ಮಣಿಪುರ: ಬೆತ್ತಲೆ ಮೆರವಣಿಗೆಯ ದಿನವೇ ಮತ್ತಿಬ್ಬರು ಮಹಿಳೆಯರ ಅತ್ಯಾಚಾರಗೈದು ಹತ್ಯೆ

Source: Vb | By I.G. Bhatkali | Published on 23rd July 2023, 2:36 PM | National News |

ಇಂಫಾಲ: ಗುಂಪೊಂದು ಇಬ್ಬರು ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿದ ಘಟನೆ ಸಂಭವಿಸಿದ ಕೊಂಗ್‌ಪೊಕ್ವಿ ಜಿಲ್ಲೆಯ ಗ್ರಾಮದಿಂದ ನಿಖರವಾಗಿ 40 ಕಿ.ಮೀ. ದೂರದಲ್ಲಿರುವ ಇಂಫಾಲದಲ್ಲಿ ಮೇ 4ರಂದು ಮತ್ತಿಬ್ಬರು ಮಹಿಳೆಯರ ಮೇಲೆ ಗುಂಪೊಂದು ಸಾಮೂಹಿಕ ಅತ್ಯಾಚಾರ ಎಸಗಿ ಹತ್ಯೆಗೈದಿರುವುದು ಬೆಳಕಿಗೆ ಬಂದಿದೆ.

ಈ ಎರಡು ಘಟನೆಗಳು ಒಂದೇ ದಿನ ಕೆಲವೇ ಗಂಟೆಗಳ ಅಂತರದಲ್ಲಿ ನಡೆದಿದೆ. ಈ ಇಬ್ಬರು ಮಹಿಳೆಯರು ಕುಕಿ ಸಮುದಾಯಕ್ಕೆ ಸೇರಿದವರು ಹಾಗೂ ಅವರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಹತ್ಯೆಗೈದವರು ಮೈತೈ ಸಮುದಾಯಕ್ಕೆ ಸೇರಿದವರು. ಇಂಫಾಲದಲ್ಲಿ ಸಾಮೂಹಿಕವಾಗಿ ಅತ್ಯಾಚಾರಕ್ಕೊಳಗಾಗಿ ಹತ್ಯೆಯಾದ ಇಬ್ಬರು ಮಹಿಳೆಯರು ಸಹೋದರಿಯರಾಗಿದ್ದರು ಹಾಗೂ ನಗರದ ಕಾರ್ ವಾಶ್ ಕಂಪೆನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು ಎಂದು ಅವರ ತಂದೆ ದಾಖಲಿಸಿದ ಎಫ್‌ಐಆರ್ ನಲ್ಲಿ ಹೇಳಲಾಗಿದೆ.

21 ಹಾಗೂ 24 ವರ್ಷದ ಈ ಮಹಿಳೆಯರು ತಮ್ಮ ಬಾಡಿಗೆ ಮನೆಯಲ್ಲಿ ದ್ದಾಗ ಗುಂಪು ಪ್ರವೇಶಿಸಿದೆ. ಅಲ್ಲದೆ, ಅತ್ಯಾಚಾರವೆಸಗಿ, ಹತ್ಯೆಗೈದಿದೆ ಎಂದು ಎಫ್‌ಐಆರ್‌ನಲ್ಲಿ ಹೇಳಲಾಗಿದೆ. ಆದರೆ, ಈ ಪ್ರಕರಣದಲ್ಲಿ ಇದುವರೆಗೆ ಆರೋಪಿಗ ಳನ್ನು ಬಂಧಿಸಿಲ್ಲ.

ಮಣಿಪುರದಲ್ಲಿ ಮೈತೈ ಸಮುದಾಯದ ಜನರು ಸುಮಾರು ಶೇ. 53 ಇದ್ದಾರೆ. ಇವರಲ್ಲಿ ಹೆಚ್ಚಿನವರು ಇಂಫಾಲ ಕಣಿವೆಯಲ್ಲಿ ವಾಸಿಸುತ್ತಿದ್ದಾರೆ. ನಾಗಾ, ಕುಕಿಗಳು ಸೇರಿದಂತೆ ಬುಡಕಟ್ಟು ಜನರು ಶೇ. 40 ಇದ್ದಾರೆ. ಇವರು ಹೆಚ್ಚಾಗಿ ಗುಡ್ಡಗಾಡು ಜಿಲ್ಲೆಗಳಲ್ಲಿ ವಾಸಿಸುತ್ತಿದ್ದಾರೆ.

ರಾಜ್ಯ ಸಹಜ ಸ್ಥಿತಿಗೆ ಮರಳುತ್ತಿರುವ ಸಂದರ್ಭ ಮೈತೈ ಸಮುದಾಯದ ಜನರ ಗುಂಪು ಮೇ 4ರಂದು ಕುಕಿ ಬುಡಕಟ್ಟಿಗೆ ಸೇರಿದ ಇಬ್ಬರು ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿದ ವೀಡಿಯೊ ಬುಧವಾರ ವೈರಲ್‌ ಆಗಿದೆ. ಈ ವೀಡಿಯೊದ ಬಗ್ಗೆ ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ವರದಿ ಕೊಡಿ; ರಾಜ್ಯ ಡಿಜಿಪಿಗೆ ರಾಷ್ಟ್ರೀಯ ಮಹಿಳಾ ಆಯೋಗ ಸೂಚನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಮೇಲೆ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ...

ನಾಮಪತ್ರ ಹಿಂಪಡೆದ ಇಂದೋರ್ ಕಾಂಗ್ರೆಸ್ ಅಭ್ಯರ್ಥಿ; ಅಕ್ಷಯ್ ಕಾಂತಿ ಬಮ್ ಬಿಜೆಪಿ ಸೇರ್ಪಡೆ

ಇಂದೋರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಮ್ ಅವರು ತನ್ನ ನಾಮಪತ್ರವನ್ನು ಹಿಂಪಡೆದಿದ್ದಾರೆ ಹಾಗೂ ಬಿಜೆಪಿ ...

ಲೈಂಗಿಕ ಹಗರಣ; ಪ್ರಜ್ವಲ್ ರೇವಣ್ಣರನ್ನು ಮೋದಿ ರಕ್ಷಿಸುತ್ತಿದ್ದಾರೆ; ಕಾಂಗ್ರೆಸ್

ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪವನ್ನು ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಪ್ರಧಾನಿ ನರೇಂದ್ರ ಮೋದಿಯವರು ...