ ಬಂಗೇರ ಮತ್ತಿತರರು ಉಪಸ್ಥಿತರಿದ್ದರು.

ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಪ್ರಾಸ್ತಾವಿಕ ಮಾತನಾಡಿದರು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕ ಎಲ್.ಎಚ್.ಮಂಜುನಾಥ ಸ್ವಾಗತಿಸಿದರು. ಡಾ.ಯಶೋವರ್ಮ ಕಾರ್ಯಕ್ರಮ ನಿರೂಪಿಸಿದರು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...