ಆರ್.ಎಸ್.ಎಸ್ ನ ರಾಷ್ಟ್ರೀಯ ಮುಸ್ಲಿಂ ಮಂಚ್ ನಿಂದ ರಾಮಮಂದಿರ ನಿರ್ಮಾಣಕ್ಕಾಗಿ ಅಯೋಧ್ಯೆಯಲ್ಲಿ ಸಾಮೂಹಿಕ ನಮಾಝ್

Source: sonews | By Staff Correspondent | Published on 11th July 2018, 7:06 PM | National News | Don't Miss |

ಲಕ್ನೋ: ಅಯೋಧ್ಯೆಯ ಚರಿತ್ರೆಯಲ್ಲೇ ಮೊದಲ ಬಾರಿ ಸರಯೂ ನದಿ ದಡದಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಕುರ್‌ಆನ್ ಪಠಣದೊಂದಿಗೆ ಸಾಮೂಹಿಕ ನಮಾಝ್ ನಡೆಯಲಿದೆ. ರಾಷ್ಟ್ರೀಯ ಮುಸ್ಲಿಂ ಮಂಚ್ ಜುಲೈ 12ರಂದು ಈ ಕಾರ್ಯಕ್ರಮ ಆಯೋಜಿಸಿದೆ. ಹಲವು ಹಿಂದೂಗಳೊಂದಿಗೆ 1500 ಮುಸ್ಲಿಂ ವಿದ್ವಾಂಸರು ಪಾಲ್ಗೊಳ್ಳಲಿದ್ದಾರೆ ಎನ್ನಲಾಗಿದೆ.

‘‘ಅಯೋಧ್ಯೆಯಲ್ಲಿ ಸರಯೂ ನದಿ ಹರಿಯುತ್ತಿರುವಂತೆ ದಂಡೆಯಲ್ಲಿ 1500ಕ್ಕೂ ಅಧಿಕ ಇಸ್ಲಾಂ ವಿದ್ವಾಂಸರು ಪಾಲ್ಗೊಳ್ಳುವ ಬೃಹತ್ ಕಾರ್ಯಕ್ರಮ ಇದಾಗಿದೆ’’ ಎಂದು ರಾಷ್ಟ್ರೀಯ ಮುಸ್ಲಿಂ ಮಂಚ್‌ನ ಮಾಧ್ಯಮ ಸಂಯೋಜಕ ರಝಾ ರಝ್ವಿ ತಿಳಿಸಿದ್ದಾರೆ.

"ವಿದ್ವಾಂಸರು ಸರಯೂ ನದಿಯಲ್ಲಿ ವುಝೂ (ಅಂಗಸ್ನಾನ) ಮಾಡಲಿದ್ದು, ನಂತರ ನಮಾಝ್ ಮಾಡಲಿದ್ದಾರೆ. ಆನಂತರ ಕುರ್ ಆನ್ ಪಠಣವೂ ನಡೆಯಲಿದೆ. ಅಯೋಧ್ಯೆಯಲ್ಲಿ ಶೀಘ್ರ ರಾಮ ಮಂದಿರ ನಿರ್ಮಾಣಕ್ಕಾಗಿ ಇದನ್ನು ಮಾಡುತ್ತಿದ್ದೇವೆ" ಎಂದವರು ಹೇಳಿದರು.

ಜಗತ್ತಿಗೆ ಶಾಂತಿ ಹಾಗೂ ಸೌಹಾರ್ದತೆಯ ಸಂದೇಶ ರವಾನಿಸಲು ಈ ಕಾರ್ಯಕ್ರಮ ಆಯೋಜಿಸುತ್ತಿದ್ದೇವೆ. ಶಾಂತಿ ಹಾಗೂ ಭ್ರಾತೃತ್ವದ ನಡುವೆ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ದಿಶೆಯಲ್ಲಿ ಈ ಪ್ರಾರ್ಥನೆ ಕೊಡುಗೆ ನೀಡಲಿದೆ ಎಂದು ನಾವು ಭಾವಿಸುತ್ತೇವೆ ಎಂದು ಅವರು ಹೇಳಿದ್ದಾರೆ.

 

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...