ಭಟ್ಕಳ: ವಿಶ್ವ ಕ್ಯಾನ್ಸರ್ ದಿನ:ಜಾಗೃತಿಗಾಗಿ 5 ಕಿ.ಮೀ. ಮ್ಯಾರಥಾನ್

Source: S O News | By MV Bhatkal | Published on 6th February 2023, 1:58 AM | Coastal News |

ಭಟ್ಕಳ: ವಿಶ್ವ ಕ್ಯಾನ್ಸರ್ ದಿನದ ಪ್ರಯುಕ್ತ ಭಟ್ಕಳದ ಕ್ರಿಯಾಶೀಲ ಗೆಳೆಯರ ಸಂಘ, ಭಟ್ಕಳ ಪೊಲೀಸ್ ಇಲಾಖೆ ಹಾಗೂ ಆರೋಗ್ಯ ಇಲಾಖೆ ಮತ್ತಿತರ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ 'ಭಟ್ಕಳ 5ಕೆ ಮ್ಯಾರಥಾನ್ 2023' ಕ್ಯಾನ್ಸರ್ ಜಾಗ್ರತಿಗಾಗಿ ಓಟ ಯಶಸ್ವಿಯಾಗಿ ನಡೆಯಿತು.

ಭಟ್ಕಳದ ಇತಿಹಾಸದಲ್ಲಿಯೇ ಪ್ರಥಮ ಪ್ರಯೋಗವಾಗಿರುವ ಮ್ಯಾರಥಾನ್ ಗೆ ಯಲ್ವಡಿಕವೂರ ಪಂಚಾಯತಿಯ ಪಿಯು ಕಾಲೇಜು ಮೈದಾನದಲ್ಲಿ ಉಪವಿಭಾಗಾಧಿಕಾರಿ ಮಮತಾದೇವಿ ಹಸಿರು ನಿಶಾನೆ ತೋರಿದರು. ಅಲ್ಲಿಂದ ಸರ್ಪನಕಟ್ಟೆ ಮಾರ್ಗವಾಗಿ ಪುರವರ್ಗ ಜೋಸೆಫ್ ಚರ್ಚ್, ಕಾಸ್ಮುಡಿ ದೇವಸ್ಥಾನ, ಚೌಥನಿ ರಸ್ತೆಯಿಂದ ಹೂವಿನ ಪೇಟೆ ರಸ್ತೆಯಾಗಿ ಮಾರಿಗುಡಿ ದೇವಸ್ಥಾನ, ಪುರಸಭೆ, ಭಟ್ಕಳ ಅರ್ಬನ್ ಬ್ಯಾಂಕ್ ರಸ್ತೆ, ಪಿಎಲ್ಡಿ ಬ್ಯಾಂಕ್, ಸಂಶುದ್ದೀನ್ ಸರ್ಕಲ್ ಮಾರ್ಗವಾಗಿ ಸಾಗರ ರಸ್ತೆಯಿಂದ ಪೊಲೀಸ್ ಮೈದಾನದಲ್ಲಿ ಮ್ಯಾರಥಾನ್ ಸಮಾಪ್ತಿಗೊಂಡಿತು. 

ವಯಸ್ಸಿನ ಆಧಾರದ ಮೇಲೆ ನಾಲ್ಕು ವಿಭಾಗದಲ್ಲಿ ‌ಮ್ಯಾರಥಾನ್ ನಡೆಯಿತು. ನೂರಾರು ಜನ ಪಾಲ್ಗೊಂಡು ಜನರಲ್ಲಿ ಕ್ಯಾನ್ಸರ್ ಕುರಿತಾದ ಜಾಗ್ರತಿ ಹಾಗೂ ಮಾಹಿತಿ ನೀಡುವ ಕಾರ್ಯ ಮಾಡಿದರು.

 

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...