ಮಂಗಳೂರು : ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಕಾಂಪೌಂಡ್ ಗೋಡೆ ಕುಸಿದು ವ್ಯಕ್ತಿಯೋರ್ವರು ಮಣ್ಣಿನಡಿಯಲ್ಲೇ ಜೀವಂತ ಸಮಾಧಿಯಾದ ಘಟನೆ ನಡೆದಿದೆ.
ಮಂಗಳೂರಿನ ಬಂಗ್ರಕೂಳೂರು ಬಳಿ ಮನೆಯೊಂದರ ಕೂಲಿ ಕೆಲಸ ಮಾಡುತ್ತಿದ್ದ ನೀರುಮಾರ್ಗ ನಿವಾಸಿ ಉಮೇಶ್ (38) ಮೃತಪಟ್ಟ ದುರ್ದೈವಿ. ಮನೆಯೊಂದರ ತೋಟದ ಕೆಲಸ ಮಾಡುತ್ತಿದ್ದ ವೇಳೆ ಪಕ್ಕದ ಕಾಂಪೌಂಡ್ ಗೋಡೆ ಕುಸಿದು ಬಿದ್ದಿದೆ.ಈ ವೇಳೆ ಅಲ್ಲೇ ಇದ್ದ ಮೂವರು ಕಾರ್ಮಿಕರು ಓಡಿ ಪಾರಾಗಲು ಯತ್ನಿಸಿದ್ದರು.ಇಬ್ಬರು ಓಡಿ ಪಾರಾಗಿದ್ದು ಉಮೇಶ್ ಅವರು ಅಲ್ಲೇ ತೆಗೆದಿದ್ದ ಶೌಚಾಲಯ ಗುಂಡಿಗೆ ಬಿದ್ದಿದ್ದು ಅವರ ಮೇಲೆ ಕುಸಿದ ಮಣ್ಣು ಬಿದ್ದಿದೆ. ಸುಮಾರು ಮೂರು ಗಂಟೆಯ ಕಾರ್ಯಾಚರಣೆ ಬಳಿಕ ಉಮೇಶ್ ಅವರ ಮೃತದೇಹ ಮೇಲಕ್ಕೆತ್ತಲಾಗಿದೆ.
ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.