ಗೋವಾ ಸಿಯಂ ಅಸೌಖ್ಯ; ಸರ್ಕಾರ ರಚನೆಗೆ ಕಾಂಗ್ರೇಸ್ ಹಕ್ಕುಮಂಡನೆ

Source: sonews | By Staff Correspondent | Published on 17th September 2018, 6:33 PM | National News | Don't Miss |

ಪಣಜಿ : ಅಸೌಖ್ಯದಿಂದಿರುವ ಗೋವಾ ಮುಖ್ಯಮಂತ್ರಿ ಮನೋಹರ್ ಪಾರಿಕ್ಕರ್ ಅವರು ಮತ್ತೆ ಆಸ್ಪತ್ರೆಗೆ ದಾಖಲಾಗಿರುವುದರಿಂದ ಗೋವಾದ ಪ್ರಮುಖ ವಿಪಕ್ಷವಾಗಿರುವ ಕಾಂಗ್ರೆಸ್ ಇಂದು ರಾಜ್ಯಪಾಲೆ ಮೃದುಲಾ ಸಿನ್ಹಾಅವರಿಗೆ ಮನವಿ ಸಲ್ಲಿಸಿ ಪರ್ಯಾಯ ಸರಕಾರ ರಚಿಸಲು ತನ್ನ ಹಕ್ಕು ಮಂಡಿಸಿದೆ.

ಪಕ್ಷಕ್ಕೆ ಅವಕಾಶ ನೀಡಿದರೆ ಸದನದಲ್ಲಿ ಬಹುಮತ ಸಾಬೀತು ಪಡಿಸುವುದು ಎಂದೂ ಪಕ್ಷ ರಾಜ್ಯಪಾಲರಿಗೆ ತಿಳಿಸಿದೆ.

ಮುಖ್ಯಮಂತ್ರಿಯ ಅಸೌಖ್ಯದಿಂದಾಗಿ ರಾಜ್ಯದಲ್ಲಿನ ರಾಜಕೀಯ ಪರಿಸ್ಥಿತಿಯನ್ನು ವಿಶ್ಲೇಷಿಸಲು ಬಿಜೆಪಿ ಹೈಕಮಾಂಡ್ ತನ್ನ ಮೂವರು ಹಿರಿಯ ನಾಯಕರಾದ ರಾಮ್ ಲಾಲ್, ಬಿ ಎಲ್ ಸಂತೋಷ್ ಹಾಗೂ ವಿನಯ್ ಪುರಾಣಿಕ್ ಅವರನ್ನು ಪಣಜಿಗೆ ಕಳುಹಿಸಿದ ಸಂದರ್ಭ ಈ ಬೆಳವಣಿಗೆ ನಡೆದಿದೆ. ಪಾರಿಕ್ಕರ್ ಅವರು ಸದ್ಯ ದಿಲ್ಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಲ್ವತ್ತು ಸದಸ್ಯರ ಗೋವಾ ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ 16 ಸದಸ್ಯರಿದ್ದು  ಪಕ್ಷಕ್ಕೆ ಸರಕಾರ ರಚಿಸಲು ಆಹ್ವಾನಿಸಬೇಕೆಂದು ಆಗ್ರಹಿಸಲಾಗಿದೆ ಎಂದು ವಿಪಕ್ಷ ನಾಯಕ ಚಂದ್ರಕಾಂತ್ ಕವ್ಲೇಕರ್ ಹೇಳಿದ್ದಾರೆ.

ಬಿಜೆಪಿಗೆ ರಾಜ್ಯದಲ್ಲಿ 14 ಸದಸ್ಯರ ಬಲವಿದ್ದು ಗೋವಾ ಫಾರ್ವರ್ಡ್ ಪಾರ್ಟಿ ಹಾಗೂ ಎಂಜಿಪಿ ಜತೆ ಅದು ಮೈತ್ರಿ ಸಾಧಿಸಿದೆ. ಈ ಪಕ್ಷಗಳ ಹೊರತಾಗಿ ಮೂವರು ಪಕ್ಷೇತರ ಶಾಸಕರು ಹಾಗೂ ಎನ್‍ಸಿಪಿಯ ಒಬ್ಬ ಶಾಸಕ ಕೂಡಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ.

ರಾಜ್ಯಪಾಲರನ್ನು ಭೇಟಿಯಾದ ಕಾಂಗ್ರೆಸ್ ನಿಯೋಗದಲ್ಲಿ ಎಲ್ಲಾ 16 ಪಕ್ಷದ ಶಾಸಕರಿದ್ದರು. ರಾಜ್ಯದ ಆಡಳಿತ ಮೈತ್ರಿಕೂಟದಲ್ಲಿ ಸಹಮತವಿಲ್ಲದೇ ಇರುವುದರಿಂದ ವಿಧಾನಸಭೆ ವಿಸರ್ಜಿಸದಂತೆ ನಿಯೋಗ ರಾಜ್ಯಪಾಲರಿಗೆಮನವಿ ಮಾಡಿದೆ.

ಗೋವಾ ಸರಕಾರ ಸ್ಥಿರವಾಗಿದ್ದು ನಾಯಕತ್ವ ಬದಲಾವಣೆಗೆ ಯಾವುದೇ ಆಗ್ರಹವಿಲ್ಲ ಎಂದು ಬಿಜೆಪಿ ನಾಯಕ ರಾಮ್ ಲಾಲ್ ಈ ಹಿಂದೆ ಹೇಳಿದ್ದರು.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...